Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಕ್ಷದ್ವೀಪದ ಜನರ ನಾಗರಿಕ ಹಕ್ಕುಗಳ...

ಲಕ್ಷದ್ವೀಪದ ಜನರ ನಾಗರಿಕ ಹಕ್ಕುಗಳ ವಿರುದ್ಧದ ನಡೆಯನ್ನು ಪ್ರತಿರೋಧಿಸಬೇಕಾಗಿದೆ: ಪಾಪ್ಯುಲರ್ ಫ್ರಂಟ್

ವಾರ್ತಾಭಾರತಿವಾರ್ತಾಭಾರತಿ25 May 2021 11:09 PM IST
share
ಲಕ್ಷದ್ವೀಪದ ಜನರ ನಾಗರಿಕ ಹಕ್ಕುಗಳ ವಿರುದ್ಧದ ನಡೆಯನ್ನು ಪ್ರತಿರೋಧಿಸಬೇಕಾಗಿದೆ: ಪಾಪ್ಯುಲರ್ ಫ್ರಂಟ್

ಬೆಂಗಳೂರು, ಮೇ 25: ಲಕ್ಷದ್ವೀಪದ ಮೂಲ ನಿವಾಸಿಗಳ ಧಾರ್ಮಿಕ, ಸಾಂಸ್ಕೃತಿಕ, ಭಾಷಿಕ ಅಸ್ಮಿತೆ ಮತ್ತು ನಾಗರಿಕ ಹಕ್ಕುಗಳಿಗೆ ಅಪಾಯಕಾರಿಯಾದ ಕೇಂದ್ರ ಸರಕಾರದ ನಡೆಯನ್ನು ಪ್ರತಿರೋಧಿಸಲು ದೇಶದ ಪ್ರಜಾಸತ್ತಾತ್ಮಕ ಶಕ್ತಿಗಳು ಮುಂದೆ ಬರಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖ್ಯಸ್ಥ ಒ.ಎಂ.ಎ.ಸಲಾಂ ಕರೆ ನೀಡಿದ್ದಾರೆ.

ಪ್ರಫುಲ್ ಪಟೇಲ್ ಕೇಂದ್ರಾಡಳಿತ ಪ್ರದೇಶದ ನೂತನ ಕೇಂದ್ರೀಯ ಆಡಳಿತಾಧಿಕಾರಿಯಾಗಿ ಅಧಿಕಾರ ಕೈಗೆತ್ತಿಕೊಂಡ ಬಳಿಕ ಲಕ್ಷದ್ವೀಪದಲ್ಲಿ ನಿಯಮ ಮತ್ತು ಸುಧಾರಣೆಗಳನ್ನು ಪ್ರಕಟಿಸಲಾಗುತ್ತಿದ್ದು, ಇವು ಜನರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಎಂಬ ವಿಚಾರವು ತೀವ್ರ ಕಳವಳಕಾರಿಯಾಗಿದೆ. ಬಿಜೆಪಿ ನಾಯಕ ಮತ್ತು ಮೋದಿಯ ನಿಕಟವರ್ತಿ ಪ್ರಫುಲ್ ಪಟೇಲ್ ನೇಮಕಾತಿಯು ದುಷ್ಟ ಉದ್ದೇಶಗಳನ್ನು ಹೊಂದಿರುವ ರಾಜಕೀಯ ನಿರ್ಧಾರವಾಗಿದೆ ಎಂದು ಅವರು ಟೀಕಿಸಿದ್ದಾರೆ.

ಇದು ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಯು ಐಎಎಸ್ ಅಧಿಕಾರಿಯಾಗಿರುವ ಅಗತ್ಯವಿದೆ ಎಂಬ ಚಾಲ್ತಿಯಲ್ಲಿರುವ ಮಾನದಂಡದ ಉಲ್ಲಂಘನೆಯೂ ಆಗಿದೆ. ಆತನ ಆಡಳಿತದಲ್ಲಿ ಕೈಗೊಳ್ಳಲಾಗುತ್ತಿರುವ ಅಭೂತಪೂರ್ವ ಸರ್ವಾಧಿಕಾರಿ ಕ್ರಮಗಳು ದ್ವೀಪ ನಿವಾಸಿಗಳ ದೈನಂದಿನ ಜೀವನದ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರುವುದು ಮಾತ್ರವಲ್ಲದೇ, ಅವರ ಅನನ್ಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನೂ ನಾಶಪಡಿಸಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಅದರೊಂದಿಗೆ ಇಡೀ ದ್ವೀಪಸಮೂಹದ ಜೀವವೈವಿಧ್ಯತೆ ಮತ್ತು ಪರಿಸರದ ಮೇಲೆ ಮತ್ತಷ್ಟು ಹಾನಿ ಉಂಟು ಮಾಡಲಿದೆ. ಗೋ ಮಾಂಸ ನಿಷೇಧವನ್ನು ಹೇರುವ ಮತ್ತು ಶಾಲೆಯ ಮಧ್ಯಾಹ್ನದೂಟದ ಪಟ್ಟಿಯಿಂದ ದನದ ಮಾಂಸವನ್ನು ತೆಗೆದು ಹಾಕುವ ಕ್ರೂರ ನಿರ್ಧಾರವು ಪ್ರಮುಖವಾಗಿ ಮುಸ್ಲಿಮ್ ಜನಸಂಖ್ಯೆ ಹೊಂದಿರುವ ಪ್ರದೇಶಗಳನ್ನು ಕೇಸರೀಕರಣಗೊಳಿಸುವ ಸಂಘಪರಿವಾರದ ಅಜೆಂಡಾವನ್ನು ಹೇರುವ ಭಾಗವಾಗಿದೆ ಎಂದು ಅವರು ದೂರಿದ್ದಾರೆ.

