Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶ್ವಗುರು ಮಾಡುತ್ತೇನೆಂದು ಹೇಳಿ...

ವಿಶ್ವಗುರು ಮಾಡುತ್ತೇನೆಂದು ಹೇಳಿ ಭಾರತವನ್ನು ದೈನೇಸಿ ಸ್ಥಿತಿಗೆ ತಂದಿದ್ದು ಸಾಧನೆಯೇ ?: ದಿನೇಶ್ ಗುಂಡೂರಾವ್

''ಕಾರ್ಪೋರೇಟ್ ಗಳ ದಲ್ಲಾಳಿಯಾಗಿದ್ದು ಬಿಟ್ಟರೆ ಎಂದಾದರೂ ಜನರ ಪ್ರಧಾನಿಯಾದರೆ ?''

ವಾರ್ತಾಭಾರತಿವಾರ್ತಾಭಾರತಿ30 May 2021 8:39 PM IST
share
ವಿಶ್ವಗುರು ಮಾಡುತ್ತೇನೆಂದು ಹೇಳಿ ಭಾರತವನ್ನು ದೈನೇಸಿ ಸ್ಥಿತಿಗೆ ತಂದಿದ್ದು ಸಾಧನೆಯೇ ?: ದಿನೇಶ್ ಗುಂಡೂರಾವ್

ಬೆಂಗಳೂರು, ಮೇ 30: ಸುಳ್ಳಿನ ಶಿಲಾಮೂರ್ತಿಯಂತೆ ಇರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ವೈಭವೀಕರಿಸಿ ಜನರನ್ನು ಹಾದಿ ತಪ್ಪಿಸುವುದು ಸಾಧನೆಯಲ್ಲ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ರವಿವಾರ ನರೇಂದ್ರ ಮೋದಿ ಪ್ರಧಾನಿಯಾಗಿ 7 ವರ್ಷ ಪೂರ್ಣಗೊಂಡಿರುವ ಕುರಿತು ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಂದಿಗೆ 7 ವರ್ಷಗಳಾಗಿವೆ. ಇದಕ್ಕಾಗಿ ಬಿಜೆಪಿ ನಾಯಕರು ಸಂಭ್ರಮದಲ್ಲಿದ್ದಾರೆ. ಆದರೆ, ಈ ಸಂಭ್ರಮ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಲದೆ, ದೇಶವನ್ನು ಹಿಂದೆಂದೂ ಕಾಣದ ಅಧೋಗತಿಗೆ ತಳ್ಳಿದಕ್ಕೋ ಅಥವಾ ಅಚ್ಚೇದಿನ್ ಕನಸು ತುಂಬಿ ಜನರಿಗೆ ಕೆಟ್ಟದಿನದ ಕರಾಳ ಅನುಭವ ನೀಡಿದಕ್ಕೋ? ಹೇಳಿ ನಿಮ್ಮ ಸಂಭ್ರಮವೇಕೆ? ಎಂದು ದಿನೇಶ್ ಕೇಳಿದ್ದಾರೆ. ತಮ್ಮ ಅಧಿಕಾರವಧಿಯಲ್ಲಿ ಕಾರ್ಪೋರೇಟ್ ಕಂಪೆನಿಯ ದಲ್ಲಾಳಿಯಾಗಿದ್ದು ಬಿಟ್ಟರೆ ಎಂದಾದರೂ ಜನರ ಪ್ರಧಾನಿಯಾದರೆ ?. ಎಲ್ಲಿ ಹೋಯಿತು ಕಪ್ಪುಹಣ ಮರಳಿ ತರುವ ಘೋಷಣೆ, ಎಲ್ಲಿ ಹೋಯಿತು ಭ್ರಷ್ಟಾಚಾರ ಮುಕ್ತ ಭಾರತ, ಮಾತಿನ ಮಹಾಶೂರರಾಗಿದ್ದೇ ಸಾಧನೆಯೇ ಎಂದು ಟೀಕಿಸಿದ್ದಾರೆ.

