Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಸೋಂಕಿನಿಂದ ಹೆತ್ತವರನ್ನು...

ಕೋವಿಡ್ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳ ಹಿತರಕ್ಷಣೆಗೆ 6 ಹಂತದ ಯೋಜನೆ: ಸುಪ್ರೀಂಗೆ ಕೇಂದ್ರ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ1 Jun 2021 11:31 PM IST
share
ಕೋವಿಡ್ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳ ಹಿತರಕ್ಷಣೆಗೆ 6 ಹಂತದ ಯೋಜನೆ: ಸುಪ್ರೀಂಗೆ ಕೇಂದ್ರ ಮಾಹಿತಿ

ಹೊಸದಿಲ್ಲಿ, ಜೂ.1: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಹೆತ್ತವರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಯೋಗಕ್ಷೇಮದ ನಿಟ್ಟಿನಲ್ಲಿ 6 ಹಂತದ ಯೋಜನೆಯನ್ನು ರೂಪಿಸಲಾಗಿದೆ ಎಂದು ಮಕ್ಕಳ ಹಕ್ಕು ರಕ್ಷಣೆಗಾಗಿನ ರಾಷ್ಟ್ರೀಯ ಆಯೋಗ(ಎನ್ಸಿಪಿಸಿಆರ್) ಸುಪ್ರೀಂಕೋರ್ಟ್ ಗೆ ಮಂಗಳವಾರ ಮಾಹಿತಿ ನೀಡಿದೆ. ನೂತನವಾಗಿ ರಚಿಸಿದ ಬಾಲಸ್ವರಾಜ್ ಪೋರ್ಟಲ್ ನಲ್ಲಿ 9,346 ಮಕ್ಕಳ ಮಾಹಿತಿ ಅಪ್ಲೋಡ್ ಮಾಡಲಾಗಿದೆ. ಇದರಲ್ಲಿ 1,742 ಮಕ್ಕಳು ಇಬ್ಬರು ಹೆತ್ತವರನ್ನು, 7,464 ಮಕ್ಕಳು ಒಬ್ಬರನ್ನು ಕಳೆದುಕೊಂಡಿದ್ದರೆ 140 ಮಕ್ಕಳನ್ನು ಪರಿತ್ಯಜಿಸಲಾಗಿದೆ. 2020ರ ಮಾರ್ಚ್ ನಿಂದ 2021ರ ಮೇ 29ರವರೆಗಿನ ಮಾಹಿತಿ ಇದಾಗಿದೆ ಎಂದು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಅಫಿದಾವಿತ್ ನಲ್ಲಿ ಉಲ್ಲೇಖಿಸಲಾಗಿದೆ. 

ಇದರಲ್ಲಿ 1,224 ಮಕ್ಕಳು ಈಗ ಪೋಷಕರ ಜತೆ ವಾಸಿಸುತ್ತಿದ್ದರೆ 985 ಮಕ್ಕಳು ಕುಟುಂಬದ ಸದಸ್ಯರ ಜತೆ(ಕಾನೂನು ಪ್ರಕಾರ ಪೋಷಕರು ಎಂದು ನಿಯೋಜಿತಾಗದವರು), 6612 ಮಕ್ಕಳು ಏಕಪೋಷಕರ ಜತೆ ವಾಸಿಸುತ್ತಿದ್ದಾರೆ. 31 ಮಕ್ಕಳನ್ನು ವಿಶೇಷ ದತ್ತು ಮಂಡಳಿಯಲ್ಲಿದ್ದಾರೆ. ಗರಿಷ್ಟ ಸಂಖ್ಯೆಯ ಮಕ್ಕಳು ಅನಾಥರಾದ ಅಥವಾ ಪರಿತ್ಯಜಿಸಲ್ಪಟ್ಟ ಪ್ರಕರಣ ಮಧ್ಯಪ್ರದೇಶದಲ್ಲಿ (318 ಮಕ್ಕಳು ಅನಾಥ, 104 ಮಕ್ಕಳು ಪರಿತ್ಯಜಿಸಲ್ಪಟ್ಟಿದ್ದಾರೆ) ವರದಿಯಾಗಿದೆ. 

