Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕಾರಿಪುರ : ಚಾಲಕ, ಕ್ಲೀನರುಗಳಿಗೆ ಆಹಾರ...

ಶಿಕಾರಿಪುರ : ಚಾಲಕ, ಕ್ಲೀನರುಗಳಿಗೆ ಆಹಾರ ಕಿಟ್ ವಿತರಿಸುತ್ತಿರುವ ಮುಹಮ್ಮದ್ ಹನೀಫ್

ಕರ್ನಾಟಕ ಪ್ರಾವಿಜನ್ ಸ್ಟೋರ್ ಮಾಲಕ, ಸ್ನೇಹಿತರಿಂದ ಆಹಾರ-ನೀರು ನೆರವು

ವಾರ್ತಾಭಾರತಿವಾರ್ತಾಭಾರತಿ31 May 2021 1:51 PM IST
share
ಶಿಕಾರಿಪುರ : ಚಾಲಕ, ಕ್ಲೀನರುಗಳಿಗೆ ಆಹಾರ ಕಿಟ್ ವಿತರಿಸುತ್ತಿರುವ ಮುಹಮ್ಮದ್ ಹನೀಫ್

ಶಿಕಾರಿಪುರ : ಪಟ್ಟಣದ ಕರ್ನಾಟಕ ಪ್ರಾವಿಜನ್ ಸ್ಟೋರ್ ಮಾಲಕ ಮುಹಮ್ಮದ್ ಹನೀಫ್ ಅವರು ಕೊರೋನ ಸಂಕಷ್ಟದ ಸಮಯದಲ್ಲಿ ಜನಸೇವೆಗೆ ಮುಂದಾಗಿದ್ದಾರೆ.

ಸ್ನೇಹಿತರ ಜತೆಗೂಡಿ ನಿತ್ಯ ಸಂಜೆ ನೀರಿನ ಬಾಟಲ್, ಊಟದ ಪೊಟ್ಟಣಗಳನ್ನು ವಿತರಿಸುತ್ತಿದ್ದಾರೆ. ಆ ಮೂಲಕ ಸದ್ದಿಲ್ಲದೇ ಸಮಾಜಸೇವೆಯಲ್ಲಿ ತೊಡಗಿದ್ದಾರೆ. ಲಾಕ್‌ಡೌನ್ ನಿ೦ದಾಗಿ ಪರಸ್ಥಳದಿಂದ ಬರುವ ವಾಹನ ಚಾಲಕರು ಊಟ- ತಿಂಡಿಗೆ ಪರದಾಡುತ್ತಿದ್ದಾರೆ. ಹೋಟೆಲ್, ಕ್ಯಾ೦ಟೀನ್ ಸಹಿತ ಎಲ್ಲ ರೀತಿಯ ಬೀದಿ ಬದಿಯ ವ್ಯಾಪಾರಕ್ಕೆ ಪೂರ್ಣವಿರಾಮ ಬಿದ್ದಿದ್ದು, ವಾಹನ ಚಾಲಕರು ತೊಂದರೆ ಅನುಭವಿಸುತ್ತಿರುವುದನ್ನು ಮನಗಂಡ ಮುಹಮ್ಮದ್ ಹನೀಫ್ ನೆರವಿನ ಹಸ್ತ ಚಾಚಿದ್ದಾರೆ.

ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಲಾರಿ ಚಾಲಕರು, ಕ್ಲೀನರ್‌ಗಳಿಗೆ ಊಟ ತಿಂಡಿ ಪೊಟ್ಟಣಗಳು, ನೀರಿನ ಬಾಟಲಿಗಳನ್ನು ನೀಡುವ ಸೇವೆ ಹಲವುದಿನಗಳಿಂದ ಕೈಗೊಂಡಿದ್ದಾರೆ. ತಂದೆಯ ಸೇವೆಗೆ ಪುತ್ರರು ಕೂಡ ಕೈ ಜೋಡಿಸಿದ್ದಾರೆ.

ನಿತ್ಯ ಸಂಜೆ ತಮ್ಮ ವಾಹನದಲ್ಲಿ ಪುತ್ರರಾದ ಉಪ್ಪಿನಕಾಯಿ ಉದ್ಯಮಿ ಮುಹಮ್ಮದ್ ಇಕ್ಬಾಲ್, ಮುಹಮ್ಮದ್ ಸಲೀಮ್, ಸ್ನೇಹಿತರಾದ ಸ್ಕಂದ ಮೆಡಿಕಲ್ ಮಾಲಕ ನಾಗರಾಜ್, ಮೊಟ್ಟೆ ವ್ಯಾಪಾರಿಗಳಾದ ಅಬ್ದುಲ್ ಕರೀಂ, ಇಮ್ತಿಯಾಝ್, ಲಾರಿ ಮಾಲಕ ನಾಸಿರ್, ಫಯಾಝ್ ಅಹ್ಮದ್, ಆಟೋ ಮೊಬೈಲ್ ಮಾಲಕ ಮುಜೀಬ್ ಮತ್ತು ನೂರ್ ಅಹ್ಮದ್ ಜತೆಗೆ ಸೇವೆಗೆ ಮುಂದಾಗುತ್ತಾರೆ. ಹೆಚ್ಚಿನ ವಾಹನ ಸಂಚಾರವಿರುವ ಪಟ್ಟಣದ ಶಿವಮೊಗ್ಗ ವೃತ್ತದ ಬಳಿ ಲಾರಿ ಚಾಲಕರು ಸಹಿತ ಸ್ಥಳೀಯ ಸಣ್ಣಪುಟ್ಟ ವಾಹನಗಳನ್ನು ನಿಲ್ಲಿಸಿ ಊಟದ ಪ್ಯಾಕೇಟ್‌, ನೀರಿನ ಬಾಟಲ್ ಗಳನ್ನು ವಿತರಿಸುತ್ತಿದ್ದಾರೆ.

''ಕೊರೋನ ಜನರ ನೆಮ್ಮದಿ ಕಸಿದಿದೆ. ಸೋಂಕು ತಡೆಗಟ್ಟಲು ನಿತ್ಯ ವೈದ್ಯ - ಸಿಬ್ಬಂದಿ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಕುಟುಂಬದ ಹಿತವನ್ನು ತೊರೆದು ಶ್ರಮಿಸುತ್ತಿದ್ದಾರೆ. ಇ೦ಥ ಸ೦ದರ್ಭದಲ್ಲಿ ಸಮಾಜಕ್ಕೆ ಪೂರಕವಾದ ಅಳಿಲು ಸೇವೆ ಸಲ್ಲಿಸುವ ಅವಕಾಶ ಪ್ರತಿಯೊಬ್ಬರಿಗೂ ಇದೆ. ಈ ದಿಸೆಯಲ್ಲಿ ದೂರದಿಂದ ಅನಿವಾರ್ಯವಾಗಿ ಬರುವ ಲಾರಿ ಚಾಲಕರು, ಕ್ಲೀನರ್‌ಗಳ ಹಸಿದ ಹೊಟ್ಟೆ ತುಂಬಿಸುವ ಪುಣ್ಯದ ಕಾರ್ಯವನ್ನು ಆಯ್ಕೆ ಮಾಡಿಕೊಂಡಿದ್ದೇವೆ''.

- ಮುಹಮ್ಮದ್ ಹನೀಫ್, ಕರ್ನಾಟಕ ಪ್ರಾವಿಜನ್ ಸ್ಟೋರ್ ಮಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X