Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿ ಸರಕಾರಕ್ಕೆ ಏಳು ವರ್ಷ: ಡಿಸಿಎಂ...

ಮೋದಿ ಸರಕಾರಕ್ಕೆ ಏಳು ವರ್ಷ: ಡಿಸಿಎಂ ಡಾ.ಅಶ್ವತ್ಥನಾರಾಯಣರಿಂದ ಬೆಂಗಳೂರು ನಗರ ಪ್ರದಕ್ಷಿಣೆ

ವಾರ್ತಾಭಾರತಿವಾರ್ತಾಭಾರತಿ30 May 2021 8:13 PM IST
share

ಬೆಂಗಳೂರು, ಮೇ 30: ಪ್ರಧಾನಮಂತ್ರಿ ಮೋದಿ ನೇತೃತ್ವದ ಸರಕಾರಕ್ಕೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ರವಿವಾರ ಬೆಳಗ್ಗೆ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರವೂ ಸೇರಿ ನಗರದ ವಿವಿಧೆಡೆ ಸಂಚರಿಸಿ ಪಕ್ಷದ ಕಾರ್ಯಕರ್ತರು, ಕೋವಿಡ್ ಮುಂಚೂಣಿ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿಯನ್ನು ಭೇಟಿ ಮಾಡಿದರು.

ಮೊದಲಿಗೆ ಅರಮನೆ ನಗರ ವಾರ್ಡ್ ಆರ್‍ಎಂವಿ ಬಡಾವಣೆ ನಿವಾಸಿಗಳ ಸಂಘದ ಪಾರ್ಕ್‍ನಲ್ಲಿ ವ್ಯಾಕ್ಸಿನೇಷನ್ ಅಭಿಯಾನದಲ್ಲಿ ಪಾಲ್ಗೊಂಡ ಅವರು, ಅಲ್ಲಿ ಮುಂಚೂಣಿ ಕಾರ್ಯಕರ್ತರು ಮತ್ತು ಆದ್ಯತಾ ಗುಂಪಿನ ಜನಕ್ಕೆ ನೀಡಲಾಗುತ್ತಿದ್ದ ಲಸಿಕೆ ಮಾಹಿತಿಯನ್ನು ಪಡೆದುಕೊಂಡರು.

ವೈದ್ಯರು, ಸಿಬ್ಬಂದಿ ಹಾಗೂ ಲಸಿಕೆ ಪಡೆಯಲು ಬಂದಿದ್ದ ಹಿರಿಯ ನಾಗರೀಕರ ಯೋಗಕ್ಷೇಮ ವಿಚಾರಿಸಿದರು, ಈ ಸಂದರ್ಭದಲ್ಲಿ ಸರಕಾರದ ಕೋವಿಡ್ ನಿರ್ವಹಣೆ ಬಗ್ಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಗುಟ್ಟಹಳ್ಳಿ ವಾರ್ಡ್ ನಲ್ಲಿ ಬಡವರು, ಮುಂಚೂಣಿ ಕಾರ್ಯಕರ್ತರಾದ ಪೌರ ಕಾರ್ಮಿಕರು, ಬೆಸ್ಕಾಂ ಮತ್ತು ಒಳಚರಂಡಿ ಮತ್ತು ಜಲಮಂಡಳಿ ಕಾರ್ಮಿಕರಿಗೆ ಆಹಾರ ದಾನ್ಯದ ಕಿಟ್‍ಗಳನ್ನು ವಿತರಿಸಿದರು. ಬಳಿಕ ಕಾಡುಮಲ್ಲೇಶ್ವರ ವಾರ್ಡ್ ನ ಸಮುದಾಯ ಭವನದಲ್ಲಿ ವ್ಯಾಕ್ಸಿನ್ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು.

