Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಕ್ರಮ ಪ್ರವೇಶ ಪ್ರಕರಣ: ಮೆಹುಲ್...

ಅಕ್ರಮ ಪ್ರವೇಶ ಪ್ರಕರಣ: ಮೆಹುಲ್ ಚೋಕ್ಸಿಗೆ ಜಾಮೀನು ನಿರಾಕರಿಸಿದ ಡೊಮಿನಿಕಾ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ3 Jun 2021 11:05 AM IST
share
ಅಕ್ರಮ ಪ್ರವೇಶ ಪ್ರಕರಣ: ಮೆಹುಲ್ ಚೋಕ್ಸಿಗೆ  ಜಾಮೀನು ನಿರಾಕರಿಸಿದ ಡೊಮಿನಿಕಾ ನ್ಯಾಯಾಲಯ

ಹೊಸದಿಲ್ಲಿ: ಆ್ಯಂಟಿಗಾದಿಂದ ಕೆರಿಬಿಯನ್ ದ್ವೀಪ ರಾಷ್ಟ್ರಕ್ಕೆ ಅಕ್ರಮವಾಗಿ ಪ್ರವೇಶಿಸಿದ ಪ್ರಕರಣದಲ್ಲಿ ಭಾರತದಲ್ಲಿ 13,500 ಕೋಟಿ ರೂ. ಬ್ಯಾಂಕ್ ಸಾಲ ವಂಚನೆ ಆರೋಪಿ,  ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಗೆ ಡೊಮಿನಿಕಾ ನ್ಯಾಯಾಲಯ ಇಂದು ಜಾಮೀನು ನಿರಾಕರಿಸಿದೆ.

ಗಾಲಿ ಕುರ್ಚಿಯ ಮೇಲೆ ಕುಳಿತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾದ ಚೋಕ್ಸಿ, ನಾನು ಯಾವುದೇ  ಅಪರಾಧ ಮಾಡಿಲ್ಲ. ನನ್ನನ್ನು ಡೊಮಿನಿಕಾ ದ್ವೀಪಕ್ಕೆ ಅಪಹರಿಸಲಾಗಿತ್ತು ಎಂದು ನ್ಯಾಯಾಲಯದ ಮುಂದೆ ಹೇಳಿದರು.

"ಡೊಮಿನಿಕಾದಲ್ಲಿ ವಿದೇಶಿಗರು ಇದೇ ರೀತಿಯ ವಿಷಯಗಳಿಗಾಗಿ ಜಾಮೀನಿನಲ್ಲಿದ್ದಾರೆ. ಆದ್ದರಿಂದ ನಮ್ಮ ಕ್ಲೈಂಟ್‌ಗೆ ಜಾಮೀನು ನೀಡಬಹುದು ಎಂಬ ಅಭಿಪ್ರಾಯ ನಮ್ಮದು. ಅಕ್ರಮ ಪ್ರವೇಶಕ್ಕಾಗಿ ಜಾಮೀನು ಮೊತ್ತವು 10,000 ಡಾಲರ್  ಗರಿಷ್ಠ ದಂಡ  ಸೇರಿದಂತೆ ಷರತ್ತಿನ ಮೇಲೆ ಜಾಮೀನು ನೀಡಿ’’ ಎಂದು ಚೋಕ್ಸಿ ವಕೀಲರು ನ್ಯಾಯಾಲಯದಲ್ಲಿ ವಾದಿಸಿದರು.

ಡೊಮಿನಿಕನ್ ಸರಕಾರವು ಚೋಕ್ಸಿಗೆ ಜಾಮೀನು ನೀಡಬಾರದು ಎಂದು ವಾದಿಸಿತು.

"ಚೋಕ್ಸಿಗೆ ಡೊಮಿನಿಕಾದಲ್ಲಿ ಯಾವುದೇ ಸಂಬಂಧವಿಲ್ಲ, ಭಾರತದಲ್ಲಿ 11 ಅಪರಾಧಗಳಿಗೆ ಸಂಬಂಧಿಸಿದಂತೆ ಆರೋಪಗಳನ್ನು ಎದುರಿಸುತ್ತಿರುವ ಕಾರಣ ಚೋಕ್ಸಿ ವಿರುದ್ಧ ಇಂಟರ್ ಪೋಲ್ ರೆಡ್ ನೋಟಿಸ್ ಇದೆ" ಎಂದು ಡೊಮಿನಿಕನ್ ಸರಕಾರ ನ್ಯಾಯಾಲಯಕ್ಕೆ ತಿಳಿಸಿದೆ .

ಎರಡೂ ಕಡೆಯ ವಾದವನ್ನು ಆಲಿಸಿದ ಮ್ಯಾಜಿಸ್ಟ್ರೇಟ್ ಚೋಕ್ಸಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X