Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''ಮೋಜು ಮಸ್ತಿ ಮಾಡಲು ಸ್ವಿಮ್ಮಿಂಗ್ ಫೂಲ್...

''ಮೋಜು ಮಸ್ತಿ ಮಾಡಲು ಸ್ವಿಮ್ಮಿಂಗ್ ಫೂಲ್ ಕಟ್ಟಿಸಿಕೊಂಡವರಿಂದ ನೀತಿ ಪಾಠ ಕಲಿಯಬೇಕಿಲ್ಲ''

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ30 May 2021 4:10 PM IST
share
ಮೋಜು ಮಸ್ತಿ ಮಾಡಲು ಸ್ವಿಮ್ಮಿಂಗ್ ಫೂಲ್ ಕಟ್ಟಿಸಿಕೊಂಡವರಿಂದ ನೀತಿ ಪಾಠ ಕಲಿಯಬೇಕಿಲ್ಲ

ಮೈಸೂರು, ಮೇ 30: ಕೊರೋನ ಬಂದು ಜನ ಸಂಕಷ್ಟಪಡುತ್ತಿರುವಾಗ ಮುಖ್ಯಮಂತ್ರಿಗಳು ಅಭಿವೃದ್ಧಿ ಕಾರ್ಯಕ್ಕೆ ಹಣ ಇಲ್ಲ ಎನ್ನುತ್ತಿರಬೇಕಾದರೆ ಮೋಜು ಮಸ್ತಿ ಮಾಡಲು ಸ್ವಿಮ್ಮಿಂಗ್ ಫೂಲ್ ಕಟ್ಟಿಸಿಕೊಂಡಿರುವವರಿಂದ ನೀತಿ ಪಾಠ ಕಲಿಯಬೇಕಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಸ್ವಂತ ಹಿತಾಸಕ್ತಿಗಾಗಿ ಮೋಜು ಮಸ್ತಿಮಾಡಲು 28 ಲಕ್ಷ ರೂ. ಖರ್ಚು ಮಾಡಿ ಸ್ವಿಂಗ್ ಫೋಲ್ ಕಟ್ಟಿಸುವ ಅಗತ್ಯವಿತ್ತೆ. ಇಂತವರಿಂದ ಜನಪ್ರತಿನಿಧಿಗಳಾದ ನಾವು ಪಾಠ ಕಲಿಯಬೇಕಿಲ್ಲ ಎಂದರು.

ಪಿಎಂ ಕೇರ್ಸ್ ನಿಂದ 1 ಲಕ್ಷ ವೆಂಟಿಲೇಟರ್ ನೀಡಲಾಗಿದೆ. ಮೈಸೂರಿಗೂ ವಟಿಲೇಟರ್ ಗಳು ಬಂದಿದೆ ಅದನ್ನು ಇನ್ನೂ ಅಳವಡಿಸಿಲ್ಲ, ಇದನ್ನು ಮಾಡಿಸಬೇಕಾದದ್ದು ಯಾರ ಕೆಲಸ ಎಂದು ಪ್ರಶ್ನಿಸಿದರು.

ಸ್ಟೆಪ್ ಡೌನ್ ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಪಾಲಿಸದೆ ನಾಯಿ ಕೊಡೆಗಳಂತೆ ತಲೆ ಎತ್ತಿದ್ದವು. ಶಾಸಕ ರಾಮದಾಸ್ ಅವರು ಅಲ್ಲಿಗೆ ಹೋಗಿ ನಿಯಮ ಉಲ್ಲಂಘನೆ ಮಾಡಿರುವುದನ್ನು ಪತ್ತೆ ಹಚ್ಚಿದ್ದರು. ಈ ಆಸ್ಪತ್ರೆಗಳಿಗೆ ಯಾವ ಹಿತಾಸಕ್ತಿ ಮೇಲೆ ಜಿಲ್ಲಾಧಿಕಾರಿಗಳು ಅನುಮತಿ ಕೊಟ್ಟಿದ್ದರು. ಇದರಲ್ಲಿ ಬೇರೆ ಏನಾದರು ಅನುಕೂಲ ಇತ್ತೆ ಎಂದು ಅನುಮಾನ ವ್ಯಕ್ತಪಡಿಸಿದರು.

ಕೊರೋನ ನಿಯಂತ್ರಣಕ್ಕೆ ಮುಖ್ಯಮಂತ್ರಿಗಳು ಹಣ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ. ಸೋಮಶೇಖರ್ 41 ಕೋಟಿ ತಂದಿದ್ದರು. ಅದರಲ್ಲಿ 39 ಕೋಟಿ ರೂ. ಖರ್ಚಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳುತ್ತಿದ್ದಾರೆ. ಜೊತೆಗೆ ದಾನಿಗಳು ಕೆಲವು ಸಂಘ ಸಂಸ್ಥೆಗಳವರು ಸಾಕಷ್ಟು ಹಣ  ನೀಡಿದ್ದಾರೆ. ಹಾಗಿದ್ದ ಮೇಲೆ ಆ ಹಣ ಏಕೆ ಖರ್ಚಾಯಿತು? ಜಿಲ್ಲೆಗೆ 39 ಕೋಟಿಯನ್ನು ಯಾತಕ್ಕೆ ಖರ್ಚು ಮಾಡಲಾಗಿದೆ ಎಂದು ಸಾರ್ವಜನಿಕವಾಗಿ ಲೆಕ್ಕಕೊಡಲಿ ಎಂದು ಸಂಸದ  ಪ್ರತಾಪ್ ಸಿಂಹ ಆಗ್ರಹಿಸಿದರು.

ಪ್ರತಿಯೊಂದಕ್ಕು ಟೆಂಡರ್, ನಿಯಮ ಎಂದು ಹೇಳುವ ಜಿಲ್ಲಾಧಿಕಾರಿಗಳು ತಮ್ಮ ಮನೆಯ ಆವರಣದಲ್ಲಿ ಸ್ವಿಮ್ಮಿಂಗ್ ಫೋಲ್ ಕಟ್ಟಿಸಲು ಮಹಾನಗರ ಪಾಲಿಕೆ ಅನುಮತಿ ಪಡೆದಿದ್ದಾರ ? ಇಲ್ಲ ಪಾರಂಪರಿಕ ಕಟ್ಟಡದ ತಜ್ಞರ ಅಭಿಪ್ರಾಯ ಪಡೆದಿದ್ದಾರ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X