Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಸ್ಪತ್ರೆಯ ಮುಂದೆ ಮೃತ ಮಗುವನ್ನು...

ಆಸ್ಪತ್ರೆಯ ಮುಂದೆ ಮೃತ ಮಗುವನ್ನು ಕೈಯಲ್ಲಿ ಹಿಡಿದು ಗೋಗರೆದ ತಂದೆ: ವೀಡಿಯೋ ವೈರಲ್

ಚಿಕಿತ್ಸೆ ವಿಳಂಬದಿಂದ ಮಗು ಮೃತ್ಯು: ಹೆತ್ತವರ ಆರೋಪ, ಅಧಿಕಾರಿಗಳ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ31 May 2021 10:24 PM IST
share
ಆಸ್ಪತ್ರೆಯ ಮುಂದೆ ಮೃತ ಮಗುವನ್ನು ಕೈಯಲ್ಲಿ ಹಿಡಿದು ಗೋಗರೆದ ತಂದೆ: ವೀಡಿಯೋ ವೈರಲ್

ಲಕ್ನೊ, ಮೇ 31: ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯ ಸರಕಾರಿ ಆಸ್ಪತ್ರೆಯ ಹೊರಭಾಗದಲ್ಲಿ ವ್ಯಕ್ತಿಯೊಬ್ಬ ತನ್ನ 5 ತಿಂಗಳ ಮಗುವನ್ನು ಕೈಗಳಲ್ಲಿ ಎತ್ತಿಕೊಂಡು ನಿಂತಿರುವ ದೃಶ್ಯದ ವೀಡಿಯೊ ವೈರಲ್ ಆಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ತಂದರೂ, 2 ಗಂಟೆಯವರೆಗೆ ಯಾವುದೇ ವೈದ್ಯರು ಗಮನಿಸದ ಕಾರಣ ಮಗು ಮೃತಪಟ್ಟಿದೆ ಎಂದು ವ್ಯಕ್ತಿ ಆರೋಪಿಸಿದ್ದಾನೆ ಎಂದು ವರದಿಯಾಗಿದೆ.

ಮಗುವನ್ನು ಆಸ್ಪತ್ರೆಗೆ ತರುವಾಗಲೇ ಮೃತಪಟ್ಟಿತ್ತು. ಆಸ್ಪತ್ರೆಗೆ ತಂದೊಡನೆ ಅಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು ಪರೀಕ್ಷಿಸಿದ್ದಾರೆ . ಮಗು ಮನೆಯ ಟೆರೇಸ್ ನಿಂದ ಬಿದ್ದಿದೆ ಎಂದು ಹೆತ್ತವರು ಹೇಳಿದ್ದಾರೆ. ತುರ್ತು ಸೇವಾ ವಿಭಾಗದಲ್ಲಿದ್ದ ವೈದ್ಯರು ಮತ್ತು ಸಿಬಂದಿಗಳು ಮಗುವನ್ನು ಪರೀಕ್ಷಿಸಿದ್ದಾರೆ ಎಂದು ಬಾರಾಬಂಕಿಯ ಮುಖ್ಯ ವೈದ್ಯಾಧಿಕಾರಿ ಬಿಕೆಎಸ್ ಚೌಹಾಣ್ ಹೇಳಿದ್ದಾರೆ.

ಬಾರಾಬಂಕಿ ಜಿಲ್ಲೆಯ ಸಿರೌಲಿ ಗೌಸ್ಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರವಿವಾರ ಸಂಜೆ ಈ ಘಟನೆ ನಡೆದಿದೆ. ಇದೇ ಆಸ್ಪತ್ರೆಯ ಇನ್ನೊಂದು ವಿಭಾಗದಲ್ಲಿ ಕೊರೋನ ಸೋಂಕಿತರ ಚಿಕಿತ್ಸಾ ಕೇಂದ್ರವಿದೆ. ಮಗುವಿನ ಮೃತದೇಹವನ್ನು ಕೈಗಳಲ್ಲಿ ಎತ್ತಿಹಿಡಿದುಕೊಂಡ ವ್ಯಕ್ತಿ ಮತ್ತು ಆತನ ಪತ್ನಿ ಆಸ್ಪತ್ರೆಯ ಗೇಟಿನೆದುರು ಕಾಯುತ್ತಿರುವ ದೃಶ್ಯ ವೀಡಿಯೋದಲ್ಲಿದೆ. ಇಲ್ಲಿರುವ ಎಲ್ಲರೂ ಕೋವಿಡ್ ಸೋಂಕಿನ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ. ಕೋವಿಡ್ ಭಯದಿಂದ ರೋಗಿಯನ್ನು ಮುಟ್ಟಲೂ ಹೆದರುತ್ತಿದ್ದಾರೆ. ಮಂಚದ ಮೇಲಿಂದ ಕೆಳಬಿದ್ದ ನನ್ನ ಮಗುವಿಗೆ ಚಿಕಿತ್ಸೆ ನೀಡಲು ಯಾರೊಬ್ಬರೂ ಮುಂದೆ ಬರುತ್ತಿಲ್ಲ ಎಂದು ಆ ವ್ಯಕ್ತಿ ಅಳಲು ತೋಡಿಕೊಂಡಿದ್ದಾನೆ. 

ಎರಡು ಗಂಟೆಯಾಯಿತು, ಒಬ್ಬ ವೈದ್ಯರೂ ಬಂದಿಲ್ಲ. ತಾಳ್ಮೆಯಿರಲಿ ಎಂದು ಕೆಲವರು ಹೇಳುತ್ತಿದ್ದಾರೆ. ನನ್ನ ಮಗು ಸತ್ತಿದ್ದರೂ ನಾನು ತಾಳ್ಮೆಯಿಂದ ಇರಬೇಕೇ? ಎಂದು ಆತ ಮತ್ತೊಂದು ವೀಡಿಯೊದಲ್ಲಿ ಅಳುಧ್ವನಿಯಿಂದ ಪ್ರಶ್ನಿಸಿದ್ದಾನೆ. ಮೂರನೇ ವೀಡಿಯೊದಲ್ಲಿ, ಸ್ಥಳಕ್ಕೆ ಬಂದ ಕೆಲವು ಪೊಲೀಸರು ಆ ದಂಪತಿಯನ್ನು ಪ್ರಶ್ನಿಸುವ ದೃಶ್ಯವಿದೆ. ಏನು ಈ ನಾಟಕ ಎಂದು ಪೊಲೀಸ್ ಪ್ರಶ್ನಿಸಿದಾಗ ಮಗು ಮೃತಪಟ್ಟಿರುವುದಾಗಿ ದಂಪತಿ ಉತ್ತರಿಸಿದ್ದಾರೆ. ತಾಳ್ಮೆ ವಹಿಸಿ, ದೂರು ಬರೆದುಕೊಡಿ. ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳುವ ದೃಶ್ಯ ವೈರಲ್ ಆಗಿದೆ.

Couple lose infant daughter allegedly due to absence of doctors at emergency unit of government hospital in Uttar Pradesh's Barabanki. The little one was rushed to the hospital by parents after she fell from bed and turned unconscious.@anuraag_niebpl @myogiadityanath pic.twitter.com/3zzI0FaNHZ

— The New Indian Express (@NewIndianXpress) May 31, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X