Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾದ...

ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾದ ವಿಕಲಚೇತನರ ಬದುಕು: ಒಂದೊತ್ತಿನ ಊಟಕ್ಕೂ ಪರದಾಟ

ನೇರಳೆ ಸತೀಶ್ ಕುಮಾರ್ನೇರಳೆ ಸತೀಶ್ ಕುಮಾರ್25 May 2021 11:49 PM IST
share
ಲಾಕ್‌ಡೌನ್‌ನಿಂದ ಸಂಕಷ್ಟಕ್ಕೀಡಾದ ವಿಕಲಚೇತನರ ಬದುಕು: ಒಂದೊತ್ತಿನ ಊಟಕ್ಕೂ ಪರದಾಟ

ಮೈಸೂರು, ಮೇ 24: ಕೊರೋನ ಎರಡನೇ ಅಲೆಯ ಲಾಕ್‌ಡೌನ್‌ನಿಂದ ತತ್ತರಿಸಿರುವ ವಿಶೇಷ ಚೇತನರು ಮತ್ತು ವಿಕಲಚೇತನರು ತೀವ್ರ ಸಂಕಷ್ಟಕ್ಕೊಳಗಾಗಿದ್ದು, ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದು, ಸರಕಾರದ ನೆರವಿಗೆ ಎದುರು ನೋಡುತ್ತಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರೂ ಅಂಗವಿಕಲರ ಬಗ್ಗೆ ಕಾಳಜಿ ವಹಿಸದಿರುವುದು ಇವರ ಅಸಮಾಧಾನಕ್ಕೆ ಕಾರಣವಾಗಿದೆ. ಮೈಸೂರು ಜಿಲ್ಲೆಯಲ್ಲಿ 30 ಸಾವಿರ ಅಂಗವಿಕಲರಿದ್ದು, 22 ಸಾವಿರ ಮಂದಿಯಷ್ಟೇ ಪಿಂಚಣಿ ಸೌಲಭ್ಯಕ್ಕೊಳಪಟ್ಟಿದ್ದಾರೆ.

ಅಂಗವಿಕಲರಾದರೂ ಸಾಮಾನ್ಯರಿಗೇನು ಕಡಿಮೆ ಇಲ್ಲದಂತೆ ಏನಾದರೊಂದು ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಇವರ ಬದುಕು ಲಾಕ್‌ಡೌನ್‌ನಿಂದಾಗಿ ಮೂರಾಬಟ್ಟೆಯಾಗಿದೆ.

ಕೈ, ಕಾಲು ಸ್ವಾಧೀನ ಹೊಂದಿದವರು, ಅಂಧರು, ಸೇರಿದಂತೆ ಹಲವರು ಕೆಲಸವೂ ಇಲ್ಲದೆ, ಇತ್ತ ಸರಕಾರದ ನೆರವು ಇಲ್ಲದೆ ಪರಿತಪಿಸುತ್ತಿದ್ದಾರೆ. ಸರಕಾರ ನಮ್ಮ ಬಗ್ಗೆಯೂ ಕಾಳಜಿ ವಹಿಸಿ ನಮ್ಮ ಜೀವನ ನಡೆಯಲು ಆರ್ಥಿಕವಾಗಿ ಸಹಾಯ ಮಾಡಬೇಕಿತ್ತು. ಆದರೆ ಯಾರೂ ನಮ್ಮ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ನಾವು ಮನುಷ್ಯರು ನಮಗೂ ಹೆಂಡತಿ ಮಕ್ಕಳಿದ್ದಾರೆ. ಅವರನ್ನು ಸಾಕುವುದು ಹೇಗೆ ಎಂದು ಪ್ರಶ್ನಿಸುತ್ತಿದ್ದಾರೆ.

ದೃಷ್ಟಿ ದೋಷವುಳ್ಳ ಮಂಜುನಾಥ್ ಸ್ವಾಮಿ ಎಂಬವರು ಮಾತನಾಡಿ, ನಾನು, ನನ್ನ ಹೆಂಡತಿ ಮತ್ತು ಪುಟ್ಟ ಮಗು ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದೇವೆ. ನನಗೆ ಕಣ್ಣು ಕಾಣವುದಿಲ್ಲ. ನನ್ನ ಹೆಂಡತಿ ಟೈಲರಿಂಗ್‌ ಕೆಲಸ ಮಾಡುತ್ತಿದ್ದಳು. ಅಲ್ಲಿ ಹೆಚ್ಚಿನ ಸಂಪಾ ದನೆ ಇರಲಿಲ್ಲ. ಅದರಲ್ಲಿ ಜೀವನ ನಡೆಸುತ್ತಿದ್ದೆವು. ಈಗ ಅಲ್ಲಿಯೂ ಕೆಲಸ ನಿಂತು ಹೋಗಿದೆ. ಜೀವನ ನಡೆಸುವುದೇ ಕಷ್ಟವಾಗಿದೆ. ಸರಕಾರ ಏನಾದರೂ ನೆರವು ನೀಡಬೇಕು ಎಂದು ಅಳಲು ತೋಡಿಕೊಂಡರು.

