Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಗಿದ ಗಡುವು: ಫೇಸ್ಬುಕ್, ಟ್ವಿಟ್ಟರ್,...

ಮುಗಿದ ಗಡುವು: ಫೇಸ್ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಂ ವಿರುದ್ಧ ಕ್ರಮ ಸಾಧ್ಯತೆ

ಆರು ತಿಂಗಳ ಕಾಲಾವಕಾಶ ಕೋರುತ್ತಿರುವ ಜಾಲತಾಣ ಕಂಪೆನಿಗಳು

ವಾರ್ತಾಭಾರತಿವಾರ್ತಾಭಾರತಿ25 May 2021 2:37 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮುಗಿದ ಗಡುವು: ಫೇಸ್ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಂ ವಿರುದ್ಧ ಕ್ರಮ ಸಾಧ್ಯತೆ

ಹೊಸದಿಲ್ಲಿ, ಮೇ 25: ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಸರಕಾರ ನಿಗದಿಪಡಿಸಿರುವ ನೂತನ ಮಾರ್ಗದರ್ಶಿ ಸೂತ್ರಗಳ ಜಾರಿಗೆ ವಿಧಿಸಲಾಗಿದ್ದ ಗಡುವು ಮೇ 25ರಂದು ಕೊನೆಗೊಳ್ಳಲಿದೆ. ಒಂದು ವೇಳೆ ಈ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಲು ವಿಫಲವಾದಲ್ಲಿ ಫೇಸ್ಬುಕ್, ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಂಗಳು ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳು ನಿಷೇಧವನ್ನು ಎದುರಿಸುವ ಸಾಧ್ಯತೆಯಿದೆ.

ವಾಟ್ಸ್ಆಪ್, ಫೇಸ್ಬುಕ್, ಟ್ವಿಟ್ಟರ್ಗಳು ನೂತನ ನಿಯಮಾವಳಿಗಳನ್ನು ಈವರೆಗೆ ಅನುಸರಿಸುತ್ತಿಲ್ಲ. ಟ್ವಿಟ್ಟರ್ ಮಾದರಿಯ ಭಾರತೀಯ ಸಾಮಾಜಿಕ ಜಾಲತಾಣ ‘ಕೂ’ ಮಾತ್ರ ಈಗಾಗಲೇ ಕೇಂದ್ರದ ನೂತನ ಮಾರ್ಗದರ್ಶಿ ಸೂತ್ರಗಳನ್ನು ಅಳವಡಿಸಿಕೊಂಡಿದೆ.
2021ರ ಫೆಬ್ರವರಿಯಲ್ಲಿ ಕೇಂದ್ರ ವಿದ್ಯುನ್ಮಾನ ಹಾಗೂ ಮಾಹಿತಿ ತಂತ್ರಜ್ಞಾನ (ಎಂಇಐಟಿವೈ) ಇಲಾಖೆಯು ನೂತನ ಐಟಿ ಕಾನೂನುಗಳನ್ನು ಅನುಸರಿಸಲು ಸಾಮಾಜಿಕ ಜಾಲತಾಣಗಳಿಗೆ ಮೂರು ತಿಂಗಳುಗಳ ಗಡುವು ವಿಧಿಸಿದ್ದು, ಅದು ಮೇ 25ರಂದು ಅಂತ್ಯಗೊಳ್ಳಲಿದೆ.

ಒಂದು ವೇಳೆ ಈ ನೂತನ ನಿಯಮಾವಳಿಗಳನ್ನು ಮೇ 25ರೊಳಗೆ ಅನುಸರಿಸದೆ ಇದ್ದಲ್ಲಿ ಸಾಮಾಜಿಕ ಜಾಲತಾಣ ಕಂಪೆನಿಗಳು ತಮ್ಮ ಸ್ಥಾನಮಾನವನ್ನು ಕಳೆದು ಕೊಳ್ಳಲಿವೆ ಹಾಗೂ ಅವುಗಳ ವಿರುದ್ಧ ಭಾರತೀಯ ಕಾನೂನಿಗೆ ಅನುಗುಣವಾಗಿ ಕ್ರಿಮಿನಲ್ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದು ಕೇಂದ್ರ ಇಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಎಚ್ಚರಿಕೆ ನೀಡಿದೆ.

ಆದರೆ ತಾವು ತಮ್ಮ ಅಮೆರಿಕದ ಮುಖ್ಯ ಕಾರ್ಯಾಲಯಗಳಿಂದ ಈ ಬಗ್ಗೆ ಉತ್ತರಕ್ಕಾಗಿ ನಿರೀಕ್ಷಿಸುವುದರಿಂದ ತಮಗೆ ಆರು ತಿಂಗಳುಗಳ ಹೆಚ್ಚುವರಿ ಕಾಲಾವಕಾಶ ಬೇಕೆಂದು ಈ ಸಾಮಾಜಿಕ ಜಾಲತಾಣ ಕಂಪೆನಿಗಳು ಈಗಾಗಲೇ ಕೇಂದ್ರ ಸರಕಾರಕ್ಕೆ ಮನವಿ ಮಾಡಿವೆ.

