Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರದಿಂದ 23680 ಸೀಸೆ(ವಯಲ್ಸ್)...

ಕೇಂದ್ರದಿಂದ 23680 ಸೀಸೆ(ವಯಲ್ಸ್) ಎಂಫೋಟೆರಿಸಿನ್-ಬಿ ಔಷಧ ಹಂಚಿಕೆ: ಡಿ.ವಿ. ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ22 May 2021 10:44 PM IST
share
ಕೇಂದ್ರದಿಂದ 23680 ಸೀಸೆ(ವಯಲ್ಸ್) ಎಂಫೋಟೆರಿಸಿನ್-ಬಿ ಔಷಧ ಹಂಚಿಕೆ: ಡಿ.ವಿ. ಸದಾನಂದಗೌಡ

ಬೆಂಗಳೂರು, ಮೇ 22: ದೇಶದ ವಿವಿಧ ಭಾಗಗಳಿಂದ ಒಟ್ಟು 8,848 ಕಂಪ್ಪುಶಿಲೀಂಧ್ರ (Mucormycosis/Black Fungus) ಪ್ರಕರಣಗಳು ವರದಿಯಾಗಿದ್ದು ಕೇಂದ್ರ ಸರಕಾರವು ಇಂದು ಬೇರೆಬೇರೆ ರಾಜ್ಯಗಳಿಗೆ ಒಟ್ಟು 23,680 ಸೀಸೆ ಎಂಫೋಟೆರಿಸಿನ್-ಬಿ (Amphotericin-B) ಔಷಧವನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಸಗೊಬ್ಬರ ಹಾಗೂ ರಾಸಾಯನಿಕ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಸುಮಾರು 500 ಕಪ್ಪುಶಿಲೀಂಧ್ರ ಪ್ರಕರಣಗಳಿರುವ ಕರ್ನಾಟಕಕ್ಕೆ 1270 ಸೀಸೆ ಎಂಫೋಟೆರಿಸಿನ್-ಬಿ ಒದಗಿಸಲಾಗಿದೆ. ಈ ಹಿಂದೆ ರಾಜ್ಯಕ್ಕೆ ಕೇಂದ್ರ ಸರಕಾರದ ಹಂಚಿಕೆ ಮೂಲಕ ಮೂರು ಕಂತಿನಲ್ಲಿ 1660 ಸೀಸೆ ಎಂಫೋಟೆರಿಸಿನ್-ಬಿ ಒದಗಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಸೀಮಿತವಾಗಿ ಲಭ್ಯವಿರುವ ಈ ಔಷಧವನ್ನು ಕೇಂದ್ರ ಸರಕಾರವು ಎಲ್ಲ ರಾಜ್ಯಗಳಿಗೂ ಪ್ರಕರಣಗಳ ಸಂಖ್ಯೆಯ ಆಧಾರದ ಮೇಲೆ ನ್ಯಾಯಯುತವಾಗಿ ಹಂಚಿಕೆ ಮಾಡುತ್ತಿದ್ದು ಬರುವ ದಿನಗಳಲ್ಲಿ ದೇಶಾದ್ಯಂತ ಇದು ವಿಫುಲವಾಗಿ ಲಭ್ಯವಾಗಲಿದೆ ಎಂದು ಸದಾನಂದಗೌಡ ತಿಳಿಸಿದ್ದಾರೆ.

ಸ್ವದೇಶಿಯವಾಗಿ ಎಂಫೋಟೆರಿಸಿನ್-ಬಿ ಉತ್ಪಾದನೆ ಹೆಚ್ಚಳಕ್ಕೆ ತ್ವರಿತ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ದೇಶದ ಐದು ಫಾರ್ಮಾ ಕಂಪನಿಗಳು ಇದರ ಉತ್ಪಾದನೆ ಮಾಡುತ್ತಿದ್ದು ಈಗ ಹೊಸದಾಗಿ ಮತ್ತೆ ಐದು ಕಂಪನಿಗಳಿಗೆ ಲೈಸನ್ಸ್ ದೊರಕಿಸಿಕೊಡಲಾಗಿದೆ. ಈ ಸ್ವದೇಶಿ ಕಂಪನಿಗಳು ಮೇ ತಿಂಗಳಲ್ಲಿ 1.63 ಲಕ್ಷ ಸೀಸೆ ಹಾಗೂ ಜೂನ್ ತಿಂಗಳಲ್ಲಿ 2.55 ಲಕ್ಷ ಸೀಸೆ ಎಂಫೋಟೆರಿಸಿನ್-ಬಿ ಉತ್ಪಾದನೆ ಮಾಡಲಿವೆ ಎಂದು ಸದಾನಂದ ಗೌಡ ವಿವರಿಸಿದ್ದಾರೆ.