ಮನ್ ಕಿ ಬಾತ್ ಕೇಳಿ ಜನರ ಕಿವಿ ತೂತಾಯಿತೇ ಹೊರತು 1 ರೂ. ಉಪಯೋಗವಾಯಿತೆ. ಭಾರತ ಹಸಿವಿನ ಸೂಚ್ಯಂಕದಲ್ಲಿ ಪಾಕಿಸ್ತಾನಕ್ಕಿಂತ ಕೀಳು ಮಟ್ಟದಲ್ಲಿದೆ. ಜಿಡಿಪಿ ಬಾಂಗ್ಲಾದೇಶಕ್ಕಿಂತ ಕುಸಿದಿದೆ. ಭಾರತವನ್ನು ವಿಶ್ವಗುರು ಮಾಡುತ್ತೇನೆಂದವರು ಈಗ ದೇಶವನ್ನು ದೈನೇಸಿ ಸ್ಥಿತಿಗೆ ತಂದಿದ್ದೇ ಸಾಧನೆಯೇ ಎಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿಯವರ ಮಾತಿಗೂ ಕೃತಿಗೂ ಸಂಬಂಧವೇ ಇಲ್ಲ. ಬಣ್ಣದ ಮಾತುಗಳು ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಸಾಗಿಸುವುದಿಲ್ಲ. ಮಾತಿನಿಂದ ಜನರನ್ನು ಮರುಳು ಮಾಡುವುದೇ ಸಾಧನೆಯೆಂದರೆ ಅದು ಅವಿವೇಕತನದ ಪರಮಾವಧಿ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕರಾಳ ಕೃಷಿ ಕಾಯ್ಧೆಯ ವಿರುದ್ಧ ರೈತರು ಕಳೆದ 6 ತಿಂಗಳಿನಿಂದ ಪ್ರತಿಭಟಿಸುತ್ತಿದ್ದಾರೆ. ರಾಜ್ಯಗಳಲ್ಲಿ ಚುನಾಯಿತ ಸರಕಾರಗಳನ್ನು ಆಪರೇಷನ್ ಕಮಲ ಎಂಬ ಅನಿಷ್ಟ ಕಾರ್ಯದ ಮೂಲಕ ಕೆಡುವುದು ಪ್ರಧಾನಿ ಕೆಲಸವೇ. ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದ್ದವರು ಆಪರೇಷನ್ ಕಮಲವೆಂಬ ಅಸಹ್ಯ ವೃಕ್ಷಕ್ಕೆ ನೀರೆರೆದು ಪೋಷಿಸಿದ್ದು ಸುಳ್ಳೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಒಟ್ಟಿನಲ್ಲಿ ಮೋದಿ ಅಧಿಕಾರದ ಅವಧಿಯನ್ನು ದೊಡ್ಡ ಸಾಧನೆ ಎಂದು ಸಂಭ್ರಮಿಸುತ್ತಿರುವ ಬಿಜೆಪಿ, ಇತ್ತೀಚೆಗೆ ನ್ಯಾಯಾಲಯಗಳ ಅಭಿಪ್ರಾಯ ಗಮನಿಸಲಿ. ಜತೆಗೆ, ಒಮ್ಮೆ ಜನರ ಬಳಿ ಮಾತಾಡಿ ಬರಲಿ. ನಿಜವಾದ ಸಾಧನೆ ಏನೆಂಬುದು ತಿಳಿಯುತ್ತದೆ. ಸುಳ್ಳಿನ ಶಿಲಾಮೂರ್ತಿಯಂತಿರುವ ಮೋದಿಯವರನ್ನು ವೈಭವೀಕರಿಸಿ ಜನರನ್ನು ಹಾದಿ ತಪ್ಪಿಸುವುದು ಸಾಧನೆಯಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X