ವರುಷದಿಂದ ಈ ದ್ವೀಪವು ಬಹುತೇಕ ಕೋವಿಡ್ ಮುಕ್ತವಾಗಿಯೇ ಉಳಿದಿದೆ. ಆದರೆ ಜನರ ತೀವ್ರ ವಿರೋಧದ ಹೊರತಾಗಿಯೂ ಪ್ರಫುಲ್ ಪಟೇಲ್ ಇಲ್ಲಿ ಪರಿಷ್ಕೃತ ಕೋವಿಡ್ ಶಿಷ್ಟಾಚಾರಗಳನ್ನು ಜಾರಿಗೊಳಿಸಿದರು. ಈ ನಿರ್ಧಾರದ ನಂತರ ಈ ಸಾಂಕ್ರಾಮಿಕವು ಇಲ್ಲಿ ವೇಗವಾಗಿ ಹರಡಲು ಪ್ರಾರಂಭವಾಯಿತು. ಪರಿಷ್ಕೃತ ಶಿಷ್ಟಾಚಾರದ ವಿರುದ್ಧ ಪ್ರತಿಭಟಿಸಲು ಮುಂದೆ ಬಂದವರ ಮೇಲೆ ಕಠಿಣ ಪ್ರಕರಣಗಳನ್ನು ಹೇರಿ ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ.

ಲಕ್ಷದ್ವೀಪದಲ್ಲಿ ಈಗ ಕರಾಳ ಗೂಂಡಾ ಕಾಯ್ದೆಯನ್ನು ತರಲು ಪ್ರಯತ್ನಿಸಲಾಗುತ್ತಿದೆ. ಆದರೆ ಇದು ದೇಶದ ಅಪರಾಧ ದರ ಮತ್ತು ಖೈದಿಗಳ ಸಂಖ್ಯೆ ಕಡಿಮೆ ಇರುವ ಅತ್ಯಂತ ಶಾಂತಿಯುತ ಕೇಂದ್ರಾಡಳಿತ ಪ್ರದೇಶಗಳಲ್ಲೊಂದಾಗಿದೆ. ಇದನ್ನು ದ್ವೀಪದಲ್ಲಿ ಉದ್ಭವಿಸಬಹುದಾದ ಯಾವುದೇ ರಾಜಕೀಯ ಅಸಹಮತಿಗಾಗಿ ಕಾಯುತ್ತಿರುವ ದಮನಕಾರಿ ಕ್ರಮಗಳಿಗೆ ಮುನ್ನುಡಿಯಾಗಿ ಪರಿಗಣಿಸಬೇಕಾಗಿದೆ ಎಂದು ಸಲಾಂ ತಿಳಿಸಿದ್ದಾರೆ.

ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರದ ನಿಬಂಧನೆಗಳು ಅಪ್ರಜಾಸತ್ತಾತ್ಮಕವಾಗಿದೆ ಮತ್ತು ಇದು ತಪ್ಪು ವಿಧಾನಗಳ ಮೂಲಕ ದ್ವೀಪ ನಿವಾಸಿಗಳ ಭೂ ಒಡೆತನ ಹಾಗೂ ಬಳಕೆಯ ಮೇಲೆ ನಿರ್ಬಂಧವನ್ನು ಹೇರುತ್ತದೆ. ಅದೇ ವೇಳೆ ಇದು ಅಭಿವೃದ್ಧಿಯ ಹೆಸರಿನಲ್ಲಿ ಯಾವುದೇ ಭೂಮಿಯನ್ನು ತನ್ನ ಸ್ವಾಧೀನಕ್ಕೆ ಪಡೆದುಕೊಳ್ಳುವ ಅನಿಯಂತ್ರಿತ ಅಧಿಕಾರವನ್ನು ಸರಕಾರಕ್ಕೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಆಡಳಿತವು ಇದೀಗ ಕೋಸ್ಟಲ್ ರೆಗ್ಯುಲೇಷನ್ ಝೋನ್ ಮಾನದಂಡದ ಸಬೂಬು ನೀಡಿ, ಯಾವುದೇ ಪೂರ್ವ ನೋಟೀಸು ನೀಡದೆ ಮೀನುಗಾರರು ತಮ್ಮ ಬೋಟುಗಳನ್ನು ನಿಲ್ಲಿಸುತ್ತಿದ್ದ ಮತ್ತು ಶೀತಲೀಕರಣದ ಉದ್ದೇಶಕ್ಕಾಗಿ ಬಳಸುತ್ತಿದ್ದ ಶೆಡ್‍ಗಳನ್ನು ಧ್ವಂಸಗೊಳಿಸುತ್ತಿದೆ. ಇದು ಜನರ ಜೀವನೋಪಾಯದ ಮೇಲಿನ ದಾಳಿಯಾಗಿದೆ. ಬಹುತೇಕ ದ್ವೀಪ ನಿವಾಸಿಗಳು ತಮ್ಮ ಜೀವನ ನಿರ್ವಹಣೆಗಾಗಿ ಮೀನುಗಾರಿಕೆಯನ್ನು ಅವಲಂಬಿಸಿದ್ದಾರೆ ಎಂಬುದು ಇಲ್ಲಿ ಗಮನಾರ್ಹ ಎಂದು ಸಲಾಂ ತಿಳಿಸಿದ್ದಾರೆ.

