Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಾಂಗ್ರೆಸ್ ಮುಖಂಡರೇ, ಸೇವೆಯ ಹೆಸರಲ್ಲಿ...

ಕಾಂಗ್ರೆಸ್ ಮುಖಂಡರೇ, ಸೇವೆಯ ಹೆಸರಲ್ಲಿ ಜನರನ್ನು ವಂಚಿಸುವವರ ಬಲೆಗೆ ಬೀಳಬೇಡಿ

ವಿಘ್ನೇಶ್ ಎಸ್., ಬೆಂಗಳೂರುವಿಘ್ನೇಶ್ ಎಸ್., ಬೆಂಗಳೂರು21 May 2021 11:00 PM IST
share

ಮಾನ್ಯರೇ,

ಗುರುವಾರ ಬೆಂಗಳೂರಿನ ಚಿನ್ನಾಭರಣ ಸಂಸ್ಥೆಯೊಂದು ಕಾಂಗ್ರೆಸ್ ಪಕ್ಷದ ಮೂಲಕ ಕೊರೋನ ಸೋಂಕಿತರ ನೆರವಿಗೆ 25 ಲಕ್ಷ ರೂ. ಮೌಲ್ಯದ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ವಿತರಿಸಿದ ಕಾರ್ಯಕ್ರಮವೊಂದನ್ನು ನಡೆಸಿದೆ. ಲಾಕ್‌ಡೌನ್ ಸಂದರ್ಭದಲ್ಲೇ ಆ ಸಂಸ್ಥೆಯ ಸಭಾಂಗಣದಲ್ಲೇ ನಡೆದ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕರಾದ ಝಮೀರ್ ಅಹ್ಮದ್ ಖಾನ್, ಎನ್. ಎ. ಹಾರಿಸ್ ಮತ್ತಿತರ ಕಾಂಗ್ರೆಸ್‌ನ ಪ್ರಮುಖ ಮುಖಂಡರು ಭಾಗವಹಿಸಿದ್ದಾರೆ. ಐಎಂಎ ಎಂಬ ಹೂಡಿಕೆ ಕಂಪೆನಿ ಹಾಗೂ ಚಿನ್ನಾಭರಣ ಮಳಿಗೆಯೊಂದು ಮುಳುಗಿ ಸಾವಿರಾರು ಜನರ ಕೋಟ್ಯಂತರ ರೂ. ವಂಚಿಸಿದ ಪ್ರಕರಣ ನಡೆದು ಹೆಚ್ಚು ಸಮಯ ಕಳೆದಿಲ್ಲ. ಬಡ, ಕೆಳ ಮಧ್ಯಮ ಹಾಗೂ ಮಧ್ಯಮ ವರ್ಗದ ಸಾವಿರಾರು ಜನರು ಸಾವಿರಾರು ಕೋಟಿ ರೂ.ಯನ್ನು ಆ ಹಗರಣದಲ್ಲಿ ಕಳಕೊಂಡಿದ್ದಾರೆ. ಆ ಹಗರಣದ ಪ್ರಧಾನ ಆರೋಪಿ ಜೊತೆ ಕಾಂಗ್ರೆಸ್‌ನ ಕೆಲವು ಮುಖಂಡರು ಸಂಪರ್ಕದಲ್ಲಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು. ಈಗ ಮತ್ತೆ ಕಾಂಗ್ರೆಸ್‌ನ ಎಲ್ಲ ಘಟಾನುಘಟಿ ನಾಯಕರು ಇನ್ನೊಂದು ಚಿನ್ನಾಭರಣ ವ್ಯಾಪಾರದ ಹೆಸರಲ್ಲಿ ನಡೆಯುವ ಸಂಸ್ಥೆ ಹಾಗೂ ಅದರ ಮಾಲಕನ ಪಕ್ಕದಲ್ಲಿ ಹೋಗಿ ನಿಂತುಕೊಂಡಿದ್ದಾರೆ.

ಇವರ ಹಿಂದೆ ಆತನ ಆಳೆತ್ತರದ ಫೋಟೊ ರಾರಾಜಿಸುತ್ತಿದೆ. ಈ ಚಿನ್ನಾಭರಣ ಸಂಸ್ಥೆ ಹಾಗೂ ಇದರ ಮಾಲಕನ ವಿವರಗಳನ್ನು ನೋಡಿದರೆ ಯಾರಿಗೂ ಹೆಚ್ಚು ವಿಶ್ವಾಸ ಮೂಡುವುದಿಲ್ಲ. ಆ ವ್ಯಕ್ತಿಯ ವ್ಯಾಪಾರದ ವಿಧಾನ, ಆತ ಪಡೆದುಕೊಳ್ಳುವ ಪ್ರಚಾರ, ಆತನ ವರಸೆ, ಆತನ ಉದ್ದೇಶ ಇವೆಲ್ಲವೂ ಸಂಶಯಾಸ್ಪದವಾಗಿವೆ. ಈಗ ಕೊರೊನ ಸಂಕಷ್ಟದ ಸಂದರ್ಭವನ್ನು ಬಳಸಿಕೊಂಡು ಕಾಂಗ್ರೆಸ್‌ಗೆ ಹತ್ತಿರವಾಗಿ ಸಮಾಜ ಸೇವಾ ಚಟುವಟಿಕೆ ಮೂಲಕ ಜನರನ್ನು ಸೆಳೆಯುವ ಪ್ರಯತ್ನ ನಡೆಯುತ್ತಿರುವಂತೆ ಕಾಣುತ್ತಿದೆ. ಇದಕ್ಕೆ ಕಾಂಗ್ರೆಸ್ ಮುಖಂಡರು ಸುಲಭವಾಗಿ ಸಹಕರಿಸಿದ್ದಾರೆ. ಈ ಹಿರಿಯ ನಾಯಕರು ಆತನ ಸಂಸ್ಥೆಗೆ ಹೋಗಿ ನಿಂತು ಫೋಟೊಕ್ಕೆ ಪೋಸು ಕೊಟ್ಟಿದ್ದನ್ನು ನೋಡಿ ನಾಳೆ ಆ ಸಂಸ್ಥೆಯಲ್ಲಿ ಜನರು ತಮ್ಮ ಇದ್ದ ಬದ್ದ ಉಳಿತಾಯದ ಹಣವನ್ನು ಹೂಡಿಕೆ ಮಾಡಿ ಏನಾದರೂ ಅನಾಹುತವಾದರೆ ಅದಕ್ಕೆ ಇದೇ ಕಾಂಗ್ರೆಸ್ ನಾಯಕರು ಹೊಣೆಯಾಗುತ್ತಾರೆ. ಆ ಅರಿವು ಅವರಿಗೆ ಇರಬೇಕು.

share
ವಿಘ್ನೇಶ್ ಎಸ್., ಬೆಂಗಳೂರು
ವಿಘ್ನೇಶ್ ಎಸ್., ಬೆಂಗಳೂರು
Next Story
X