ಸಿಹಿ, ಫುಡ್ ಕಿಟ್ ಹಂಚಿಕೆ: ಮೋದಿ ಸರಕಾರಕ್ಕೆ 7 ವರ್ಷ ತುಂಬಿದ ಕಾರಣ ಎಲ್ಲ ಕಡೆಗಳಲ್ಲೂ ಲಸಿಕೆ ಪಡೆಯಲು ಬಂದು ಸಾಲಿನಲ್ಲಿ ನಿಂತಿದ್ದವರಿಗೆ ಡಿಸಿಎಂ ಸ್ವತಃ ಸಿಹಿ ಹಂಚಿದರು. ಅದೇ ರೀತಿ ಎಂಎಸ್‍ಆರ್ ನಗರದಲ್ಲಿ ಕೋವಿಡ್ ಮುಂಚೂಣಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಆಹಾರ ಕಿಟ್‍ಗಳು ಮತ್ತು ಪ್ರೆಶರ್ ಕುಕ್ಕರ್ ಗಳನ್ನು ವಿತರಣೆ ಮಾಡಿದರು. ಅಲ್ಲದೆ, ಪೌರ ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿದರು. ಮಾಜಿ ಶಾಸಕ ಮುನಿರಾಜು ಅವರೊಂದಿಗೆ ದಾಸರಹಳ್ಳಿ ಪಿಎಚ್‍ಸಿಗೆ ಭೇಟಿ ನೀಡಿ, ಅಲ್ಲಿನ ಆಶಾ ಕಾರ್ಯಕರ್ತೆಯರು, ಅರೆ ವೈದ್ಯ ಸಿಬ್ಬಂದಿಗೆ ಆಹಾರ ಕಿಟ್‍ಗಳನ್ನು ವಿತರಿಸಿದರು. 

ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ದಾಸರಹಳ್ಳಿ ಮಂಡಲ ವಿಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೇಂದ್ರದಲ್ಲಿ ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸೇರಿ ಎಲ್ಲ ಪ್ರತಿಪಕ್ಷಗಳು ಒಡೆದಾಳುವ ರಾಜಕೀಯ ಮಾಡಿಕೊಂಡು ದೇಶದ ಹಿತವನ್ನು ಕಡೆಗಣಿಸಿದವು. ಕೋವಿಡ್‍ನಂಥ ಸಂಕಷ್ಟ ಕಾಲದಲ್ಲಿ ಲಸಿಕೆ ಬಗ್ಗೆ ಅಪಪ್ರಚಾರ ನಡೆಸಿದವು ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ ಕಟುವಾಗಿ ಟೀಕಿಸಿದರು.

ಮೊದಲ ಹಂತದಲ್ಲಿ ಲಸಿಕೆ ನೀಡಲು ಆರಂಭಿಸಿದಾಗ ಕಾಂಗ್ರೆಸ್ ಮತ್ತಿತರೆ ಪ್ರತಿಪಕ್ಷಗಳು ದೊಡ್ಡ ಗೊಂದಲವನ್ನೇ ಸೃಷ್ಟಿ ಮಾಡಿದವು. ಅಪಪ್ರಚಾರ ನಡೆಸಿದವು. ಈಗ ಲಸಿಕೆ ಸಿಗುತ್ತಿಲ್ಲ ಎಂದು ಹುಯಿಲೆಬ್ಬಿಸುತ್ತಿವೆ ಎಂದು ಕಿಡಿಕಾರಿದರು.

ಮಾಜಿ ಶಾಸಕ ಮುನಿರಾಜು, ಪಕ್ಷದ ಮಂಡಲಾಧ್ಯಕ್ಷ ಲೋಕೇಶ್, ಅರಮನೆ ನಗರ ವಾರ್ಡಿನ ಬಿಬಿಎಂಪಿ ಮಾಜಿ ಸದಸ್ಯೆ ಸುಮಂಗಲ ಕೇಶವ್, ಬಿಬಿಎಂಪಿ ಮಾಜಿ ಸದಸ್ಯ ಜಯಪ್ರಕಾಶ್, ಅದೇ ವಾರ್ಡಿನ ಪಕ್ಷದ ಅಧ್ಯಕ್ಷ ಪ್ರೇಮ್ ಕುಮಾರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X