ಕೇಂದ್ರದ ನೂತನ ನಿಯಮಾವಳಿಗಳಲ್ಲಿ ಏನಿದೆ
1. ಸಾಮಾಜಿಕ ಜಾಲತಾಣ ಫ್ಲಾಟ್ ಫಾರಂಗಳು ಭಾರತದಿಂದ ಅನುಸರಣಾ ಅಧಿಕಾರಿಯನ್ನು ನೇಮಿಸಬೇಕು. ಈ ಅಧಿಕಾರಿಯು ಆಯಾ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುವ ವಿಷಯಗಳ ಬಗ್ಗೆ ನಿಗಾವಿರಿಸಬೇಕು ಹಾಗೂ ದೂರುಗಳನ್ನು ಪರಿಶೀಲಿಸಬೇಕು. ಒಂದು ವೇಳೆ ಆಕ್ಷೇಪವೆಂದು ಕಂಡುಬಂದಲ್ಲಿ ಅದನ್ನು ತೆಗೆದುಹಾಕಬೇಕು. ಈ ಕಾನೂನು ಸಾಮಾಜಿಕ ಜಾಲತಾಣಗಳು ಮಾತ್ರವಲ್ಲದೆ ಓಟಿಟಿ ಫ್ಲಾಟ್ ಫಾರಂಗಳಿಗೂ ಅನ್ವಯವಾಗುತ್ತದೆ.

ಅಮೆಝಾನ್ ಪ್ರೈಮ್, ನೆಟ್ ಫ್ಲಿಕ್ಸ್ ಸೇರಿದಂತೆ ಓಟಿಟಿ ಪ್ಲಾಟ್‌ ಫಾರ್ಮ್‌ ಗಳು ಭಾರತದಲ್ಲಿ ಅಹವಾಲು ಪರಿಹಾರ ಅಧಿಕಾರಿಯನ್ನು ನೇಮಿಸಬೇಕಾಗಿದ್ದು, ಆತ ಯಾವುದೇ ದೂರುಗಳಿದ್ದಲ್ಲಿ 15 ದಿನಗಳೊಳಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ.
 
ಕೇಂದ್ರದ ವಾದ
    
ಸಾಮಾಜಿಕ ಜಾಲತಾಣ ಪ್ಲಾಟ್‌ ಫಾರಂಗಳಿಗೆ ಸ್ವಯಂನಿಯಂತ್ರಣಕ್ಕೆ ಸಂಬಂಧಿಸಿದ ಯಾವುದೇ ಸಂಹಿತೆಯಿಲ್ಲ. ಹೀಗಾಗಿ ಅವುಗಳಲ್ಲಿ ಪ್ರಸಾರವಾಗುವ ವಿಷಯ (ಕಂಟೆಂಟ್)ಗಳನ್ನು ನಿಯಂತ್ರಿಸಲು ವಿವಿಧ ಸಚಿವಾಲಯಗಳ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ಈ ಕಂಪೆನಿಗಳು ರಚಿಸಬೇಕೆಂದು ಕೇಂದ್ರ ಸರಕಾರ ಬಯಸುತ್ತಿದೆ.
 
2. ನೀತಿಸಂಹಿತೆಗಳನ್ನು ಉಲ್ಲಂಘನೆಗೆ ಸಂಬಂಧಿಸಿದ ದೂರುಗಳ ಬಗ್ಗೆ ಕ್ರಮಗಳನ್ನು ಕೈಗೊಳ್ಳಲು ಈ ಸಮಿತಿಗೆ ಏಕಮೇವ ಅಧಿಕಾರವಿರಬೇಕು.
 
3.ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ, ಶೋಷಣೆಗೊಳಗಾದ ಸಂತ್ರಸ್ತರಿಗೆ ತಮ್ಮ ಅಹವಾಲುಗಳನ್ನು ಪರಿಹರಿಸಲು ಯಾರನ್ನು ಸಂಪರ್ಕಿಸಬೇಕೆಂದು ತಿಳಿದಿರುವುದಿಲ್ಲ. ಈ ನಿಟ್ಟಿನಲ್ಲಿ ತಾನು ನಿಗದಿಪಡಿಸಿರುವ ನೂತನ ಮಾರ್ಗದರ್ಶಿ ಸೂತ್ರಗಳ ಅನುಷ್ಠಾನ ಅಗತ್ಯವೆಂದು ಕೇಂದ್ರ ಸರಕಾರದ ವಾದವಾಗಿದೆ.

