Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ ಒಂದು ತಿಂಗಳಿನಿಂದ ರಿಪಬ್ಲಿಕ್...

ಕಳೆದ ಒಂದು ತಿಂಗಳಿನಿಂದ ರಿಪಬ್ಲಿಕ್ ಟಿವಿಯಲ್ಲಿ ಕಾಣಿಸಿಕೊಳ್ಳದ ಅರ್ನಬ್ ಗೋಸ್ವಾಮಿ

ಅರ್ನಬ್ ಗೋಸ್ವಾಮಿ ಎಲ್ಲಿದ್ದಾರೆಂದು ಪ್ರಶ್ನಿಸಿದ ಟ್ವಿಟರಿಗರು

ವಾರ್ತಾಭಾರತಿವಾರ್ತಾಭಾರತಿ29 May 2021 10:40 AM IST
share
ಕಳೆದ ಒಂದು ತಿಂಗಳಿನಿಂದ ರಿಪಬ್ಲಿಕ್ ಟಿವಿಯಲ್ಲಿ ಕಾಣಿಸಿಕೊಳ್ಳದ ಅರ್ನಬ್ ಗೋಸ್ವಾಮಿ

ಹೊಸದಿಲ್ಲಿ: ರಿಪಬ್ಲಿಕ್ ಟಿವಿಯ ಸ್ಥಾಪಕರೂ ಆಗಿರುವ ಟಿವಿ ನಿರೂಪಕ ಅರ್ನಬ್ ಗೋಸ್ವಾಮಿ  ತನ್ನ ಸ್ವಂತ ಟಿವಿ ಚಾನೆಲ್ ಗಳಿಂದ ಒಂದು ತಿಂಗಳಿನಿಂದ ನಿಗೂಢವಾಗಿ ಗೈರಾಗಿರುವುದಕ್ಕೆ ಟ್ವಿಟರಿಗರು ಗೊಂದಲಕ್ಕೀಡಾಗಿದ್ದು, ನೆಟ್ಟಿಗರು ‘ಅರ್ನಬ್ ಗೋಸ್ವಾಮಿ ಎಲ್ಲಿದ್ದಾರೆ?’ ಎಂದು ಕೇಳಲು ಆರಂಭಿಸಿದ್ದಾರೆ.

ರಿಪಬ್ಲಿಕ್ ಟಿವಿಯ ಚರ್ಚಾ ಕಾರ್ಯಕ್ರಮದಲ್ಲಿ ಅರ್ನಬ್ ಕೊನೆಯ ಬಾರಿ ಕಾಣಿಸಿಕೊಂಡಿದ್ದು ಎಪ್ರಿಲ್ 23ರಂದು ಅದು ಕೂಡ ಸ್ಟುಡಿಯೋದಲ್ಲಲ್ಲ, ಬದಲು ಬೇರೊಂದು ಸ್ಥಳದಿಂದ. ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ಚುನಾವಣೆಯ ಫಲಿತಾಂಶ ಪ್ರಕಟವಾದ ಮೇ 2 ರಂದು ರಿಪಬ್ಲಿಕ್ ಟಿವಿಯಲ್ಲಿ ಸ್ವಲ್ಪ ಹೊತ್ತು ಕಾಣಿಸಿಕೊಂಡಿದ್ದರು. ಆದರೆ ಪಶ್ಚಿಮ ಬಂಗಾಳದಲ್ಲಿ ಮತ್ತೆ ಮಮತಾ ಬ್ಯಾನರ್ಜಿ ಅವರ ಪಕ್ಷವೇ ಅಧಿಕಾರಕ್ಕೆ ಬರಲಿದೆ ಹಾಗೂ ಬಿಜೆಪಿ ಸೋಲುತ್ತಿದೆ ಎಂಬುದು ಸ್ಪಷ್ಟವಾಗುತ್ತಲೇ ನಿರೂಪಕ ಆತುರದಿಂದ ನಿರ್ಗಮಿಸಿದ್ದರು. ಈ ಬೆಳವಣಿಗೆ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಸಾರ್ವಜನಿಕ ಅಪಹಾಸ್ಯದ ವಿಷಯವಾಗಿತ್ತು.

ರಿಪಬ್ಲಿಕ್ ಟಿವಿಯಲ್ಲಿ ಇಂಗ್ಲೀಷ್ ಡಿಬೇಟ್ ಶೋವನ್ನು ಅರ್ನಬ್ ಮುಂಚೂಣಿಯಲ್ಲಿ ನಿಂತು ನಡೆಸಿಕೊಡುತ್ತಿದ್ದರು. 'ರಿಪಬ್ಲಿಕ್ ಭಾರತ್' ಚಾನೆಲ್ ನಲ್ಲಿ ‘ಪೂಚ್ತಾ ಹೈ ಭಾರತ್’ ಕಾರ್ಯಕ್ರಮವನ್ನು ಪ್ರಸ್ತುತಪಡಿಸುತ್ತಿದ್ದರು.

ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಆರಂಭವಾಗಲು  ಸ್ವಲ್ಪ ಮೊದಲು, ಅವರು ತಮ್ಮ ಬಂಗಾಳಿ ಚಾನೆಲ್, ರಿಪಬ್ಲಿಕ್ ಬಾಂಗ್ಲಾವನ್ನು ಸಹ ಆರಂಭಿಸಿದ್ದರು. ಗೋಸ್ವಾಮಿ ಅವರ ಅನುಪಸ್ಥಿತಿಯಲ್ಲಿ ಈ ಶೋವನ್ನು ಅವರ ಸಹೋದ್ಯೋಗಿಗಳು ನಡೆಸಿಕೊಡುತ್ತಿದ್ದಾರೆ.

"ಅರ್ನಬ್ ಎಲ್ಲಿ? ಕಳೆದ 3-4 ತಿಂಗಳುಗಳಿಂದ ಅವರು ಟ್ರೆಂಡಿಂಗ್ ಆಗುತ್ತಿಲ್ಲ ಹಾಗೂ ಅವರ ಕುರಿತು ಮೀಮ್ಸ್ ನೋಡಿಲ್ಲ. ಜೀವನ ಬೋರ್ ಆಗಿ ಬಿಟ್ಟಿದೆ,'' ಎಂದು ಟ್ವಿಟ್ಟರಿಗರೊಬ್ಬರು ಪ್ರತಿಕ್ರಿಯಿಸಿದ್ದಾರೆ.

"ಅರ್ನಬ್ ಎಲ್ಲಿ ಎಂದು ನನ್ನ ತಾಯಿ ಕಳೆದ ಹಲವು ದಿನಗಳಿಂದ ಕೇಳುತ್ತಿದ್ದಾರೆ. ದಯವಿಟ್ಟು ತಿಳಿಸಿ,  ನಾನು ಆ ಮಾಹಿತಿಯನ್ನು ತಾಯಿಗೆ ನೀಡುತ್ತೇನೆ,'' ಎಂದು ಇನ್ನೊಬ್ಬರು ಬರೆದಿದ್ದಾರೆ.

My mom's been fretting for days now and demands to know "Where's Arnab?"

Do update so I could pass on the message to her

— Ira (#Amaltaas) (@IAmaltaas) May 26, 2021

Where's Arnab?

— Kavita Singh (@KavitaKspoetry) May 21, 2021

@republic @republic where’s Arnab from last three weeks. Anything serious

— anjali Tripathy (@AnjaliTripathy2) May 24, 2021

Where's Arnab Goswami? Haven't seen him trending or in memes since last 3/4 months. Life has become boring.

— ok sorry (@Not_Reeally) May 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X