Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಲಸಿಕೆ ವಿಚಾರದಲ್ಲಿ ಜಾತಿ, ಧರ್ಮ...

ಬಿಜೆಪಿ ಲಸಿಕೆ ವಿಚಾರದಲ್ಲಿ ಜಾತಿ, ಧರ್ಮ ತರುತ್ತಿರುವುದು ಖಂಡನೀಯ: ರಕ್ಷಾ ರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 Jun 2021 10:15 PM IST
share
ಬಿಜೆಪಿ ಲಸಿಕೆ ವಿಚಾರದಲ್ಲಿ ಜಾತಿ, ಧರ್ಮ ತರುತ್ತಿರುವುದು ಖಂಡನೀಯ: ರಕ್ಷಾ ರಾಮಯ್ಯ

ಬೆಂಗಳೂರು, ಜೂ. 2: ಕೋವಿಡ್ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಮಾರಾಟ ಮಾಡಿ ಲಾಭ ಮಾಡಿಕೊಂಡು ಜನರ ಜೀವದ ಜತೆ ಚೆಲ್ಲಾಟ ಆಡುತ್ತಿರುವ ಬಿಜೆಪಿ ನಾಯಕರು, ಇದೀಗ ಕೊರೋನ ಲಸಿಕೆ ವಿಚಾರದಲ್ಲಿ ಜಾತಿ, ಧರ್ಮ ತರುತ್ತಿರುವುದು ಖಂಡನೀಯ ಎಂದು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ರಕ್ಷಾ ರಾಮಯ್ಯ ಟೀಕಿಸಿದ್ದಾರೆ.

ಬುಧವಾರ ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು ಮಲ್ಲೇಶ್ವರಂ ಕ್ಷೇತ್ರದಲ್ಲಿ ದೇವಸ್ಥಾನಗಳ ಅರ್ಚಕರು ಮತ್ತು ಬ್ರಾಹ್ಮಣರ ಕುಟುಂಬ ಸದಸ್ಯರಿಗೆ ಪ್ರತ್ಯೇಕವಾಗಿ ಕೋವಿಡ್ ಲಸಿಕೆ ಶಿಬಿರ ಆಯೋಜಿಸಿದ್ದು, ಲಸಿಕೆಯಲ್ಲಿ ಜಾತಿ, ಧರ್ಮ ತಂದು ಭೇದ-ಭಾವ ಮಾಡುತ್ತಿರುವುದು ಅತ್ಯಂತ ಖಂಡನೀಯ. ನಿರ್ದಿಷ್ಟವಾಗಿ ಒಂದು ಸಮುದಾಯಕ್ಕೆ ಕದ್ದು ಮುಚ್ಚಿ ಲಸಿಕೆ ಅಭಿಯಾನ ನಡೆಸಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರು ಒಂದು ಕಡೆ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ವರ್ಗಾಯಿಸಿ ಸಾವಿನ ಮನೆಯಲ್ಲೂ ಹಗಲು ದರೋಡೆ ಮೂಲಕ ಹಣ ಗಳಿಸುವ ಹೀನ ಕೆಲಸದಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಸಿ.ವಿ.ರಾಮನ್ ನಗರದಲ್ಲಿ ಬಿಜೆಪಿ ಶಾಸಕ ಎಸ್.ರಘು ಸಾಮಾನ್ಯ ಜನರನ್ನು ನಿರ್ಲಕ್ಷಿಸಿ ಬಿಜೆಪಿ ಕಾರ್ಯಕರ್ತರಿಗೆ ಪ್ರತ್ಯೇಕ ಲಸಿಕಾ ಅಭಿಯಾನ ನಡೆಸಿದ್ದಾರೆ. ನಿಯಮಬದ್ಧವಾಗಿ ನೋಂದಣಿ ಮಾಡಿಕೊಂಡು ಸರತಿ ಸಾಲಿನಲ್ಲಿ ನಿಂತವರಿಗೆ ನೀಡಬೇಕಾಗಿದ್ದ ಲಸಿಕೆಯನ್ನು ಬಿಜೆಪಿ ಕಾರ್ಯಕರ್ತರಿಗೆ ವರ್ಗಾಯಿಸಿ ಘೋರ ಅಪರಾಧ ಮಾಡಿ ಜನ ಆಕ್ರೋಶಕ್ಕೆ ಒಳಗಾಗುವಂತೆ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಮಲ್ಲೇಶ್ವರಂನಲ್ಲಿ ದಲಿತರಿಗೆ ಲಸಿಕೆ ನಿರಾಕರಿಸಿ ಬ್ರಾಹ್ಮಣ ಸಮುದಾಯಕ್ಕೆ ಪ್ರತ್ಯೇಕವಾಗಿ ಲಸಿಕೆ ಹಾಕಿಸಿರುವುದು ನಿಜಕ್ಕೂ ಸರಿಯಲ್ಲ. ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಅಶ್ವತ್ಥ ನಾರಾಯಣ ಅವರು ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ಕ್ರಮದಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೂರು ದಾಖಲು

ತಾರತಮ್ಯ ಧೋರಣೆ ಅನುಸರಿಸಿ ಏನೂ ಆಗಿಯೇ ಇಲ್ಲ ಎನ್ನುವಂತೆ ಲಜ್ಜೆ ಬಿಟ್ಟು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ತಮ್ಮ ಕ್ರಮವನ್ನು ಸಮರ್ಥಿಸಿಕೊಳ್ಳತ್ತಿರುವುದು ಖಂಡನೀಯ. ಸೋಂಕು ನಿಯಂತ್ರಣಕ್ಕೆ ಪ್ರಮುಖ ಅಸ್ತ್ರವಾಗಿರುವ ಲಸಿಕೆಯಲ್ಲೂ ಲಾಭ ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಬಿಜೆಪಿಯವರು ಕೊರೋನ ವೈರಸ್‍ಗಿಂತಲೂ ಅಪಾಯಕಾರಿ ಎಂದು ರಕ್ಷಾ ರಾಮಯ್ಯ ಟೀಕಿಸಿದ್ದಾರೆ. ಈ ಮಧ್ಯೆ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ ನಾರಾಯಣ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಲ್ಲೇಶ್ವರಂ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಆಶಾ ದೂರು ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X