ನೇಮಕವಾಗಿಲ್ಲ
 
ಟ್ವಿಟ್ಟರ್ ಮಾದರಿಯ ಭಾರತೀಯ ಸಾಮಾಜಿಕ ಜಾಲತಾಣ ‘ಕೂ’ ಹೊರತುಪಡಿಸಿ ಫೇಸ್ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಂ ಸೇರಿದಂತೆ ಇತರ ಯಾವುದೇ ಫ್ಲಾಟ್ಫಾರಂಗಳು, ನೂತನ ನಿಯಮಾವಳಿಗನುಸಾರವಾಗಿ ಸ್ಥಾನಿಕ ಅಹವಾಲು ಅಧಿಕಾರಿ, ಮುಖ್ಯ ಅನುಸರಣಾ ಅಧಿಕಾರಿ ಹಾಗೂ ನೋಡಲ್ ಸಂಪರ್ಕ ಅಧಿಕಾರಿಯನ್ನು ನೇಮಿಸಿಲ್ಲವೆಂದು ಕೇಂದ್ರ ಸರಕಾರ ಅಸಮಾಧಾನ ವ್ಯಕ್ತಪಡಿಸಿದೆ.

ನೂತನ ನಿಯಮಗಳನ್ನು ಅನುಸರಿಸುವ ಗುರಿಯನ್ನು ಹೊಂದಿದ್ದೇವೆ: ಫೇಸ್ಬುಕ್

ಕೇಂದ್ರ ಸರಕಾರದ ನೂತನ ಮಾಹಿತಿ ತಂತ್ರಜ್ಞಾನ ಕಾನೂನುಗಳಿಗೆ ಅನುಸಾರವಾಗಿ ನಡೆದುಕೊಂಡು ಹೋಗುವ ಧ್ಯೇಯವನ್ನು ತಾನು ಹೊಂದಿರುವುದಾಗಿ ಸಾಮಾಜಿಕ ಜಾಲತಾಣ ಫೇಸ್ಬುಕ್ ಮಂಗಳವಾರ ತಿಳಿಸಿದೆ. ‘‘ಮಾಹಿತಿ ತಂತ್ರಜ್ಞಾನ ಕಾನೂನುಗಳ ನಿಯಮಗಳನ್ನು ಅನುಸರಣೆ ಮಡುವ ಗುರಿಯನ್ನು ನಾವು ಹೊಂದಿದ್ದೇವೆ ಹಾಗೂ ಸರಕಾರದೊಂದಿಗೆ ಹೆಚ್ಚಿನ ಮಾತುಕತೆಯ ಅಗತ್ಯವಿರುವಂತಹ ವಿಷಯಗಳ ಬಗ್ಗೆ ಚರ್ಚಿಸುವುದನ್ನು ಮುಂದುವರಿಸಲಿದ್ದೇವೆ’’ ಎಂದು ಫೇಸ್ಬುಕ್ ವಕ್ತಾರರು ತಿಳಿಸಿದ್ದಾರೆ. ಐಟಿ ಕಾನೂನುಗಳಿಗೆ ಅನುಸಾರವಾಗಿ ನಾವು ಸರಕಾರ ನಿಗದಿಪಡಿಸಿದ ಕಾರ್ಯನಿರ್ವಹಣಾ ಪ್ರಕ್ರಿಯೆಗಳನ್ನು ಜಾರಿಗೊಳಿಸಲು ಹಾಗೂ ದಕ್ಷತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇವೆ’’ ಎಂದವರು ಹೇಳಿದರು.
 
ಸಾಮಾಜಿಕ ಜಾಲತಾಣ ಕಂಪೆನಿಗಳನ್ನು ನಿಯಂತ್ರಿಸಲು ಕೇಂದ್ರ ಸರಕಾರವು ಈ ವರ್ಷದ ಫೆಬ್ರವರಿಯಲ್ಲಿ ಕಟ್ಟುನಿಟ್ಟಿನ ನಿಯಮಾವಳಿಗಳನ್ನು ಜಾರಿಗೊಳಿಸಿತ್ತು. ಈ ಜಾಲತಾಣ ವೇದಿಕೆಗಳು ಪ್ರಸಾರ ಮಾಡುವ ವಿಷಯಗಳು ಹಾಗೂ ಸುದ್ದಿಗಳನ್ನು ಇದೇ ಮೊದಲ ಬಾರಿಗೆ ಕೇಂದ್ರ ಸರಕಾರದ ಮೇಲ್ವಿಚಾರಣೆಯ ವ್ಯಾಪ್ತಿಗೆ ತರಲಾಗಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X