Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ವೈದ್ಯಕೀಯ ಸೌಲಭ್ಯ ಒದಗಿಸದ...

​ವೈದ್ಯಕೀಯ ಸೌಲಭ್ಯ ಒದಗಿಸದ ಕಾಂಗ್ರೆಸ್‌ನಿಂದ ಮೋದಿ ಟೀಕೆ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ವಾರ್ತಾಭಾರತಿವಾರ್ತಾಭಾರತಿ20 May 2021 3:21 PM IST
share
​ವೈದ್ಯಕೀಯ ಸೌಲಭ್ಯ ಒದಗಿಸದ ಕಾಂಗ್ರೆಸ್‌ನಿಂದ ಮೋದಿ ಟೀಕೆ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಮಂಗಳೂರು, ಮೇ 20: ದೇಶದಲ್ಲಿ 73 ವರ್ಷ ಕಾಲ ಆಡಳಿತದ ನಡೆಸಿದ ಕಾಂಗ್ರೆಸ್, ದೇಶದ ಜನಸಂಖ್ಯೆಗೆ ಅಗತ್ಯವಿರುವಷ್ಟು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿಲ್ಲ. ಹಾಗಾಗಿಯೇ ಚೀನಾದ ಕಮ್ಯುನಿಸ್ಟ್ ಪಕ್ಷ ಜೊತೆ ಕಾಂಗ್ರೆಸ್ ಒಡಂಬಡಿಕೆ ಮಾಡಿಕೊಂಡ ಕಾರಣ ಚೀನಾವನ್ನು ಟೀಕಿಸುತ್ತಿಲ್ಲ. ಇದರ ಬದಲು ಕೋವಿಡ್ 2ನೇ ಅಲೆಗೆ ಭಾರತ/ ಪ್ರಧಾನಿ ಮೋದಿಯೇ ಕಾರಣ ಎಂದು ಆರೋಪಿಸುತ್ತಿದೆ ಎಂದುರಾಜ್ಯ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.

ಮಂಗಳೂರಿನ ಅಟಲ್ ಸೇವಾ ಕೇಂದ್ರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಅವರ ದೂರದರ್ಶಿತ್ವ ಹಾಗೂ ನಾಯಕತ್ವದಿಂದ ಜಗತ್ತಿನ ರಾಷ್ಟ್ರಗಳು ಭಾರತಕ್ಕೆ ಬೇಕಾದ ಎಲ್ಲ ರೀತಿಯ ಔಷಧೀಯ ಹಾಗೂ ಲಸಿಕೆ ಸೌಲಭ್ಯವನ್ನು ರವಾನಿಸಲು ಮುಂದೆ ಬಂದಿವೆ ಎಂದು ಕ್ಯಾ.ಕಾರ್ಣಿಕ್ ಹೇಳಿದರು.

ಅವಕಾಶವಾದಿ ರಾಜಕಾರಣಕ್ಕಾಗಿ ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಉಂಟುಮಾಡಲು ಷಡ್ಯಂತರ ರೂಪಿಸಿದ ಭಾಗವೇ ಟೂಲ್ ಕಿಟ್. ಈ ಬಗ್ಗೆ ತನಿಖಾ ಸಂಸ್ಥೆಗಳು ಸಮಗ್ರ ತನಿಖೆ ನಡೆದು ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಹೇಳಿದರು.

