Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 50% ಜನತೆ ಮಾಸ್ಕ್ ಧರಿಸುವುದಿಲ್ಲ:...

50% ಜನತೆ ಮಾಸ್ಕ್ ಧರಿಸುವುದಿಲ್ಲ: ಸಮೀಕ್ಷೆಯ ವರದಿಯಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ21 May 2021 11:11 PM IST
share
50% ಜನತೆ ಮಾಸ್ಕ್ ಧರಿಸುವುದಿಲ್ಲ: ಸಮೀಕ್ಷೆಯ ವರದಿಯಲ್ಲಿ ಉಲ್ಲೇಖ

ಹೊಸದಿಲ್ಲಿ, ಮೇ 21: ದೇಶದ ಅರ್ಧಾಂಶ ಜನತೆ ಮಾಸ್ಕ್ ಧರಿಸುವುದಿಲ್ಲ ಎಂಬುದು ಇತ್ತೀಚೆಗೆ ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿಯ(ಐಸಿಎಂಆರ್) ಮಹಾನಿರ್ದೇಶಕ ಬಲರಾಂ ಭಾರ್ಗವ ಹೇಳಿದ್ದಾರೆ. ಮಾಸ್ಕ್ ಧರಿಸುವ 50% ಜನರಲ್ಲಿ 64% ಜನತೆ ಮೂಗನ್ನು ಬಿಟ್ಟು ಬಾಯಿಯನ್ನು ಮಾತ್ರ ಮುಚ್ಚಿಕೊಳ್ಳುತ್ತಾರೆ. 20% ಜನ ಮಾಸ್ಕನ್ನು ತಮ್ಮ ಗಲ್ಲಕ್ಕೆ , 2% ಜನ ಕುತ್ತಿಗೆಯಲ್ಲಿ ನೇತಾಡಿಸುತ್ತಾರೆ ಎಂದವರು ಹೇಳಿದ್ದಾರೆ. 

ದೇಶದಾದ್ಯಂತದ 25 ನಗರಗಳ 2,000ಕ್ಕೂ ಅಧಿಕ ಜನರನ್ನು ಸಮೀಕ್ಷೆ ನಡೆಸಲಾಗಿದೆ ಎಂದವರು ಹೇಳಿದ್ದಾರೆ. ಜೂನ್ ಅಂತ್ಯದ ವೇಳೆಗೆ ಕೊರೋನ ಸೋಂಕು ದೈನಂದಿನ ಪರೀಕ್ಷೆಯ ಪ್ರಮಾಣವನ್ನು 45 ಲಕ್ಷಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ(ಈಗಿನ ಪ್ರಮಾಣ 16-20 ಲಕ್ಷ). ಇದರಲ್ಲಿ 18 ಲಕ್ಷ ಆರ್ಟಿ-ಪಿಸಿಆರ್ ಪರೀಕ್ಷೆ, ಉಳಿದವು ಆರ್ಎಟಿ ಪರೀಕ್ಷೆ. ಈ ಹಿನ್ನೆಲೆಯಲ್ಲಿ ಪುಣೆಯ ಮೈಲ್ಯಾಬ್ ಡಿಸ್ಕವರಿ ಸೊಲ್ಯೂಷನ್ಸ್ ಸಂಸ್ಥೆ ನಿರ್ಮಿಸಿರುವ ಮನೆಯಲ್ಲೇ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್(ಆರ್ಎಟಿ) ನಡೆಸುವ ಕಿಟ್ಗಳಿಗೆ ಅನುಮೋದನೆ ನೀಡಲಾಗಿದೆ. 

ಒಂದು ವಾರದೊಳಗೆ ಇನ್ನೂ ಮೂರು ಸಂಸ್ಥೆಗಳಿಗೆ ಆರ್ಎಟಿ ಕಿಟ್ ಪೂರೈಸಲು ಅನುಮೋದನೆ ನೀಡಲಾಗುವುದು. ಈ ಕಿಟ್ಗಳು ಮಾರುಕಟ್ಟೆಯಲ್ಲಿ 4 ದಿನದೊಳಗೆ ಲಭ್ಯವಾಗಲಿದೆ. ಜೊತೆಗೆ, 105 ಆರ್ಎಟಿ ಉತ್ಪಾದಿಸುವ ಸಂಸ್ಥೆಗಳ ಅರ್ಜಿಯನ್ನು ಪರಿಶೀಲಿಸಿ 41 ಸಂಸ್ಥೆಗಳಿಗೆ ಅನುಮೋದನೆ ನೀಡಲಾಗಿದೆ.

