Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಬಿಕ್ಕಟ್ಟಿನ ನಡುವೆ ಏಳು...

ಕೋವಿಡ್ ಬಿಕ್ಕಟ್ಟಿನ ನಡುವೆ ಏಳು ವರ್ಷಗಳಲ್ಲಿ ಮೊದಲ ಬಾರಿ ಹೊಸ ಕನಿಷ್ಠ ಮಟ್ಟಕ್ಕೆ ಕುಸಿದ ಮೋದಿ ಜನಪ್ರಿಯತೆ

ವಾರ್ತಾಭಾರತಿವಾರ್ತಾಭಾರತಿ19 May 2021 9:20 PM IST
share
ಕೋವಿಡ್ ಬಿಕ್ಕಟ್ಟಿನ ನಡುವೆ ಏಳು ವರ್ಷಗಳಲ್ಲಿ ಮೊದಲ ಬಾರಿ ಹೊಸ ಕನಿಷ್ಠ ಮಟ್ಟಕ್ಕೆ ಕುಸಿದ ಮೋದಿ ಜನಪ್ರಿಯತೆ

ಹೊಸದಿಲ್ಲಿ,ಮೇ 19: ಕೊರೋನ ವೈರಸ್ ಸಾಂಕ್ರಾಮಿಕದ ನಡುವೆ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದರವು ಹೊಸ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ಭಾರತದ ಸಿ-ವೋಟರ್ ಮತ್ತು ಅಮೆರಿಕದ ಮಾರ್ನಿಂಗ್ ಕನ್ಸಲ್ಟ್ ನಡೆಸಿರುವ ಸಮೀಕ್ಷೆಗಳು ಹೇಳಿವೆ.

 ಸಿ-ವೋಟರ್ ಸಮೀಕ್ಷೆಯಲ್ಲಿ ಭಾಗಿಯಾಗಿದ್ದ ಕೇವಲ ಶೇ.37ರಷ್ಟು ಜನರು ಮೋದಿ ಆಡಳಿತವು ತಮಗೆ ತೃಪ್ತಿ ನೀಡಿದೆ ಎಂದು ಹೇಳಿದ್ದಾರೆ. 2020ರಲ್ಲಿ ಮೋದಿ ಆಡಳಿತದಿಂದ ಶೆ.65ರಷ್ಟು ಜನರು ತೃಪ್ತಿ ಪಟ್ಟುಕೊಂಡಿದ್ದು,ಇದಕ್ಕೆ ಹೋಲಿಸಿದರೆ ಮೋದಿ ಜನಪ್ರಿಯತೆಯಲ್ಲಿ ಭಾರೀ ಕುಸಿತವುಂಟಾಗಿದೆ.


 ಈ ವಾರ ಮೋದಿಯವರ ಒಟ್ಟಾರೆ ಜನಪ್ರಿಯತೆ ದರವು ಶೇ.63ರಷ್ಟಿದ್ದು,ಅವರನ್ನು ಮೆಚ್ಚದವರ ಪ್ರಮಾಣ ಶೇ.31ರಷ್ಟಿದೆ ಎಂದು ಹಲವಾರು ವಿಶ್ವ ನಾಯಕರ ಜನಪ್ರಿಯತೆಯ ಮೇಲೆ ನಿಗಾಯಿರಿಸುವ ಮಾರ್ನಿಂಗ್ ಕನ್ಸಲ್ಟ್ ಹೇಳಿದೆ. ಎಪ್ರಿಲ್ನಲ್ಲಿ ಮೋದಿಯವರ ಜನಪ್ರಿಯತೆ ದರವು 22 ಅಂಶಗಳಷ್ಟು ಇಳಿದಿದ್ದು, ಅದು ಅವರ ಜನಪ್ರಿಯತೆಯಲ್ಲಿ ಬೃಹತ್ ಕುಸಿತಕ್ಕೆ ಸಾಕ್ಷಿಯಾಗಿತ್ತು. ಮಾರ್ನಿಂಗ್ ಕನ್ಸಲ್ಟ್ 2019 ಎಪ್ರಿಲ್ನಿಂದ ಮೋದಿಯವರ ಜನಪ್ರಿಯತೆಯ ಮೇಲೆ ನಿಗಾ ಆರಂಭಿಸಿತ್ತು.

ಹೀಗಾಗಿ,ಇವೆರಡೂ ಸಮೀಕ್ಷೆಗಳ ದತ್ತಾಂಶಗಳ ಆಧಾರದಲ್ಲಿ ಏಳು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೋದಿ ಸರಕಾರದ ಆಡಳಿತದ ಬಗ್ಗೆ ಅಸಮಾಧಾನ ಹೊಂದಿದವರ ಸಂಖ್ಯೆ ತೃಪ್ತಿ ವ್ಯಕ್ತಪಡಿಸಿದವರಿಗಿಂತ ಹೆಚ್ಚಾಗಿದೆ.

ಮೋದಿಯವರು ತನ್ನ ವೃತ್ತಿಜೀವನದಲ್ಲಿಯ ಅತ್ಯಂತ ದೊಡ್ಡ ರಾಜಕೀಯ ಸವಾಲನ್ನು ಎದುರಿಸುತ್ತಿದ್ದಾರೆ ಎಂದು ಸಿ-ವೋಟರ್ ಸ್ಥಾಪಕ ಯಶವಂತ ದೇಶಮುಖ ವರದಿಯಲ್ಲಿ ಹೇಳಿದ್ದಾರೆ. ಆದರೆ ಮೋದಿಯವರ ಜನಪ್ರಿಯತೆ ದರದಲ್ಲಿ ಕುಸಿತವಾಗಿದ್ದರೂ ಅವರು ಭಾರತೀಯ ರಾಜಕಾರಣದಲ್ಲಿ ಅತ್ಯಂತ ಜನಪ್ರಿಯ ಮುಖವಾಗಿ ಉಳಿದುಕೊಂಡಿದ್ದಾರೆ ಎಂದು ಸಿ-ವೋಟರ್ ದತ್ತಾಂಶಗಳು ತೋರಿಸಿವೆ.

ಕೋವಿಡ್-2ನೇ ಅಲೆಯಿಂದಾಗಿ ದೇಶದಲ್ಲಿಯ ಸ್ಥಿತಿ ಮತ್ತು ಈ ಅವಧಿಯಲ್ಲಿ ತಪ್ಪು ನಿರ್ವಹಣೆ ಮೋದಿ ಸರಕಾರದ ಜನಪ್ರಿಯತೆ ಕುಸಿಯಲು ಕಾರಣವೆಂದು ಈ ವರದಿಗಳು ಹೇಳಿವೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X