Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಂಡಮಾರುತ ಪರಿಹಾರ ಕಾರ್ಯಾಚರಣೆಯಲ್ಲಿ...

ಚಂಡಮಾರುತ ಪರಿಹಾರ ಕಾರ್ಯಾಚರಣೆಯಲ್ಲಿ ಸಂಬಿತ್ ಪಾತ್ರಾ ಪಾಲ್ಗೊಂಡಿಲ್ಲ: ಒಡಿಶಾ ಬಿಜೆಪಿ ನಾಯಕರು

ಕಾರ್ಯಾಚರಣೆಯ ನೆಪ ನೀಡಿ ʼಟೂಲ್ಕಿಟ್ʼ ವಿಚಾರಣೆಗೆ ಹಾಜರಾಗುವುದಿಲ್ಲ ಎಂದಿದ್ದ ಪಾತ್ರಾ

ವಾರ್ತಾಭಾರತಿವಾರ್ತಾಭಾರತಿ2 Jun 2021 6:35 PM IST
share
ಚಂಡಮಾರುತ ಪರಿಹಾರ ಕಾರ್ಯಾಚರಣೆಯಲ್ಲಿ ಸಂಬಿತ್ ಪಾತ್ರಾ ಪಾಲ್ಗೊಂಡಿಲ್ಲ: ಒಡಿಶಾ ಬಿಜೆಪಿ ನಾಯಕರು

ಭುವನೇಶ್ವರ,ಜೂ.2: ತಾನು ಒಡಿಶಾದಲ್ಲಿ ಯಾಸ್ ಚಂಡಮಾರುತ ಸಂಬಂಧಿ ಪರಿಹಾರ ಕಾರ್ಯಾಚರಣೆಗಳಲ್ಲಿ ವ್ಯಸ್ತನಾಗಿರುವುದರಿಂದ ಕಾಂಗ್ರೆಸ್ ‘ಟೂಲ್ಕಿಟ್’ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಅವರು ನೀಡಿದ್ದ ಕಾರಣವನ್ನು ರಾಜ್ಯದ ಬಿಜೆಪಿ ನಾಯಕರು ಅಲ್ಲಗಳೆದಿದ್ದಾರೆ. ಒಡಿಶಾದಲ್ಲಿ ತಳಮಟ್ಟದಲ್ಲಿ ಇಂತಹ ಯಾವುದೇ ಕಾರ್ಯಾಚರಣೆಯಲ್ಲಿ ಪಾತ್ರಾ ತೊಡಗಿಕೊಂಡಿಲ್ಲ ಎಂದು ಅವರು ಹೇಳಿದ್ದಾಗಿ thewire.in ವರದಿ ಮಾಡಿದೆ.

ಪಿಪಿಲಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ಆಶ್ರಿತ ಪಟ್ಟನಾಯಕ ಅವರ ಪರ ಪ್ರಚಾರಕ್ಕಾಗಿ ಪಾತ್ರಾ ಕಳೆದ ಎಪ್ರಿಲ್ ನಲ್ಲಿ ರಾಜ್ಯಕ್ಕೆ ಭೇಟಿ ನೀಡಿದ್ದೇ ಕೊನೆ. ಆ ಬಳಿಕ ಅವರು ಒಡಿಶಾಕ್ಕೆ ಬಂದಿಲ್ಲ ಎಂದು ರಾಜ್ಯ ಬಿಜೆಪಿಯ ಮೂಲಗಳು ತಿಳಿಸಿವೆ. ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಉಪಚುನಾವಣೆಯನ್ನು ಚುನಾವಣಾ ಆಯೋಗವು ಮುಂದೂಡಿದೆ.

ಚಂಡಮಾರುತ ಸಂತ್ರಸ್ತರಿಗಾಗಿ ಪರಿಹಾರ ಯತ್ನಗಳನ್ನು ಸಂಘಟಿಸುವುದರಲ್ಲಿ ಅಥವಾ ರಾಜ್ಯದಲ್ಲಿ ಕೋವಿಡ್ ಸ್ಥಿತಿಯ ನಿರ್ವಹಣೆಯಲ್ಲಿ ಪಾತ್ರಾ ಯಾವುದೇ ಪಾತ್ರವನ್ನು ವಹಿಸಿಲ್ಲ ಎಂದು ಒಡಿಶಾದ ಹಿರಿಯ ಬಿಜೆಪಿ ನಾಯಕರು ಹೇಳಿದರು.

