ಕೋಡ್ ಕೇರ್ ಸೆಂಟರ್ಗೆ ಸ್ಥಳಾಂತರ ತಡೆದರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ಜಗದೀಶ್ ಎಚ್ಚರಿಕೆ
ಉಡುಪಿ, ಮೇ 21: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಈವರೆಗೆ ಕಂಡುಬಂದ ಎಲ್ಲಾ ಪ್ರಕರಣಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವ ಅವಶ್ಯಕತೆ ಕಂಡುಬಂದಿಲ್ಲ. ಅಲ್ಲದೇ ಅಸ್ಪತ್ರೆಗಳಲ್ಲಿ ಲಭ್ಯರುವ ಬೆಡ್ಗಳು ಸೀಮಿತ ಸಂಖ್ಯೆಯಲ್ಲಿರುವುದರಿಂದ ರೋಗಲಕ್ಷಣ ತೀವ್ರವಿರುವ ಮತ್ತು ಆಸ್ಪತ್ರೆಯ ಆರೈಕೆ ಅಗತ್ಯವಿರುವ ರೋಗಿಗಳಿಗೆ ಲಭ್ಯವಾಗುವ ರೀತಿಯಲ್ಲಿ ಮಾತ್ರ ಬೆಡ್ಗಳನ್ನು ಬಳಸಿಕೊಳ್ಳಲಾಗುತ್ತಿದೆ.
ಸರಕಾರ, ಕೋವಿಡ್-19 ಪಾಸಿಟಿವ್ ರೋಗಿಗಳನ್ನು ಪರೀಕ್ಷಿಸಲು, ವೈದ್ಯಕೀಯ ನೆರವಿನ ಅಗತ್ಯತೆಯನ್ನು ಪರಿಶೀಲಿಸಿ ಅಸ್ಪತ್ರೆಗೆ ದಾಖಲಿಸು ವುದು ಅವಶ್ಯಕವೆನಿಸಿದಲ್ಲಿ ಮಾತ್ರವೇ ಆಸ್ಪತ್ರೆಗಳಲ್ಲಿ ಲಭ್ಯರುವ ಬೆಡ್ಗಳ ಅಧಾರದ ಮೇಲೆ ಆಸ್ಪತ್ರೆಗೆ ದಾಖಲಿಸುವಂತೆ ಹಾಗೂ ಉಳಿದ ಪ್ರಕರಣಗಳಲ್ಲಿ ರೋಗಿಯ ಮನೆಯಲ್ಲಿಯೇ ಲಭ್ಯವಿರುವ ಸೌಲಭ್ಯಗಳ ಆಧಾರದ ಮೇಲೆ ಹೋಮ್ ಐಸೋಲೆಷನ್ (ಮನೆ ಪ್ರತ್ಯೇಕತೆ) ಅಥವಾ ಸಾಂಸ್ಥಿಕ ಪ್ರತ್ಯೇಕತೆಯನ್ನು ನೀಡುವುದು ಸೂಕ್ತವೆಂದು ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಉಡುಪಿಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗುತ್ತಿದ್ದು, ಈ ಮಧ್ಯೆ ಮನೆಯಲ್ಲಿ ಅಗತ್ಯವಾದ ಸೌಲಭ್ಯಗಳಿ ಲ್ಲದಿದ್ದರೂ ಸಾಂಸ್ಥಿಕ ಐಸೋಲೇಷನ್ (ಸಾಂಸ್ಥಿಕ ಪ್ರತ್ಯೇಕತೆ) ಮಾಡಿಸಿಕೊಳ್ಳಲು ನಿರಾಕರಿಸುತ್ತಿರುವ ಹಾಗೂ ರೋಗಿಗಳಿಂದ ಪ್ರತಿರೋಧ ಎದುರಾಗುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ ಹೇಳಿದ್ದಾರೆ.