ಕೋವಿಡ್‌ನ ಈ ಸಂಕಷ್ಟ ಸಮಯದಲ್ಲಿ ಸಂತ್ರಸತಿರಿಗೆ ನೆರವಾಗುವ ಬದಲು ದೇಶದಲ್ಲಿ ಆಂತರಿಕ ಹಾಗೂ ಭಯದ ವಾತಾವರಣ ಸೃಷ್ಟಿ ಮಾಡಲು ಹೊರಟಿರುವುದು ಖಂಡನೀಯ. ಕಳೆದ ಆರು ತಿಂಗಳಿಂದ ಕಾಂಗ್ರೆಸ್‌ನ ಮನಸ್ಥಿತಿ ಅಧಿಕಾರ ಇಲ್ಲದೆ ಬದಲಾಗಿದ್ದು, ಟೂಲ್ ಕಿಟ್‌ನಂತೆ ಅದರ ಇಕೋ ಸಿಸ್ಟಮ್ ಕೂಡ ಕೆಲಸ ಮಾಡುತ್ತಿರುವುದು ಜಗಜ್ಜಾಹೀರಾಗಿದೆ. ಕಾಂಗ್ರೆಸ್‌ನ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೋವಿಡ್ ಸಂದರ್ಭದಲ್ಲಿ ತಮ್ಮ ಕ್ಷೇತ್ರಗಳಿಗೆ ತೆರಳದೆ, ಬೆಂಗಳೂರಲ್ಲೇ ಕೂತು ಇಂತಹ ಕಾರ್ಯತಂತ್ರ ಹೆಣೆಯುತ್ತಿದ್ದಾರೆ ಎಂದು ಆರೋಪಿಸಿದರು.

ಕೋವಿಡ್ ಕೇರ್ ನಿಧಿಗೆ 100 ಕೋಟಿ ರೂ. ನೀಡುವುದಾಗಿ ಕಾಂಗ್ರೆಸ್ ನಾಯಕರು ಬೊಗಳೆ ಬಿಟ್ಟಿದ್ದಾರೆ. ಈಗಾಗಲೇ ಸಂಸದರ ನಿಧಿಯನ್ನು ಕೋವಿಡ್‌ಗೆ ನೀಡುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಸಿಎಂ ಕೂಡ ಪ್ರದೇಶಾಭಿವೃದ್ಧಿ ನಿಧಿ ನೀಡುವಂತೆ ಎಲ್ಲ ಶಾಸಕರಿಗೆ ವಿನಂತಿಸಿ ದ್ದಾರೆ. ಅದನ್ನೇ ಕಾಂಗ್ರೆಸ್ ನಾಯಕರು ಹೇಳಿದ್ದಾರೆಯೇ ಹೊರತು ಅವರ ಪಕ್ಷದ ಮೊತ್ತ ನೀಡುತ್ತಿಲ್ಲ. ಇಂತಹ ಹೇಳಿಕೆ ನೀಡುವ ಮೂಲಕ ಕಾಂಗ್ರೆಸಿಗರು ಜನತೆಯ ಹಾದಿತಪ್ಪಿಸುತ್ತಿದ್ದಾರೆ ಎಂದು ಕ್ಯಾ. ಗಣೇಶ್ ಕಾರ್ಣಿಕ್ ಆರೋಪಿಸಿದರು.

ಮುಖಂಡರಾದ ರವಿಶಂಕರ ಮಿಜಾರ್, ಸುಧೀರ್ ಶೆಟ್ಟಿ ಕಣ್ಣೂರು, ಜಗದೀಶ್ ಶೇಣವ, ರಾಧಾಕೃಷ್ಣ, ರಣದೀಪ್ ಕಾಂಚನ್ ಇದ್ದರು.

ಸಿಎಂ ಬದಲಾವಣೆ ಪ್ರಶ್ನೆ ಇಲ್ಲ

ರಾಜ್ಯದಲ್ಲಿ ಸಿಎಂ ಬದಲಾವಣೆ ಎಂಬ ಸುದ್ದಿ ಕಳೆದ ಒಂದು ವರ್ಷದಿಂದ ಕೇಳಿಬರುತ್ತಲೇ ಇದೆ. ಹಾಗೆಂದು ರಾಜ್ಯ ಅಥವಾ ಕೇಂದ್ರ ನಾಯಕತ್ವ ಎಲ್ಲಿಯೂ ಸಿಎಂ ಬದಲಾವಣೆ ಮಾಡುತ್ತದೆ ಎಂದು ಹೇಳಿಲ್ಲ, ಅಂತಹ ಅನಿವಾರ್ಯತೆಯೂ ಈಗ ಇಲ್ಲ ಎಂದು ಬಿಜೆಪಿ ಕ್ಯಾ.ಗಣೇಶ್ ಕಾರ್ಣಿಕ್ ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X