Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೂತನ ಕೃಷಿ ನೀತಿಗಳನ್ನು...

ನೂತನ ಕೃಷಿ ನೀತಿಗಳನ್ನು ಹಿಮ್ಮೆಟ್ಟಿಸುವುದು ದೊರೆಸ್ವಾಮಿ ಆಶಯವಾಗಿತ್ತು: ಪ್ರಕಾಶ್ ಕಮ್ಮರಡಿ

ವಾರ್ತಾಭಾರತಿವಾರ್ತಾಭಾರತಿ29 May 2021 9:53 PM IST
share
ನೂತನ ಕೃಷಿ ನೀತಿಗಳನ್ನು ಹಿಮ್ಮೆಟ್ಟಿಸುವುದು ದೊರೆಸ್ವಾಮಿ ಆಶಯವಾಗಿತ್ತು: ಪ್ರಕಾಶ್ ಕಮ್ಮರಡಿ

ಬೆಂಗಳೂರು, ಮೇ 29: ಕೇಂದ್ರ ಸರಕಾರ ಜಾರಿ ಮಾಡಿರುವ ನೂತನ ಕೃಷಿ ನೀತಿಗಳನ್ನು ಹಿಮ್ಮೆಟ್ಟಿಸುವುದು, ರೈತ ಸಂಘಟನೆಗಳನ್ನು ಒಗ್ಗೂಡಿಸುವುದು ಹಾಗೂ ಭೂ ರಹಿತರಿಗೆ ಭೂಮಿ ಒದಗಿಸುವುದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯ ಆಶಯವಾಗಿತ್ತು. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಟಿ.ಎನ್.ಪ್ರಕಾಶ್ ಕಮ್ಮರಡಿ ತಿಳಿಸಿದ್ದಾರೆ.

ಶನಿವಾರ ಸಮಾಜವಾದಿ ಅಧ್ಯಯನ ಕೇಂದ್ರ ವತಿಯಿಂದ ‘ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ: ನೆನೆಪು ಮತ್ತು ಹೊರಸಿರುವ ಜವಾಬ್ದಾರಿಗಳು’ ಕುರಿತು ಆಯೋಜಿಸಿದ್ದ ವೆಬಿನಾರ್ ನಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯ ಚಿಂತನೆ ಹಾಗೂ ಅವರು ಹೇಗೆ ಬದುಕಿದ್ದರೂ ಎಂಬುದನ್ನು ನಾವು ಎಚ್.ಎಸ್.ದೊರೆಸ್ವಾಮಿ ಬದುಕಿನ ಮೂಲಕ ತಿಳಿಯುವಂತಹ ಅವಕಾಶ ಸಿಕ್ಕಿತ್ತು. ಅವರ ಆಶಯದಂತೆ ನಾವೆಲ್ಲರೂ ಮುಂದುವರಿಸೋಣವೆಂದು ತಿಳಿಸಿದ್ದಾರೆ.

ರಾಜ್ಯ ಸರಕಾರ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿಯಿಂದಾಗಿ ಎಪಿಎಂಸಿ ಮಾರುಕಟ್ಟೆಗಳಲ್ಲಿ ಈಗಾಗಲೇ ವ್ಯವಹಾರ ಕುಸಿದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆ ಎದುರಾಗಲಿದೆ. ಹೀಗಾಗಿ ರೈತ ಸಂಘಟನೆಗಳು ಒಗ್ಗೂಡಿ ಹೋರಾಟ ಮಾಡಬೇಕಾಗಿದೆ. ಹಾಗೂ ಭೂ ಸುಧಾರಣೆಗೆ ಕಾಯ್ದೆಗೆ ತಂದಿರುವ ತಿದ್ದುಪಡಿಯಿಂದಾಗಿ ರೈತರು ಭೂಮಿ ಕಳೆದುಕೊಳ್ಳಲಿದ್ದಾರೆ. ಈ ಕಾಯ್ದೆಗಳ ವಿರುದ್ಧ ರೈತರು ತೀವ್ರ ಹೋರಾಟ ನಡೆಸಬೇಕೆಂದು ಎಚ್.ಎಸ್.ದೊರೆಸ್ವಾಮಿ ಆಶಯವಾಗಿತ್ತೆಂದು ಅವರು ತಿಳಿಸಿದ್ದಾರೆ.

ರೈತ ನಾಯಕ ಬಡಗಲಪುರ ನಾಗೇಂದ್ರ ಮಾತನಾಡಿ, ನಮ್ಮಲ್ಲಿ ಗಾಂಧಿ ಚಿಂತಕರು ಹೆಚ್ಚಿನದಾಗಿ ಮಡಿವಂತಿಕೆಯವರಾಗಿರುತ್ತಾರೆ. ಆದರೆ, ಹಿರಿಯ ಗಾಂಧಿವಾದಿ ಎಚ್.ಎಸ್.ದೊರೆಸ್ವಾಮಿ ಮಡಿವಂತಿಕೆಯನ್ನು ಮೀರಿದ್ದರು. ಜನಪರ ಆಶಯವನ್ನಿಟ್ಟುಕೊಂಡು ಯಾರೇ ಹೋರಾಟ ಮಾಡಿದರು ಅವರ ಜೊತೆ ಮುಕ್ತವಾಗಿ ಬೆರೆಯುತ್ತಿದ್ದರು. ಆ ಮೂಲಕ ಗಾಂಧೀಜಿಯವರ ಚಿಂತನೆಯನ್ನು ಎಲ್ಲ ಸಿದ್ಧಾಂತಗಳ ಜೊತೆ ಬೆಸೆಯಲು ಪ್ರಯತ್ನಿಸುತ್ತಿದ್ದರೆಂದು ತಿಳಿಸಿದ್ದಾರೆ.

ರೈತ ನಾಯಕ ಶಾರದಮ್ಮ ಮಾತನಾಡಿ, ಕಳೆದ 30ವರ್ಷಗಳಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಜೊತೆ ನಿಕಟವಾದ ಸಂಪರ್ಕದಲ್ಲಿದ್ದೇನೆ. ಒಬ್ಬ ಹೋರಾಟಗಾರ ಹೇಗಿರಬೇಕೆಂಬುದಕ್ಕೆ ಸಾಕ್ಷಿಪ್ರಜ್ಞೆಯಾಗಿದ್ದರು. ಗಾಂಧೀಜಿಯ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸಿ, ನಮ್ಮನ್ನು ಅಗಲಿದ್ದಾರೆ. ಅವರ ಆಶಯವನ್ನು ನಾವೆಲ್ಲರೂ ಮುಂದುವರೆಸೋಣವೆಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X