Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೃತದೇಹದ ಪಕ್ಕದಲ್ಲೇ ಆಹಾರ ಸೇವನೆ, ಪಿಪಿಇ...

ಮೃತದೇಹದ ಪಕ್ಕದಲ್ಲೇ ಆಹಾರ ಸೇವನೆ, ಪಿಪಿಇ ಕಿಟ್ ಇಲ್ಲದೆ ಸಂಬಂಧಿಗಳ ಓಡಾಟ: ವೀಡಿಯೊ ವೈರಲ್

ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ; ಆರೋಪ

ವಾರ್ತಾಭಾರತಿವಾರ್ತಾಭಾರತಿ31 May 2021 8:24 PM IST
share
ಮೃತದೇಹದ ಪಕ್ಕದಲ್ಲೇ ಆಹಾರ ಸೇವನೆ, ಪಿಪಿಇ ಕಿಟ್ ಇಲ್ಲದೆ ಸಂಬಂಧಿಗಳ ಓಡಾಟ: ವೀಡಿಯೊ ವೈರಲ್

ಚಿಕ್ಕಮಗಳೂರು, ಮೇ 31: ಕೊರೋನ ಸೋಂಕಿಗೆ ಬಲಿಯಾದ ವ್ಯಕ್ತಿಯ ಮೃತದೇಹದ ಪಕ್ಕದಲ್ಲೇ ಊಟ, ಉಪಹಾರ ಸೇವಿಸುತ್ತಿರುವ ರೋಗಿಗಳು, ಕೋವಿಡ್ ಸೋಂಕಿತರ ವಾರ್ಡ್‌ನಲ್ಲಿ ಪಿಪಿಇ ಕಿಟ್ ಧರಿಸದೆ ಸೋಂಕಿತರ ಸಂಬಂಧಿಗಳಿಂದ ಓಡಾಟ, ಸೋಂಕಿತರನ್ನು ಸಂಪರ್ಕಿಸಿದ ಸಂಬಂಧಿಗಳಿಂದ ಆಸ್ಪತ್ರೆ ಹೊರಗೆ ಓಡಾಟದ ದೃಶ್ಯಗಳು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಕಂಡು ಬಂದಿದೆ ಎನ್ನಲಾಗಿದ್ದು, ಘಟನೆಯ ವೀಡಿಯೊ ವೈರಲ್ ಆಗಿದೆ.

ಚಿಕ್ಕಮಗಳೂರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿಯೇ ಕೋವಿಡ್ ಆಸ್ಪತ್ರೆ ಇದ್ದು, ಕೋವಿಡ್ ಆಸ್ಪತ್ರೆಯ ವಾರ್ಡ್‌ವೊಂದರಲ್ಲಿ ಸೋಮವಾರ ಬೆಳಗ್ಗೆ ಸೋಂಕಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಸೋಂಕಿಗೆ ಬಲಿಯಾದ ವ್ಯಕ್ತಿಯ ಮೃತದೇಹ ಪಕ್ಕದಲ್ಲೇ ಇದ್ದರೂ ಮೃತದೇಹದ ಪಕ್ಕದಲ್ಲೇ ಕುಳಿತ ಸೋಂಕಿತರು ಹಾಗೂ ಅವರ ಸಂಬಂಧಿಗಳು ಆಹಾರ ಸೇವಿಸುವ, ಸೋಂಕಿತರಿಗೆ ಚಿಕಿತ್ಸೆ ನೀಡುವ ವಾರ್ಡ್‌ನಲ್ಲಿ ಸೋಂಕಿತರ ಸಂಬಂಧಿಗಳು ಪಿಪಿಇ ಕಿಟ್ ಧರಿಸದೆ ತಿರುಗಾಡುವ, ವಾರ್ಡ್ ಒಳಗೆ ಹೋಗಿ ಸೋಂಕಿತರನ್ನು ಮಾತನಾಡಿಸುವ ಸಂಬಂಧಿಗಳು ನಂತರ ವಾರ್ಡ್‌ನಿಂದ ಹೊರ ಬಂದು ಸಾರ್ವಜನಿಕರ ಮಧ್ಯೆ ತಿರುಗಾಡುತ್ತಿರುವ ದೃಶ್ಯಗಳನ್ನು ವಾರ್ಡ್‌ನಲ್ಲಿದ್ದ ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದು, ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವೀಡಿಯೊ ಚಿಕ್ಕಮಗಳೂರು ನಗರದ ಕೋವಿಡ್ ಆಸ್ಪತ್ರೆಯದ್ದೇ ಎಂಬುದು ದೃಢಪಟ್ಟಿದ್ದು, ಕೋವಿಡ್ ಆಸ್ಪತ್ರೆಯ ಅವ್ಯವಸ್ಥೆಗೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋವಿಡ್ ಆಸ್ಪತ್ರೆಯ ಸೋಂಕಿತರು ಇರುವ ವಾರ್ಡ್‌ಗೆ ವೈದ್ಯರು, ಆಸ್ಪತ್ರೆ ಸಿಬ್ಬಂದಿಗೆ ಮಾತ್ರ ಪ್ರವೇಶವಿದ್ದು, ಸೋಂಕಿತರ ಸಂಬಂಧಿಗಳಿಗೆ ಪ್ರವೇಶ ನೀಡುತ್ತಿರುವುದು ಹೇಗೆ?, ಪಿಪಿಇ ಕಿಟ್ ಇಲ್ಲದೆ ಸೋಂಕಿತರಿರುವ ವಾರ್ಡ್‌ನಲ್ಲಿ ತಿರುಗಾಡಲು ಅವಕಾಶ ಇದೆಯೇ? ಸೋಂಕಿತರು ಇರುವ ವಾರ್ಡ್‌ನಲ್ಲಿ ಸೋಂಕಿಗೆ ಬಲಿಯಾದ ವ್ಯಕ್ತಿಯ ಮೃತದೇಹದ ಪಕ್ಕದಲ್ಲೇ ಆಹಾರ ಸೇವನೆಗೆ ಅವಕಾಶ ನೀಡಿರುವುದಾದರೂ ಹೇಗೆ ಎಂದು ಸಾರ್ವಜನಿಕರು ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅವ್ಯವಸ್ಥೆಗೆ ಕಾರಣರಾದವರ ವಿರುದ್ಧ ಕ್ರಮ’

ಈ ಘಟನೆಯ ವೀಡಿಯೊ ನೋಡಿದ್ದೇನೆ. ಸೋಂಕಿತರ ವಾರ್ಡ್‌ನಲ್ಲಿ ಸಂಬಂಧಿಗಳಿಗೆ ಪ್ರವೇಶವಿಲ್ಲ. ಅಲ್ಲಿನ ಅವ್ಯವಸ್ಥೆಗೆ ಕಾರಣರಾದವರ ವಿರುದ್ಧ ಕ್ರಮ ವಹಿಸಲಾಗುವುದು. ಮುಂದೆ ಇಂತಹ ಘಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಉಮೇಶ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X