ರೋಗಿಗಳು ಸಾಂಸ್ಥಿಕ ಪ್ರತ್ಯೇಕತೆಗೆ ಪ್ರತಿರೋಧ ವ್ಯಕ್ತಪಡಿಸುವುದರಿಂದ ರೋಗಿಯ ಮನೆಮಂದಿಗೆಲ್ಲ ರೋಗ ತಗಲುವ ಸಂಭವ ಅಧಿಕ ವಾಗಿದ್ದು, ಕೋವಿಡ್-19 ಪಾಸಿಟಿವ್ ಪ್ರಕರಣಗಳು ಅಲ್ಪ ಸಮಯದಲ್ಲಿ ಹೆಚ್ಚಾಗಿ, ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಸಂಖ್ಯೆ ಹಾಗೂ ಆಸ್ಪತ್ರೆಗಳ ಬೆಡ್ ಗಳಿಗೆ ಬೇಡಿಕೆ ಹೆಚ್ಚಾಗಿ, ಬೆಡ್ಗಳ ಕೊರತೆ ಉಂಟಾಗುವ ಸಾಧ್ಯತೆ ಇರುತ್ತದೆ. ಇದು ಗಂಭೀರ ವಿಚಾರವಾಗಿರುವುದರಿಂದ, ಈಗಲೇ ಎಚ್ಚರ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಕಾರ್ಯಾಚರಣೆಗೆ ಗಂಭೀರ ಸಮಸ್ಯೆ ಎದುರಾಗಬಹುದಾಗಿದೆ.
ಅಲ್ಲದೇ ಅಸ್ಪತ್ರೆಗಳಲ್ಲಿ ಬೆಡ್ಗಳನ್ನು ಆಶ್ರಯಿಸಿ ಬರುವವರಸಂಖ್ಯೆ ಗಣನೀಯ ವಾಗಿ ಏರಿಕೆಯಾಗಿ, ಈಗಾಗಲೇ ಸೀಮಿತ ಸಂಖ್ಯೆಯಲ್ಲಿರುವ ಆಸ್ಪತ್ರೆ ಬೆಡ್ಗಳು ಸರಿಯಾದ ಸಮಯದಲ್ಲಿ ಲಭ್ಯವಾಗದೇ ಸಾವಿನ ಪ್ರಮಾಣ ಹೆಚ್ಚಾಗಬಹುದಾದ ಸಂಭವವಿರುತ್ತದೆ.ಆದ್ದರಿಂದ ಆರೋಗ್ಯ ಪ್ರಾಧಿಕಾರಗಳು/ವಾರ್ಡ್ ಕಾರ್ಯ ಪಡೆ/ ಗ್ರಾಮ ಕಾರ್ಯಪಡೆಯ ಅಭಿಪ್ರಾಯದಂತೆ ಮನೆಯ ಪ್ರತ್ಯೇಕತೆಗೆ ಅಗತ್ಯವಾದ ಸೌಲಭ್ಯಗಳನ್ನು ಮನೆಗಳಲ್ಲಿ ಹೊಂದಿರದ ಕೋವಿಡ್-19 ರೋಗಿ ಗಳು ಸಾಂಸ್ಥಿಕ ಪ್ರತ್ಯೇಕತೆಗೆ (ಕೋವಿಡ್ ಕೇರ್ ಸೆಂಟರ್) ಕ್ಡಾಯವಾಗಿ ಸ್ಥಳಾಂತರ ಗೊಳ್ಳಬೇಕು.
ಆದರೆ ಇಂತಹ ರೋಗಿಗಳ ಸ್ಥಳಾಂತರವನ್ನು ತಡೆಯುವ, ವಿರೋಧಿಸುವ, ಪ್ರತಿರೋಧಿಸುವ ಯಾವುದೇ ವ್ಯಕ್ತಿಯ ಅಥವಾ ರೋಗಿಯ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ-2005, ಸಾಂಕ್ರಾಮಿಕ ನಿಯಂತ್ರಣ ಕಾಯ್ದೆ 2020 ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.