ಏಕ ಪೋಷಕರನ್ನು ಕಳೆದುಕೊಂಡ ಮಕ್ಕಳ ಸಂಖ್ಯೆ ಉತ್ತರಪ್ರದೇಶದಲ್ಲಿ ಹೆಚ್ಚಿದೆ(1830 ಮಕ್ಕಳು). ಅಸುರಕ್ಷಿತ ವಲಯದಲ್ಲಿರುವ ಮಕ್ಕಳ ಸಂಖ್ಯೆಯೂ(ಅನಾಥರಾದವರು, ಪರಿತ್ಯಜಿಸಲ್ಪಟ್ಟವರು ಅಥವಾ ಒಬ್ಬರು ಪೋಷಕರನ್ನು ಕಳೆದುಕೊಂಡ ಮಕ್ಕಳು) ಉತ್ತರಪ್ರದೇಶದಲ್ಲಿ ಹೆಚ್ಚಿದೆ(2110 ಮಕ್ಕಳಿದ್ದಾರೆ). ಬಿಹಾರ 2ನೇ ಸ್ಥಾನದಲ್ಲಿದ್ದು ಇಲ್ಲಿ 1,327 ಮಕ್ಕಳು ಅಸುರಕ್ಷಿತ ವಲಯದಲ್ಲಿದ್ದಾರೆ. ಅಸುರಕ್ಷಿತ ವಲಯದಲ್ಲಿರುವ ಮಕ್ಕಳಲ್ಲಿ 788 ಮಕ್ಕಳು 3 ವರ್ಷಕ್ಕಿಂತ ಕೆಳಗಿನವರು. 4ರಿಂದ 7 ವರ್ಷದವರು 1,515, 8ರಿಂದ 13 ವರ್ಷದವರು 3,711, 14ರಿಂದ 15 ವರ್ಷದವರು 1,620, 16ರಿಂದ 17 ವರ್ಷದ 1,712 ಮಕ್ಕಳಿದ್ದಾರೆ. ಕೊರೋನದಿಂದ ಒಬ್ಬರು ಹೆತ್ತವರನ್ನು ಕಳೆದುಕೊಂಡು ಏಕಪೋಷಕರ ಜತೆಗಿರುವ ಮಕ್ಕಳಿಗೂ ಯೋಜನೆಯ ಆರ್ಥಿಕ ನೆರವು ಲಭ್ಯವಾಗಬೇಕು ಎಂದು ಆಯೋಗದ ಅಫಿದಾವಿತ್ನಲ್ಲಿ ಸಲಹೆ ನೀಡಲಾಗಿದೆ. 

ಈ ಹಿನ್ನೆಲೆಯಲ್ಲಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಯೋಗವು ರಾಜ್ಯ ಸರಕಾರ, ಜಿಲ್ಲಾ ಶಿಕ್ಷಣಾಧಿಕಾರಿ ಹಾಗೂ ಶಾಲೆಗಳಿಗೆ ಶಿಫಾರಸು ಮಾಡಿದೆ. ಕೋವಿಡ್ ಸೋಂಕಿನಿಂದ ಅನಾಥರಾದ ಮಕ್ಕಳ ವಿವರ ಸಲ್ಲಿಸುವಂತೆ ಕಳೆದ ವಾರ ಸುಪ್ರೀಂಕೋರ್ಟ್ ವಿವಿಧ ರಾಜ್ಯಗಳಿಗೆ ಹಾಗೂ ಎನ್ಸಿಪಿಸಿಆರ್ಗೆ ಸೂಚಿಸಿತ್ತು.

ಪ್ರಮುಖ ಶಿಫಾರಸುಗಳು

► ಇಬ್ಬರು ಹೆತ್ತವರನ್ನೂ ಕಳೆದುಕೊಂಡ ಮಕ್ಕಳು ಖಾಸಗಿ ಶಾಲೆಗೆ ಸೇರ್ಪಡೆಯಾದರೆ, ಅಂತಹ ಮಕ್ಕಳ ಪ್ರಾಥಮಿಕ ಶಿಕ್ಷಣದ ಸಂಪೂರ್ಣ ವೆಚ್ಚವನ್ನು ಆರ್ಟಿಇ ಕಾಯ್ದೆ 2009ರ ಸೆಕ್ಷನ್ 12(1)(ಸಿ)ಯಡಿ ಸಂಬಂಧಿತ ರಾಜ್ಯ ಸರಕಾರಗಳು ಭರಿಸಬೇಕು.
► ಇದಕ್ಕೆ, ಅಂತಹ ಮಕ್ಕಳು ತಮ್ಮ ಪೋಷಕರು ಅಥವಾ ಕುಟುಂಬದ ಯಾವುದೇ ಸದಸ್ಯರ ಜತೆ ಅಥವಾ ಶಾಲೆಯ ಸಿಬಂದಿಯ ಜತೆ ಆಯಾ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ)ಗೆ ಭೇಟಿ ನೀಡಬೇಕು. ಸಿಡಬ್ಲ್ಯೂಸಿಯ ದಾಖಲೆಯಲ್ಲಿ ನಮೂದಿಸಿದ ಬಳಿಕ ಈ ಮಕ್ಕಳನ್ನು ಆರ್ಟಿಇ ಫಲಾನುಭವಿಯ ಪಟ್ಟಿಗೆ ಸೇರಿಸಬೇಕು. ನಂತರ ಆಯಾ ಶಾಲೆಯು ಆ ಮಗುವಿನ ಶೈಕ್ಷಣಿಕ ವೆಚ್ಚವನ್ನು ಆರ್ಟಿಇ ಕಾಯ್ದೆಯಡಿ ಭರಿಸಲು ಕ್ರಮ ಕೈಗೊಳ್ಳಬೇಕು. ಇದು 1ರಿಂದ 8ನೇ ತರಗತಿಯ ಮಕ್ಕಳಿಗೆ ಕೈಗೊಳ್ಳಬೇಕಾದ ಕ್ರಮಗಳು. 

► 8ನೇ ತರಗತಿಯ ನಂತರದ ಶಿಕ್ಷಣ ಆರ್ಟಿಇ ಕಾಯ್ದೆಯ ವ್ಯಾಪ್ತಿಯಲ್ಲಿ ಇಲ್ಲದ ಕಾರಣ, ಈ ಮಕ್ಕಳ ಶೈಕ್ಷಣಿಕ ವೆಚ್ಚವನ್ನು ಭರಿಸುವ ಬಗ್ಗೆ ಮಾರ್ಗಸೂಚಿ ರೂಪಿಸುವಂತೆ ರಾಜ್ಯ ಸರಕಾರಗಳಿಗೆ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X