Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಿಪಲ್ಲ : ತಂಡದಿಂದ ಮಹಿಳೆಗೆ ಕೊಲೆ...

ಸರಿಪಲ್ಲ : ತಂಡದಿಂದ ಮಹಿಳೆಗೆ ಕೊಲೆ ಬೆದರಿಕೆ ; ದೂರು

ವಾರ್ತಾಭಾರತಿವಾರ್ತಾಭಾರತಿ1 Jun 2021 9:54 PM IST
share

ಮಂಗಳೂರು, ಜೂ.1: ಶಕ್ತಿನಗರ ಸಮೀಪದ ಸರಿಪಲ್ಲದ ಮನೆಯೊಂದಕ್ಕೆ ಅಕ್ರಮವಾಗಿ ಮಾರಕಾಸ್ತ್ರದೊಂದಿಗೆ ನುಗ್ಗಿದ 9 ಮಂದಿಯ ತಂಡವೊಂದು ಮಹಿಳೆಗೆ ಕೊಲೆ ಬೆದರಿಕೆ ಹಾಕಿ, ದಾಂಧಲೆ ನಡೆಸಿದ ಘಟನೆ ರವಿವಾರ ನಡೆದಿದೆ.

ಸರಿಪಲ್ಲದ ಹೇಮಂತ್, ಕೋಡಿಕಲ್‌ನ ರಂಜಿತ್, ಕುಂಜತ್‌ಬೈಲ್‌ನ ಸುಶಾಲ್, ಕಾವೂರಿನ ಯತಿರಾಜ್, ಕೊಟ್ಟಾರ ಕಲ್ಬಾವಿಯ ಅವಿನಾಶ್, ಉರ್ವಸ್ಟೋರ್ ಸುಂಕದಕಟ್ಟೆಯ ಧನುಷ್, ಕೊಟ್ಟಾರ ಚೌಕಿಯ ಪ್ರಜ್ವಲ್, ಬಂದರ್ ದಕ್ಕೆಯ ದೀಕ್ಷಿತ್, ಉರ್ವಸ್ಟೋರ್‌ನ ದೀಪಕ್ ಪ್ರಕರಣ ಆರೋಪಿಗಳಾಗಿದ್ದಾರೆ.

ಮೇ 30ರಂದು ರಾತ್ರಿ 8 ಗಂಟೆಗೆ ಸರಿಪಲ್ಲದ ವೀಣಾ ತನ್ನ ಮನೆಯಲ್ಲಿದ್ದಾಗ ಆರೋಪಿಗಳು ತಲವಾರು ಸಹಿತ ಮಾರಕಾಸಗಳನ್ನು ಹಿಡಿದುಕೊಂಡು ಮನೆಗೆ ಅಕ್ರಮವಾಗಿ ಪ್ರವೇಶಿಸಿ ವೀಣಾ ಅವರ ಇಬ್ಬರು ಮಕ್ಕಳು ಎಲ್ಲಿ ಎಂದು ಪ್ರಶ್ನಿಸಿ ಗುಲ್ಲೆಬ್ಬಿಸಿದ್ದಾರೆ. ‘ಮಕ್ಕಳು ಹೊರಗಡೆ ಹೋಗಿದ್ದಾರೆ’ ಎಂದು ವೀಣಾ ಹೇಳಿದಾಗ, ‘ನಿಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದು ನಾನೇ, ಏನು ಮಾಡ್ತಾರೆ, ನಿಮ್ಮ ಮಕ್ಕಳಿಬ್ಬರನ್ನು ಜೀವ ಸಹಿತ ಬಿಡುವುದಿಲ್ಲ’ ಎಂದು ಪ್ರಮುಖ ಆರೋಪಿ ಹೇಮಂತ್ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಅಲ್ಲದೆ ರಂಜಿತ್ ಎಂಬಾತ ‘ನಿಮ್ಮನ್ನು ಕೂಡಾ ಬಿಡುವುದಿಲ್ಲ’ ಎಂದು ಹೇಳಿ ಕೈಯಲ್ಲಿದ್ದ ತಲವಾರ್ ಬೀಸಿದ್ದಾನೆ. ಅಪಾಯ ಅರಿತ ವೀಣಾ ತಪ್ಪಿಸಿ ಜೋರಾಗಿ ಬೊಬ್ಬೆ ಹಾಕಿ ಹೊರಗಡೆ ಓಡಿದ್ದಾರೆ. ಇದೇ ವೇಳೆ ರಂಜಿತ್‌ನ ಜತೆಗಿದ್ದವರು ತಲವಾರುಗಳನ್ನು ಯದ್ವಾ-ತದ್ವಾ ಬೀಸಿ ಮನೆಯಲ್ಲಿದ್ದ ಟಿವಿ ಮಿಕ್ಸಿ, ಸೋಫಾ, ಮನೆಯ ಹಿಂಬಾಗಿಲಿಗೆ ಹಾನಿ ಮಾಡಿ ನಷ್ಟವುಂಟು ಮಾಡಿದ್ದಾರೆ. ಈ ಸಂದರ್ಭ ಮನೆಯ ಹೊರಗಡೆ ಜನರು ಸೇರಿದ್ದು, ಇದನ್ನು ಕಂಡ ಆರೋಪಿ ರಂಜಿತ್ ‘ಮಕ್ಕಳನ್ನು ತೆಗೆಯದೇ ಬಿಡುವುದಿಲ್ಲ’ ಎಂದು ಮತ್ತೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವೀಣಾ ಅವರ ಮಗಳನ್ನು 2 ವಾರದ ಹಿಂದೆ ಮೋಟಾರ್ ಸೈಕಲ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದನ್ನು ನೋಡಿ ಸಹೋದರರಾದ ಆಕಾಶ್ ಹಾಗೂ ಕೀರ್ತನ್ ಫೋನ್ ಮಾಡಿ ಹೇಮಂತ್‌ನನ್ನು ಪ್ರಶ್ನಿಸಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಈ ಕೃತ್ಯ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X