ಪಾತ್ರಾ ಚಂಡಮಾರುತ ಸಂಬಂಧಿತ ಯಾವುದೇ ಕಾರ್ಯದಲ್ಲಿ ತಳಮಟ್ಟದಲ್ಲಿ ಭಾಗಿಯಾಗಿದ್ದು ತಮ್ಮ ಗಮನಕ್ಕೆ ಬಂದಿಲ್ಲ ಎಂದು ಈ ನಾಯಕರು ಹೇಳಿದರು. ಚಂಡಮಾರುತದಿಂದಾಗಿ ಬಾಲಾಸೋರ ಮತ್ತು ಭದ್ರಕ್ ನಂತಹ ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ಪಾತ್ರಾ ಅವರ ಕ್ಷೇತ್ರ ಪುರಿಯಲ್ಲಿ ಯಾವುದೇ ದೊಡ್ಡಮಟ್ಟದ ಹಾನಿ ವರದಿಯಾಗಿಲ್ಲ, ಹೀಗಾಗಿ ಅಲ್ಲಿ ಹೇಳಿಕೊಳ್ಳುವಂತಹ ಪರಿಹಾರ ಮತ್ತು ಪುನರ್ವಸತಿ ಕಾರ್ಯಾಚರಣೆಗಳೇನೂ ನಡೆಯುತ್ತಿಲ್ಲ ಎಂದು ತಿಳಿಸಿದ ಹೆಸರು ಹೇಳಿಕೊಳ್ಳಲು ಬಯಸದ ಬಿಜೆಪಿ ನಾಯಕರೋರ್ವರು, ಪಾತ್ರಾ ದಿಲ್ಲಿಯಿಂದ ಯಾವುದೇ ರೀತಿಯಲ್ಲಿ ಪರಿಹಾರ ಪ್ರಯತ್ನಗಳನ್ನು ಸಮನ್ವಯಿಸುತ್ತಿದ್ದರೆ ತನಗೆ ಆ ಬಗ್ಗೆ ಮಾಹಿತಿಯಿಲ್ಲ ಎಂದರು.

ಪಾತ್ರಾ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ನಾಯಕರಾಗಿರುವುದರಿಂದ ಅವರು ರಾಜ್ಯದಲ್ಲಿ ಪರಿಹಾರ ಕಾರ್ಯಾಚರಣೆ ನಡೆಸಿದ್ದರೆ ಅದು ಸಾರ್ವಜನಿಕರ ಗಮನಕ್ಕೆ ಬರುತ್ತಿತ್ತು ಎಂದು ರಾಜ್ಯ ಬಿಜೆಪಿ ನಾಯಕರು ತಿಳಿಸಿದರು.

ಪಾತ್ರಾ ಪರಿಹಾರ ಕಾರ್ಯಾಚರಣೆಗಳಲ್ಲಿ ವ್ಯಸ್ತರಾಗಿರುವದರಿಂದ ಅಲ್ಪಾವಧಿ ನೋಟಿಸ್ ನಲ್ಲಿ ಪೊಲೀಸರ ವಿಚಾರಣೆಗೆ, ವೀಡಿಯೊ ಕಾನ್ಫರೆನ್ಸ್ ಮೂಲಕವೂ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಅವರ ಪರ ವಕೀಲರು ತಿಳಿಸಿದ್ದರು. ಅವರಿಗೆ ಕನಿಷ್ಠ ಒಂದು ವಾರ ಮೊದಲು ನೋಟಿಸ್ ನೀಡುವುದು ಅಗತ್ಯವಾಗಿದೆ ಎಂದಿದ್ದರು.
 
ಕಾಂಗ್ರೆಸ್ ನ ವಿದ್ಯಾರ್ಥಿ ಘಟಕದ ದೂರಿನ ಮೇರೆಗೆ ರಾಯಪುರ ಪೊಲೀಸರು ಪಾತ್ರಾ,ಛತ್ತೀಸ್ಗಡದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮಣ ಸಿಂಗ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
 
ಮೋದಿ ಸರಕಾರದಿಂದ ಕೋವಿಡ್ ಬಿಕ್ಕಟ್ಟಿನ ಕೆಟ್ಟ ನಿರ್ವಹಣೆಯಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಕೋಮುಹಿಂಸೆ,ದ್ವೇಷ ಮತ್ತು ಸುಳ್ಳುಸುದ್ದಿಗಳನ್ನು ಹರಡಲು ಈ ನಾಯಕರು ಕಪೋಲಕಲ್ಪಿತ ವಿಷಯಗಳನ್ನು ಶೇರ್ ಮಾಡಿಕೊಳ್ಳಲು ಫೋರ್ಜರಿ ಮಾಡಲಾದ ಕಾಂಗ್ರೆಸ್ ನ ಲೆಟರ್ ಹೆಡ್ ಬಳಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X