Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಬಿಸಿ ವರ್ಲ್ಡ್ ನ ಮಾದರಿಯಲ್ಲಿ ಜಾಗತಿಕ...

ಬಿಬಿಸಿ ವರ್ಲ್ಡ್ ನ ಮಾದರಿಯಲ್ಲಿ ಜಾಗತಿಕ ಟಿವಿ ಚಾನೆಲ್ ಆರಂಭಕ್ಕೆ ಕೇಂದ್ರದ ಚಿಂತನೆ: ವರದಿ

ವಾರ್ತಾಭಾರತಿವಾರ್ತಾಭಾರತಿ20 May 2021 11:15 PM IST
share
ಬಿಬಿಸಿ ವರ್ಲ್ಡ್ ನ ಮಾದರಿಯಲ್ಲಿ ಜಾಗತಿಕ ಟಿವಿ ಚಾನೆಲ್ ಆರಂಭಕ್ಕೆ ಕೇಂದ್ರದ ಚಿಂತನೆ: ವರದಿ

ಹೊಸದಿಲ್ಲಿ, ಮೇ 20: ಪ್ರಮುಖ ಜಾಗತಿಕ ಮತ್ತು ದೇಶೀಯ ವಿಷಯಗಳ ಕುರಿತು ಭಾರತದ ಅಭಿಪ್ರಾಯವನ್ನು ಪ್ರಸ್ತುತಪಡಿಸುವ ಉದ್ದೇಶದಿಂದ, ಬಿಬಿಸಿ ವರ್ಲ್ಡ್ ಚಾನೆಲ್ನ ಮಾದರಿಯಲ್ಲಿ ‘ಡಿಡಿ ಇಂಟರ್ನ್ಯಾಷನಲ್’ ಎಂಬ ಹೊಸ ಟಿವಿ ಚಾನೆಲ್ ಆರಂಭಿಸಲು ಕೇಂದ್ರ ಸರಕಾರ ಯೋಜನೆ ರೂಪಿಸಿದೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಪ್ರಸಾರ ಭಾರತಿ ಕರಡು ಆಸಕ್ತಿ ಪಟ್ಟಿ(ಇಒಐ)ಯನ್ನು ಜಾರಿಗೊಳಿಸಿದ್ದು ಖಾಸಗಿ ಸಂಸ್ಥೆಗಳಿಂದ ಅಭಿಪ್ರಾಯ ಆಹ್ವಾನಿಸಿದೆ. ‌

ಈ ಅಭಿಪ್ರಾಯವನ್ನು ಆಧರಿಸಿ ಕರಡು ಪಟ್ಟಿಯನ್ನು ಅಂತಿಮಗೊಳಿಸಿ ಬಳಿಕ, ಚಾನೆಲ್ ಆರಂಭದ ಬಗ್ಗೆ ವಿವರವಾದ ಯೋಜನಾ ವರದಿ ಸಲ್ಲಿಸಲು ಆಸಕ್ತ ಖಾಸಗಿ ಸಂಸ್ಥೆಗಳಿಂದ ಬಿಡ್ ಆಹ್ವಾನಿಸಲಾಗುತ್ತದೆ. ಈ ಹೊಸ ಚಾನೆಲ್, ಬಿಬಿಸಿ ವರ್ಲ್ಡ್ ಚಾನೆಲ್ನಂತೆ ಕೇವಲ ಜಾಗತಿಕ ಚಾನೆಲ್ ಆಗಿ ಕಾರ್ಯನಿರ್ವಹಿಸಲಿದೆ ಮತ್ತು ಕೇವಲ ಭಾರತೀಯ ವೀಕ್ಷಕರಲ್ಲದೆ ಜಾಗತಿಕ ವೀಕ್ಷಕರೂ ಇದನ್ನು ವೀಕ್ಷಿಸಬೇಕೆಂಬ ಉದ್ದೇಶ ಹೊಂದಲಾಗಿದೆ ಎಂದು ಪ್ರಸಾರ ಭಾರತಿಯ ಮೂಲಗಳನ್ನು ಉಲ್ಲೇಖಿಸಿ "ದಿ ಪ್ರಿಂಟ್’ ವರದಿ ಮಾಡಿದೆ.
 
ಅಮೆರಿಕ ಸರಕಾರದ ಅನುದಾನಿತ ಸಂಸ್ಥೆ ‘ಫ್ರೀಡಂ ಹೌಸ್’ ಭಾರತದ ಸ್ಥಾನಮಾನವನ್ನು "ಮುಕ್ತ’ದಿಂದ ‘ಭಾಗಶಃ ಮುಕ್ತ’ ಹಂತಕ್ಕೆ ಇಳಿಸಿದ ಬಳಿಕ, ಭಾರತವೂ ಜಾಗತಿಕ ಮಾಧ್ಯಮ ಸ್ವಾತಂತ್ರ್ಯ ಶ್ರೇಯಾಂಕ ನೀಡುವ ಮತ್ತು ಜಾಗತಿಕ ಪ್ರಜಾತಾಂತ್ರಿಕ ವರದಿ ನೀಡುವ ಟಿವಿ ವಾಹಿನಿಯೊಂದನ್ನು ಹೊಂದಿರಬೇಕು ಎಂದು ಕೇಂದ್ರ ಸರಕಾರ ನಿರ್ಧರಿಸಿದೆ. ಭಾರತದ ಸ್ವತಂತ್ರ ಚಿಂತಕರ ಚಾವಡಿಯ ಮೂಲಕ ಎರಡು ಹೊಸ ವಾಹಿನಿಗಳನ್ನು ಆರಂಭಿಸುವ ಕುರಿತು ವಿದೇಶ ವ್ಯವಹಾರ ಇಲಾಖೆ ಈಗಾಗಲೇ ಮಾತುಕತೆ ನಡೆಸಿದೆ ಎಂದು ಸುದ್ಧಿಸಂಸ್ಥೆ ವರದಿ ಮಾಡಿದೆ.
 
ಈ ವರ್ಷದ ಮಾರ್ಚ್ನಲ್ಲಿ ಅಮೆರಿಕದ ಫ್ರೀಡಂ ಹೌಸ್ ಸಂಸ್ಥೆ ‘ಭಾರತದಲ್ಲಿ ಅಭಿಪ್ರಾಯ ಮತ್ತು ವಾಕ್ ಸ್ವಾತಂತ್ರ್ಯ ವನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಆದ್ದರಿಂದ ಭಾರತದ ಸ್ಥಾನಮಾನವನ್ನು "ಮುಕ್ತ’ದಿಂದ ಭಾಗಶಃ ಮುಕ್ತ ಹಂತಕ್ಕೆ ಇಳಿಸಲಾಗುತ್ತದೆ. ಅಲ್ಲದೆ ರಾಜಕೀಯ ಮತ್ತು ನಾಗರಿಕ ಹಕ್ಕುಗಳ ವಿಷಯದಲ್ಲಿ, ದೇಶದಲ್ಲಿ ಮುಸ್ಲಿಮರು ಎದುರಿಸುತ್ತಿರುವ ಸಮಸ್ಯೆಯ ಆಧಾರದಲ್ಲಿ ಭಾರತದ ಜಾಗತಿಕ ಸ್ವಾತಂತ್ರ್ಯ ಅಂಕ 100ರಲ್ಲಿ 67 ಮಾತ್ರ ಎಂದು ವರದಿ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X