ಹಾಗೆಯೇ ವಿದೇಶಗಳಿಂದ ಈ ತಿಂಗಳ ಒಳಗಾಗಿ 3.63 ಲಕ್ಷ ಸೀಸೆ ಎಂಫೋಟೆರಿಸಿನ್-ಬಿ ಆಮದು ಮಾಡಿಕೊಳ್ಳುತ್ತಿದ್ದೇವೆ(ಬಹುತೇಕ ಮೈಲಾನ್ ಕಂಪನಿ ಮೂಲಕ). ಹೀಗಾಗಿ ದೇಶದಲ್ಲಿ ಈ ತಿಂಗಳು ಒಟ್ಟು 5.26 ಲಕ್ಷ ಸೀಸೆ ಔಷಧ ಲಭ್ಯವಿರಲಿದೆ. ಮುಂದಿನ ತಿಂಗಳು 3.15 ಲಕ್ಷ ಸೀಸೆ ಆಮದು ಮಾಡಿಕೊಳ್ಳಲಾಗುತ್ತಿದೆ. ಅಗತ್ಯ ಬಿದ್ದರೆ ಇನ್ನು ಹೆಚ್ಚಿಗೆ ಆಮದು ಮಾಡಿಕೊಳ್ಳುತ್ತೇವೆ. ಆಮದು ಮಾಡಿಕೊಳ್ಳುವ ಎಂಪೋಟೆರಿಸಿನ್-ಬಿ ಹಲವು ಕಂತುಗಳಲ್ಲಿ ಭಾರತಕ್ಕೆ ತಲುಪುತ್ತಿದೆ. ಇಂದು ಸುಮಾರು 40 ಸಾವಿರ ಸೀಸೆ ಭಾರತಕ್ಕೆ ತಲುಪುವುದೆಂದು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅವು ಬರುತ್ತಿದ್ದಂತೆ ವಿವಿಧ ರಾಜ್ಯಗಳ ಅವಶ್ಯಕತೆಗೆ ತಕ್ಕಂತೆ ಹಂಚಲಾಗುತ್ತಿದೆ. ಇದು ನಿರಂತರ ಪ್ರಕ್ರಿಯೆ. ಇನ್ನು ಎಂಫೋಟೆರಿಸಿನ್-ಬಿಗೆ ಪರ್ಯಾಯ ಔಷಧಗಳೂ ಇವೆ. ಹಾಗಾಗಿ ಕಪ್ಪುಶಿಲೀಂಧ್ರ ರೋಗಕ್ಕೆ ಔಷಧ ಕೊರತೆಯಾಗುತ್ತದೆ ಎಂದು ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಸದಾನಂದ ಗೌಡ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಮತ್ತೆ 4.25 ಲಕ್ಷ ಸೀಸೆ ರೆಮ್‍ಡೆಸಿವಿರ್: ಬೇರೆ ಬೇರೆ ರಾಜ್ಯಗಳಿಗೆ ಮುಂದಿನ ವಾರದ (ಮೇ 24-0) ಬಳಕೆಗಾಗಿ 22.17 ಲಕ್ಷ ಸೀಸೆ ರೆಮ್‍ಡೆಸಿವಿರ್ ಹಂಚಿಕೆ ಮಾಡಿದ್ದೇವೆ. ಕರ್ನಾಟಕಕ್ಕೆ 4.25 ಲಕ್ಷ ಸೀಸೆ ರೆಮ್‍ಡೆಸಿವಿರ್ ನಿಗದಿಪಡಿಸಲಾಗಿದೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ.
ಕೇಂದ್ರವು ರಾಜ್ಯಗಳಿಗೆ ಎಪ್ರಿಲ್ 21ರಿಂದ ಇದುವರೆಗೆ ಒಟ್ಟು 98.8 ಲಕ್ಷ ಸೀಸೆ ರೆಮ್‍ಡೆಸಿವಿರ್ ಹಂಚಿಕೆ ಮಾಡಿದೆ. ಕರ್ನಾಟಕಕ್ಕೆ ಕಳೆದ ವಾರವೂ 4.25 ಲಕ್ಷ ಸೀಸೆ ರೆಮ್‍ಡೆಸಿವಿರ್ ಒದಗಿಸಲಾಗಿತ್ತು. ಹೀಗಾಗಿ ರಾಜ್ಯಕ್ಕೆ ಇದುವರಗೆ 14.25 ಲಕ್ಷ ಸೀಸೆ ರೆಮ್‍ಡೆಸಿವಿರ್ ದೊರೆತಂತಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X