ಎಲ್ಲಾ ರಾಜ್ಯಗಳೂ ಆರ್ಎಟಿ ಕಿಟ್ಗಳಿಗೆ ಕಾರ್ಯಾದೇಶ(ಆರ್ಡರ್) ಸಲ್ಲಿಸಿದ್ದು ಶೀಘ್ರವೇ ದೈನಂದಿನ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸಲಿವೆ. ಮನೆಯಲ್ಲಿ ಪರೀಕ್ಷೆ ನಡೆಸುವವರು ಮೆಡಿಕಲ್ ಶಾಪ್ನಿಂದ ಕಿಟ್ ಖರೀದಿಸಬೇಕು. ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ನೋಂದಣಿ ಮಾಡಿಕೊಂಡರೆ ಕಿಟ್ ಬಳಸುವ ಬಗ್ಗೆ ಮಾರ್ಗಸೂಚಿ ಲಭಿಸುತ್ತದೆ. ಬಳಿಕ ಪರೀಕ್ಷೆ ನಡೆಸಿ, ಮೊಬೈಲ್ನಲ್ಲಿನ ಚಿತ್ರವನ್ನು ಕ್ಲಿಕ್ ಮಾಡಿ ಅಪ್ಲೋಡ್ ಮಾಡಿದರೆ ಪರೀಕ್ಷೆಯ ವರದಿ ಬರುತ್ತದೆ. ಈ ವರದಿ ಹಾಗೂ ವಿವರ ಗೌಪ್ಯವಾಗಿರುತ್ತದೆ ಮತ್ತು ಐಸಿಎಂಆರ್ನ ದತ್ತಾಂಶ ಸಂಗ್ರಹಕೋಶದಲ್ಲಿ ದಾಖಲಾಗುತ್ತದೆ. 

ಮಹಾ ನಗರಗಳಲ್ಲಿ ಆರ್ಟಿ ಪಿಸಿಆರ್ ಪರೀಕ್ಷೆಗೆ ಆದ್ಯತೆ ನೀಡಲಾಗುತ್ತದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಆರ್ಎಟಿ ಪರೀಕ್ಷೆ ನಡೆಸಲಾಗುವುದು. ಇದಕ್ಕಾಗಿ ಶಾಲೆ, ಕಾಲೇಜು, ಸಮುದಾಯ ಕೇಂದ್ರ ಇತ್ಯಾದಿಗಳಲ್ಲಿ 24 ಗಂಟೆಯೂ ಕಾರ್ಯನಿರ್ವಹಿಸುವ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಎಲ್ಲಾ ಪರೀಕ್ಷೆಯ ವರದಿಗಳನ್ನು ಐಸಿಎಂಆರ್ ಪೋರ್ಟಲ್ಗೆ ಅಪ್ಲೋಡ್ ಮಾಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ, ಉಪ ಆರೋಗ್ಯಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಪ್ರೋತ್ಸಾಹ ನೀಡಲಾಗುವುದು. ಪಾಸಿಟಿವ್ ವರದಿ ಬಂದವರನ್ನು ತಕ್ಷಣವೇ ಕ್ವಾರಂಟೈನ್ನಲ್ಲಿರಿಸಬೇಕು. ನೆಗೆಟಿವ್ ವರದಿ ಬಂದರೂ, ಸೋಂಕಿನ ಲಕ್ಷಣ ಇರುವವರನ್ನು ಆರ್ಟಿ-ಪಿಸಿಆರ್ ಪರೀಕ್ಷೆಗೆ ಕಳುಹಿಸಬೇಕು. ಕಳೆದ 16 ತಿಂಗಳಲ್ಲಿ ದೇಶದಲ್ಲಿ 2,553 ಸರಕಾರಿ ಮತ್ತು ಖಾಸಗಿ ಕೋವಿಡ್ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸಲಾಗಿದೆ ಎಂದು ಭಾರ್ಗವ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X