ನೂರಾರು ಸಂಖ್ಯೆಯ ತಾತ್ಕಾಲಿಕ ಕಾರ್ಮಿಕರನ್ನು ಪ್ರವಾಸೋದ್ಯಮ ಮತ್ತು ಸರಕಾರದ ಇತರ ಇಲಾಖೆಗಳಿಂದ ತೆಗೆದುಹಾಕಲಾಗಿದೆ. ದ್ವೀಪದ ಜನರ ಮೇಲೆ ವಿಚಿತ್ರ ಕಾನೂನುಗಳನ್ನು ಮತ್ತು ನಿರ್ಬಂಧಗಳನ್ನು ಹೇರಲಾಗುತ್ತಿದ್ದು, ಇವು ದೇಶದ ಇತರ ಕಡೆಗಳಲ್ಲಿ ಎಲ್ಲೂ ಜಾರಿಯಲ್ಲಿಲ್ಲ. ಉದಾಹರಣೆಗೆ, ಲಕ್ಷದ್ವೀಪ ಪಂಚಾಯತ್ ರೆಗ್ಯುಲೇಷನ್‍ನ ಕರಡಿನಲ್ಲಿ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದವರು ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಹೇಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಲಕ್ಷದ್ವೀಪವು ಕೇವಲ ನಮ್ಮ ರಜಾ ದಿನಗಳನ್ನು ಕಳೆಯಲು ಇರುವ ಉಷ್ಣವಲಯದ ಸ್ವರ್ಗವಲ್ಲ. ಇದಕ್ಕಿಂತಲೂ ಮಿಗಿಲಾಗಿ ದೇಶದ ಎಲ್ಲಾ ನಾಗರಿಕರಿಗೆ ಇರುವಂತಹ ಸಮಾನ ಹಕ್ಕುಗಳನ್ನು ಹೊಂದಿರುವ ಮತ್ತು ಪರಿಶಿಷ್ಟ ಪಂಗಡಗಳಂತೆ ಹೆಚ್ಚುವರಿಯಾಗಿ ವಿಶೇಷಾಧಿಕಾರವನ್ನು ಹೊಂದಿರುವ ಜನರ ನೆಲೆಯಾಗಿದೆ. ಅವರು ತಮ್ಮದೇ ಆದ ಧಾರ್ಮಿಕ ಸಂಸ್ಕೃತಿ ಮತ್ತು ಭಾಷಿಕ ಅಸ್ಮಿತೆಯನ್ನು ಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಾಗರಿಕ ಹಕ್ಕುಗಳಿಂದ ಅವರನ್ನು ದೂರ ಮಾಡುವ ಮತ್ತು ಅವರ ಅನನ್ಯ ಅಸ್ಮಿತೆಗೆ ಅಪಾಯವೊಡ್ಡುವ ಯಾವುದೇ ಪ್ರಯತ್ನಗಳು ಫ್ಯಾಶಿಸಂ ಆಗಿದೆ.  ಲಕ್ಷದ್ವೀಪದ ಮೂಲ ನಿವಾಸಿಗಳ ವಿರುದ್ಧದ ಹಿಂದುತ್ವ ದಮನಕಾರಿ ನಡೆಯನ್ನು ಪ್ರತಿರೋಧಿಸಲು ದೇಶದ ಎಲ್ಲಾ ಪ್ರಜಾಸತ್ತಾತ್ಮಕ ಶಕ್ತಿಗಳು ಮುಂದೆ ಬರಬೇಕೆಂದು ಪಾಪ್ಯುಲರ್ ಫ್ರಂಟ್ ಕರೆ ನೀಡುತ್ತದೆ ಎಂದು ಸಲಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X