Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಸಿಕೆ ರಫ್ತಿನ ಮೇಲೆ ಭಾರತದ...

ಲಸಿಕೆ ರಫ್ತಿನ ಮೇಲೆ ಭಾರತದ ನಿಷೇಧದಿಂದಾಗಿ ಅಭಿವೃದ್ಧಿಶೀಲ ದೇಶಗಳಿಗೆ ತೊಂದರೆ: ಐಎಂಎಫ್

ವಾರ್ತಾಭಾರತಿವಾರ್ತಾಭಾರತಿ21 May 2021 11:09 PM IST
share
ಲಸಿಕೆ ರಫ್ತಿನ ಮೇಲೆ ಭಾರತದ ನಿಷೇಧದಿಂದಾಗಿ ಅಭಿವೃದ್ಧಿಶೀಲ ದೇಶಗಳಿಗೆ ತೊಂದರೆ: ಐಎಂಎಫ್

 ಹೊಸದಿಲ್ಲಿ,ಮೇ 21: ಮುಂದಿನ ವರ್ಷದ ಮಧ್ಯದ ವೇಳೆಗೆ ವಿಶ್ವಾದ್ಯಂತ ಜನರಿಗೆ ಕೋವಿಡ್ನಿಂದ ರಕ್ಷಣೆ ಒದಗಿಸಲು ಲಸಿಕೆ ನೀಡಿಕೆಗಾಗಿ 50 ಶತಕೋಟಿ ಡಾ.ಗಳ ಯೋಜನೆಯೊಂದನ್ನು ಶುಕ್ರವಾರ ಅನಾವರಣಗೊಳಿಸಿದ ಅಂತರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ಯು, ಲಸಿಕೆಗಳ ರಫ್ತನ್ನು ನಿಷೇಧಿಸುವ ಭಾರತದ ನಿರ್ಧಾರದಿಂದಾಗಿ ಹಲವಾರು ಅಭಿವೃದ್ಧಿಶೀಲ ದೇಶಗಳು ತೊಂದರೆಗೆ ಸಿಲುಕಿವೆ ಎಂದು ಹೇಳಿದೆ.

ಈಗಾಗಲೇ ಭಾರತದ ಸೀರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಸೇರಿದಂತೆ ವಿವಿಧ ತಯಾರಕರು ಲಸಿಕೆಗಳ ಪೂರೈಕೆಯಲ್ಲಿ ಸಾಕಷ್ಟು ವಿಳಂಬ ಮಾಡಿದ್ದಾರೆ ಎಂದು ಹೇಳಿರುವ ಐಎಎಫ್ ನ ಮುಖ್ಯ ಆರ್ಥಿಕ ತಜ್ಞೆ ಗೀತಾ ಗೋಪಿನಾಥ್ ಮತ್ತು ಅವರ ಸಹೋದ್ಯೋಗಿ ರುಚಿರ್ ಅಗರವಾಲ್ ಸಿದ್ಧಪಡಿಸಿರುವ ವರದಿಯು, ಸ್ವದೇಶದಲ್ಲಿ ಲಸಿಕೆ ಅಭಿಯಾನಕ್ಕೆ ಆದ್ಯತೆ ನೀಡಲು ತನ್ನ ಹೆಚ್ಚಿನ ಲಸಿಕೆ ರಫ್ತುಗಳನ್ನು ಭಾರತವು ವಿಳಂಬಿಸಿದೆ. ಇಂತಹ ವಿಳಂಬಗಳು ಅಭಿವೃದ್ಧಿಶೀಲ ದೇಶಗಳ ಮೇಲೆ ತೀವ್ರ ಪ್ರತಿಕೂಲ ಪರಿಣಾಮಗಳನ್ನಂಟು ಮಾಡುತ್ತಿವೆ. ಉದಾಹರಣೆಗೆ ಕೋವ್ಯಾಕ್ಸ್ ಉಪಕ್ರಮಕ್ಕೆ ಶೇ.85ರಷ್ಟು ಲಸಿಕೆಗಳನ್ನು ಪೂರೈಸುವುದಾಗಿ ಸೀರಮ್ ಒಪ್ಪಂದವನ್ನು ಮಾಡಿಕೊಂಡಿತ್ತು ಮತ್ತು ಕಚ್ಚಾ ವಸ್ತುಗಳ ನಿರಂತರ ಕೊರತೆ ಹಾಗೂ ರಫ್ತು ನಿರ್ಬಂಧಗಳು ಈ ಉಪಕ್ರಮವನ್ನು ನಂಬಿಕೊಂಡಿರುವ 91 ಅಭಿವೃದ್ಧಿಶೀಲ ದೇಶಗಳ ಮತ್ತು ಭಾರತದ ನಾಲ್ಕು ಶತಕೋಟಿ ಜನತೆಗೆ ಲಸಿಕೆ ಲಭ್ಯತೆಯ ಅವಕಾಶವನ್ನು ತಗ್ಗಿಸುತ್ತವೆ ಎಂದು ತಿಳಿಸಿದೆ.

ಅಭಿವೃದ್ಧಿಶೀಲ ದೇಶಗಳಿಗೆ ಲಸಿಕೆಗಳನ್ನು ಒದಗಿಸುವ ಕೋವ್ಯಾಕ್ಸ್ ಉಪಕ್ರಮವು ಲಸಿಕೆಗಳನ್ನು ದೇಣಿಗೆಗಳನ್ನಾಗಿ ಸ್ವೀಕರಿಸಲು ಒಪ್ಪಿಕೊಂಡಿರುವ 90ಕ್ಕೂ ಅಧಿಕ ಕೆಳ ಮತ್ತು ಮಧ್ಯಮ ಆದಾಯ ದೇಶಗಳ ಕನಿಷ್ಠ ಶೇ.20ರಷ್ಟು ಜನರಿಗೆ ಲಸಿಕೆಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಅದು ಈವರೆಗೆ ಮುಖ್ಯವಾಗಿ ಆ್ಯಸ್ಟ್ರಾಝೆನೆಕಾ ಕೋವಿಡ್-19 ಲಸಿಕೆ ಸೇರಿದಂತೆ ಸುಮಾರು 65 ಮಿಲಿಯನ್ ಡೋಸ್ ಗಳನ್ನು ವಿತರಿಸಿದ್ದು,ಫಲಾನುಭವಿಗಳಲ್ಲಿ ಹೆಚ್ಚಿನವು ಆಫ್ರಿಕಾದ ದೇಶಗಳಾಗಿವೆ.
 
ಅಮೆರಿಕವು ತನ್ನ ಲಸಿಕೆ ಪೂರೈಕೆ ಸರಪಳಿಯ ಭದ್ರತೆಗಾಗಿ ರಕ್ಷಣಾ ಉತ್ಪಾದನೆ ಕಾಯ್ದೆಯಡಿ ಲಸಿಕೆಗಳ ರಫ್ತನ್ನು ನಿರ್ಬಂಧಿಸಿರುವುದೂ ವಿಶ್ವಾದ್ಯಂತ ಲಸಿಕೆ ಪೂರೈಕೆಯಲ್ಲಿ ವಿಳಂಬಕ್ಕೆ ಕೊಂಚ ಮಟ್ಟಿಗೆ ಕಾರಣವಾಗಿದೆ ಎಂದು ವರದಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X