Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. "ದ್ವೀಪವು ವಾಸಯೋಗ್ಯವಾಗಿಲ್ಲ":...

"ದ್ವೀಪವು ವಾಸಯೋಗ್ಯವಾಗಿಲ್ಲ": ರೊಹಿಂಗ್ಯಾ ನಿರಾಶ್ರಿತರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ31 May 2021 11:08 PM IST
share
ದ್ವೀಪವು ವಾಸಯೋಗ್ಯವಾಗಿಲ್ಲ: ರೊಹಿಂಗ್ಯಾ ನಿರಾಶ್ರಿತರಿಂದ ಪ್ರತಿಭಟನೆ

ಢಾಕಾ (ಬಾಂಗ್ಲಾದೇಶ), ಮೇ 31: ಬಾಂಗ್ಲಾದೇಶಕ್ಕೆ ಸೇರಿದ ಚಂಡಮಾರುತ ಪೀಡಿತ ದ್ವೀಪವು ವಾಸಯೋಗ್ಯವಾಗಿಲ್ಲ ಎಂದು ಆರೋಪಿಸಿ ಸಾವಿರಾರು ರೊಹಿಂಗ್ಯಾ ನಿರಾಶ್ರಿತರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಗ್ಲಾದೇಶದ ಕಾಕ್ಸ್ ಬಝಾರ್ನಿಂದ ಭಾಶನ್ ಚಾರ್ ದ್ವೀಪಕ್ಕೆ ಕೆಲವು ತಿಂಗಳುಗಳ ಹಿಂದೆ ಸಾವಿರಾರು ರೊಹಿಂಗ್ಯಾ ನಿರಾಶ್ರಿತರನ್ನು ಸ್ಥಳಾಂತರಿಸಲಾಗಿತ್ತು.

ಬಂಗಾಳ ಕೊಲ್ಲಿಯಲ್ಲಿ ಹೂಳಿನಿಂದ ನಿರ್ಮಾಣಗೊಂಡಿರುವ ಭಾಶನ್ ಚಾರ್ ದ್ವೀಪಕ್ಕೆ ಡಿಸೆಂಬರ್ನಿಂದ 18,000 ರೊಹಿಂಗ್ಯಾ ನಿರಾಶ್ರಿತರನ್ನು ಸಾಗಿಸಲಾಗಿದೆ. ಒಂದು ಲಕ್ಷ ನಿರಾಶ್ರಿತರನ್ನು ಅಲ್ಲಿಗೆ ಸಾಗಿಸುವ ಯೋಜನೆಯನ್ನು ಬಾಂಗ್ಲಾದೇಶ ಹೊಂದಿದೆ.

ಕಾಕ್ಸ್ ಬಝಾರ್ನಲ್ಲಿ ಸುಮಾರು 8.5 ಲಕ್ಷ ರೊಹಿಂಗ್ಯಾ ನಿರಾಶ್ರಿತರು ಕಿಕ್ಕಿರಿದ ಶಿಬಿರಗಳಲ್ಲಿ ಅನಾರೋಗ್ಯಕರ ಪರಿಸರದಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿನ ಶಿಬಿರಗಳ ಒತ್ತಡವನ್ನು ಕೊಂಚ ನಿವಾರಿಸುವುದಕ್ಕಾಗಿ ಒಂದು ಭಾಗ ನಿರಾಶ್ರಿತರನ್ನು ಬಾಂಗ್ಲಾದೇಶವು ದ್ವೀಪದಲ್ಲಿ ನಿರ್ಮಿಸಲಾಗಿರುವ ಶಿಬಿರಗಳಿಗೆ ಕಳುಹಿಸುತ್ತಿದೆ.

ಈ ಪೈಕಿ ಹೆಚ್ಚಿನವರು 2017ರಲ್ಲಿ ನೆರೆಯ ಮ್ಯಾನ್ಮಾರ್ನಲ್ಲಿ ಸೇನೆ ನಡೆಸಿದ ಅಮಾನುಷ ದಮನ ಕಾರ್ಯಾಚರಣೆಯ ವೇಳೆ ತಪ್ಪಿಸಿಕೊಂಡು ಬಾಂಗ್ಲಾದೇಶಕ್ಕೆ ಬಂದವರು. ‘‘ಜನಾಂಗೀಯ ಹತ್ಯೆ’’ಯ ಉದ್ದೇಶದಿಂದ ಸೇನಾ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂಬುದಾಗಿ ವಿಶ್ವಸಂಸ್ಥೆಯ ತನಿಖೆಗಾರರು ಹೇಳಿದ್ದಾರೆ.