ರಮೇಶ್ ಎಂಬುವವರು ಮಾತನಾಡಿ, ನಾನು, ಚಿಲ್ಲರೆ ಅಂಗಡಿಯಲ್ಲಿ ಲೆಕ್ಕ ಬರೆದುಕೊಂಡು ಜೀವನ ಸಾಗಿಸುತ್ತಿದ್ದೆ. ಆದರೆ ಅಂಗಡಿ ಈಗ ತೆಗೆಯುತ್ತಿಲ್ಲ, ನನಗೆ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದು, ಜೀವನ ನಡೆಸುವುದು ಕಷ್ಟವಾಗಿದೆ ಎಂದು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.

ಕೊರೋನ ಬಂದು ಸತ್ತರೂ ಪರವಾಗಿಲ್ಲ. ನಮ್ಮ ಮಕ್ಕಳು ಹಸಿವಿನಿಂದ ಸಾಯುವುದನ್ನು ನೋಡಲು ಆಗುವುದಿಲ್ಲ ಎಂದು ಮಿಕ್ಸಿ, ಕುಕ್ಕರ್ ರಿಪೇರಿ ಮಾಡುತ್ತಿದ್ದ ನಂಜನಗೂಡಿನ ಮುಹಮ್ಮದ್ ಯಾಸಿನ್ ಹೇಳಿದರು.

ನಾನು ಮೂರು ಚಕ್ರದ ಸ್ಕೂಟರ್‌ನಲ್ಲಿ ಊರೂರು ತಿರುಗಿ ಮಿಕ್ಸಿ, ಕುಕ್ಕರ್ ಸೇರಿದಂತೆ ಗೃಹಬಳಕೆ ವಸ್ತುಗಳ ರಿಪೇರಿ ಮಾಡುತ್ತಿದೆ. ಲಾಕ್‌ಡೌನ್ ನಿಂದಾಗಿ ಎಲ್ಲೂ ಹೋಗಲು ಆಗುತ್ತಿಲ್ಲ, ಮಕ್ಕಳಿಗೆ ಮೂರು ಹೊತ್ತು ಊಟವನ್ನು ಕೊಡಲು ಆಗುತ್ತಿಲ್ಲ, ಸರಕಾರ ನಮ್ಮಂತವರ ಬಗ್ಗೆ ಗಮನ ಹರಿಸಬೇಕು ಎಂದು ನಂಜನಗೂಡಿನ ಮುಹಮ್ಮದ್ ಯಾಸೀನ್ ಹೇಳಿದರು.

ಜಿಲ್ಲಾವಾರು ಅಂಗವಿಕಲರ ಸಂಖ್ಯೆ
ಮೈಸೂರು ತಾಲೂಕು 3,260, ಮೈಸೂರು ನಗರ 4 ಸಾವಿರ, ಎಚ್.ಡಿ.ಕೋಟೆ 2,880, ಹುಣಸೂರು 3,425, ಕೆ.ಆರ್.ನಗರ 4,459, ನಂಜನಗೂಡು 4,022, ಪಿರಿಯಾಪಟ್ಟಣ 3,118, ಟೀ.ನರಸೀಪುರ 4,520, ಸರಗೂರು 1,201 ಮಂದಿಯಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಒಟ್ಟು 30 ಸಾವಿರ ಮಂದಿ ಅಂಗವಿಕ ಲರಿದ್ದು, 22 ಸಾವಿರ ಮಂದಿಯ ಸರ್ವೆಯಷ್ಟೇ ಆಗಿದೆ. ಕೊರೋನ ಸಂಬಂಧ ಅಂಗವಿಕಲರಿಗಾಗಿ ಸರಕಾರದಿಂದ ಯಾವುದೇ ರೀತಿಯ ವಿಶೇಷ ಸೌಲಭ್ಯ ನೀಡಿಲ್ಲ. ಆದರೆ ಪ್ರತಿ ತಿಂಗಳು ಪಿಂಚಣಿ ನೀಡಲಾಗುತ್ತಿದೆ.
-ಮಾಲಿನಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ

share
ನೇರಳೆ ಸತೀಶ್ ಕುಮಾರ್
ನೇರಳೆ ಸತೀಶ್ ಕುಮಾರ್
Next Story
X