Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್‍ಡೌನ್ ಜಾರಿ ಹಿನ್ನೆಲೆ: ಪರಿಹಾರಕ್ಕೆ...

ಲಾಕ್‍ಡೌನ್ ಜಾರಿ ಹಿನ್ನೆಲೆ: ಪರಿಹಾರಕ್ಕೆ ಅರ್ಜಿ ಸಲ್ಲಿಸಿದ 1.27 ಲಕ್ಷ ಚಾಲಕರು

ವಾರ್ತಾಭಾರತಿವಾರ್ತಾಭಾರತಿ31 May 2021 11:08 PM IST
share
ಲಾಕ್‍ಡೌನ್ ಜಾರಿ ಹಿನ್ನೆಲೆ: ಪರಿಹಾರಕ್ಕೆ ಅರ್ಜಿ ಸಲ್ಲಿಸಿದ 1.27 ಲಕ್ಷ ಚಾಲಕರು

ಬೆಂಗಳೂರು, ಮೇ 31: ಲಾಕ್‍ಡೌನ್ ಸಂಬಂಧಿಸಿದಂತೆ ರಾಜ್ಯ ಸರಕಾರ ಘೋಷಿಸಿರುವ 3 ಸಾವಿರ ರೂ. ಪರಿಹಾರ ಪಡೆಯಲು ರಾಜ್ಯಾದ್ಯಂತ 1.27 ಲಕ್ಷ ಚಾಲಕರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. 

ಆರ್ಥಿಕ ಸಂಕಷ್ಟದಲ್ಲಿರುವ ಆಟೋ, ಕ್ಯಾಬ್ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ನೆರವಾಗುವ ಉದ್ದೇಶದಿಂದ ರಾಜ್ಯ ಸರಕಾರ, 2.10 ಲಕ್ಷ ಚಾಲಕರಿಗೆ ತಲಾ ಮೂರು ಸಾವಿರ ರೂ. ಪರಿಹಾರ ಘೋಷಿಸಿದೆ. 

ಅದರಂತೆ ಸೇವಾಸಿಂಧು ವೆಬ್‍ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಒಟ್ಟು 1.27 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 72,256 ಆಟೋ ಚಾಲಕರು, 48,196 ಟ್ಯಾಕ್ಸಿ ಚಾಲಕರು ಹಾಗೂ 7,361 ಮ್ಯಾಕ್ಸಿ ಕ್ಯಾಬ್ ಚಾಲಕರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಈ 1.27 ಲಕ್ಷ ಅರ್ಜಿಗಳ ಪೈಕಿ 1.10 ಲಕ್ಷ ಅರ್ಜಿಗಳು ಪರಿಹಾರ ಮೊತ್ತ ನೀಡಲು ಅನುಮೋದನೆ ಪಡೆದಿವೆ. ಈ ಅರ್ಜಿಗಳನ್ನು ಡೈರೆಕ್ಟ್ ಬೆನಿಫಿಟ್ ಪೇಮೆಂಟ್(ಡಿಬಿಟಿ) ವಿಭಾಗಕ್ಕೆ ಕಳುಹಿಸಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿವೊಬ್ಬರು ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು: ಈಗಾಗಲೇ ಸಲ್ಲಿಕೆಯಾಗಿರುವ ಒಟ್ಟು 1.27 ಲಕ್ಷ ಅರ್ಜಿಗಳ ಪೈಕಿ ಅತಿ ಹೆಚ್ಚು ಬೆಂಗಳೂರು ನಗರ ಜಿಲ್ಲೆ 56,701 ಅರ್ಜಿಗಳು ಸಲ್ಲಿಕೆಯಾಗಿವೆ. ಉಳಿದಂತೆ ಮೈಸೂರು 8,404, ದಕ್ಷಿಣ ಕನ್ನಡ 6,848, ತುಮಕೂರು 6,819, ಮಂಡ್ಯ 4,740, ಹಾಸನ 3,420, ಉಡುಪಿ 3,014, ದಾವಣಗೆರೆ 2,989, ರಾಮನಗರ 2,971, ಬೆಂಗಳೂರು ಗ್ರಾಮಾಂತರ 2,787, ಬೆಳಗಾವಿ 2,592, ಕಲಬುರಗಿ 2,549, ಚಿತ್ರದುರ್ಗ 2,410, ಶಿವಮೊಗ್ಗ 2,366, ಚಿಕ್ಕಮಗಳೂರು 1,990, ಬಳ್ಳಾರಿ 1,764, ಕೋಲಾರ 1,585, ಕೊಡಗು 1,391, ಚಿಕ್ಕಬಳ್ಳಾಪುರ 1,287, ಹಾವೇರಿ 1,072, ರಾಯಚೂರು 7,98, ಬಾಗಲಕೋಟೆ 784, ಕೊಪ್ಪಳ 673, ಬೀದರ್ 580, ಗದಗ 477 ಹಾಗೂ ಯಾದಗಿರಿಯಿಂದ 469 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ವರದಿಯಾಗಿದೆ.

ಸಂಘಗಳ ಖಂಡನೆ: ರಾಜ್ಯ ಸರಕಾರ ಬರೀ ಮೂರು ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿರುವುದಕ್ಕೆ ಚಾಲಕರ ಸಂಘದ ಮುಖಂಡರು ಖಂಡಿಸಿದ್ದಾರೆ. ನೆರವು ಸಾಕಾಗುವುದಿಲ್ಲ, ಲಾಕ್‍ಡೌನ್‍ನಿಂದಾಗಿ ಭಾರೀ ಆರ್ಥಿಕ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಅದು ಅಲ್ಲದೆ, ಕಳೆದ ವರ್ಷದ ಮೇ ನಲ್ಲಿ 7.5 ಲಕ್ಷ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ತಲಾ 5 ಸಾವಿರ ರೂ.ಗಳ ಪರಿಹಾರವನ್ನು ಸರಕಾರ ಘೋಷಿಸಿತ್ತು. ಆದರೆ, ಸರಕಾರದಲ್ಲಿ ನೋಂದಣಿ ಮಾಡಿಕೊಂಡಿದ್ದ ಕೇವಲ 2.1 ಲಕ್ಷ ಫಲಾನುಭವಿಗಳಿಗೆ ಹಣವನ್ನು ವಿತರಿಸಲಾಗಿದೆ ಎಂದು ಸಂಘಟನೆಗಳ ಮುಖಂಡರು ಕಿಡಿಕಾರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X