ಸೋಮವಾರದ ಪ್ರತಿಭಟನೆಯಲ್ಲಿ ಸುಮಾರು 4,000 ಮಮದಿ ಭಾಗವಹಿಸಿದರು ಎಂದು ಪೊಲಿಸರು ತಿಳಿಸಿದ್ದಾರೆ. ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಶನರ್ (ಯುಎನ್ಎಚ್ಸಿಆರ್)ನ ಅಧಿಕಾರಿಗಳು ಪರಿಶೀಲನೆಗಾಗಿ ಬಂದ ಸಂದರ್ಭದಲ್ಲಿ ಪ್ರತಿಭಟನೆ ನಡೆದಿದೆ.

‘‘ಯುಎನ್ಎಚ್ಸಿಆರ್ ಪ್ರತಿನಿಧಿಗಳು ಇಂದು ಹೆಲಿಕಾಪ್ಟರ್ನಲ್ಲಿ ಆಗಮಿಸಿದ ಕ್ಷಣದಲ್ಲೇ ಅಲ್ಲಿದ್ದ ರೊಹಿಂಗ್ಯಾ ನಿರಾಶ್ರಿತರು ಹಿಂಸಾತ್ಮಕವಾಗಿ ವರ್ತಿಸಿದರು’’ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಅಲಮ್ಗಿರ್ ಹುಸೈನ್ ಎಎಫ್ಪಿ ಸಂಸ್ಥೆಗೆ ತಿಳಿಸಿದರು.

‘‘ಅವರು ಉಗ್ರಾಣಗಳ ಕಿಟಿಕಿ ಗಾಜುಗಳನ್ನು ಕಲ್ಲು ಹೊಡೆದು ಒಡೆದರು. ಅವರು ಪೊಲೀಸರ ಮೇಲೆಯೇ ಏರಿ ಬಂದರು. ತಾವು ಅಲ್ಲಿ ವಾಸಿಸುವುದಿಲ್ಲ ಎನ್ನುವುದು ಅವರ ಬೇಡಿಕೆಯಾಗಿದೆ’’ ಎಂದರು.

ಬೆದರಿಸಿ ದ್ವೀಪಕ್ಕೆ ಸಾಗಿಸಲಾಗಿದೆ ಎಂದಿದ್ದ ನಿರಾಶ್ರಿತರು:

ರೊಹಿಂಗ್ಯಾ ನಿರಾಶ್ರಿತರ ಮೊದಲ ತಂಡವನ್ನು ಡಿಸೆಂಬರ್ 4ರಂದು ದ್ವೀಪಕ್ಕೆ ಸಾಗಿಸಲಾಗಿತ್ತು. ತಮಗೆ ಹೊಡೆದು ಬೆದರಿಸಿ ದ್ವೀಪಕ್ಕೆ ಹೋಗಲು ತಮ್ಮಿಂದ ಒಪ್ಪಿಗೆ ಪಡೆಯಲಾಗಿದೆ ಎಂಬುದಾಗಿ ಹಲವು ರೊಹಿಂಗ್ಯಾಗಳು ಎಎಫ್ಪಿ ಸುದ್ದಿಸಂಸ್ಥೆಗೆ ಹೇಳಿದ್ದರು.
ಮಾನವಹಕ್ಕುಗಳ ಸಂಘಟನೆಗಳೂ ಇದನ್ನು ದೃಢೀಕರಿಸಿವೆ.

ಈ ಆರೋಪಗಳನ್ನು ಬಾಂಗ್ಲಾದೇಶ ಸರಕಾರ ನಿರಾಕರಿಸಿದೆ. ದ್ವೀಪವು ಸುರಕ್ಷಿತವಾಗಿದೆ ಹಾಗೂ ಅಲ್ಲಿನ ಸವಲತ್ತುಗಳು ಕಾಕ್ಸ್ ಬಝಾರ್ನಲ್ಲಿರುವ ಶಿಬಿರಗಳಿಗಿಂತ ಎಷ್ಟೋ ಉತ್ತಮವಾಗಿವೆ ಎಂದು ಹೇಳಿದೆ. ಸ್ಥಳಾಂತರ ಪ್ರಕ್ರಿಯೆಯಲ್ಲಿ ತಾನು ಒಳಗೊಂಡಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X