Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ಗೊಂದಲದ ಗೂಡಾಗಿರುವ ಲಸಿಕಾ...

ಕುಂದಾಪುರ: ಗೊಂದಲದ ಗೂಡಾಗಿರುವ ಲಸಿಕಾ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ3 Jun 2021 7:32 PM IST
share
ಕುಂದಾಪುರ: ಗೊಂದಲದ ಗೂಡಾಗಿರುವ ಲಸಿಕಾ ಕೇಂದ್ರ

ಕುಂದಾಪುರ, ಜೂ.3: ಕೋವಿಡ್ ಮಹಾಮಾರಿಯ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಲಭ್ಯವಾಗಿರುವ ಲಸಿಕೆಯನ್ನು ನೀಡಲು ನಗರದಲ್ಲಿ ತೆರೆದಿರುವ ಕುಂದಾಪುರ ಕಲಾಮಂದಿರದ ಲಸಿಕಾ ಕೇಂದ್ರದಲ್ಲಿ ಇದೀಗ ಸಮಾಜ ಸೇವೆಯ ಸೋಗಿನಲ್ಲಿ ರಾಜಕೀಯ ತಾಂಡ ವವಾಡುತ್ತಿರುವ ಬಗ್ಗೆ ಸಾರ್ವಜನಿಕ ರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಲಸಿಕೆ ಹಾಕಿಸಿಕೊಳ್ಳಲು ಬೆಳ್ಳಂಬೆಳಗ್ಗೆ ದೂರದಿಂದ ಬಂದು ತಮ್ಮ ಸರತಿಗಾಗಿ ಸಂಜೆ ತನಕ ಕಾದಿದ್ದರೂ, ಕೇಂದ್ರದಲ್ಲಿ ಕಾಣಿಸಿಕೊಳ್ಳುವ ಪುಢಾರಿ ಗಳಿಂದಾಗಿ ಲಸಿಕೆ ಲಭ್ಯವಾಗದೆ, ಜನಸಾಮಾನ್ಯರು ಹಿಡಿಶಾಪ ಹಾಕುತ್ತಾ ಹಿಂದಿರುಗಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ಜನರು ದೂರುತಿದ್ದಾರೆ.

ಲಸಿಕಾ ಕೇಂದ್ರದಲ್ಲಿ ಅದಾಗಲೇ ತಳವೂರಿರುವ ಎರಡನೇ ಹಂತದ ರಾಜಕಾರಣಿಗಳು, ಜನಪ್ರತಿನಿಧಿಗಳ ಹಿಂಬಾಲಕರು, ಸುಖಾಸುಮ್ಮನೆ ತಮ್ಮ ಹೆಸರನ್ನು ನೋಂದಾಯಿಸಿ, ಲಸಿಕೆ ನೀಡಿಕೆಯ ಆರಂಭದ ಹಲವು ಸಂಖ್ಯೆಗಳನ್ನು ಅಥವಾ ಟೋಕನ್‌ಗಳನ್ನು ಕಾದಿರಿಸುತ್ತಾರೆ. ನಂತರ ತಮ್ಮ ಚೇಲಾಗಳು ಎಷ್ಟು ತಡವಾಗಿ ಬಂದರೂ ಸರಿ ಅವರು ಆ ಕೂಡಲೇ ಲಸಿಕೆ ಪಡೆಯುವಂತೆ ಮಾಡಿ ತಮ್ಮ ಪ್ರಭಾವವನ್ನು ತೋರ್ಪಡಿಸುವ ಜಿದ್ದಿಗೆ ಬಿದ್ದಿದ್ದಾರೆ.

ಇದು ಸಹಜವಾಗಿ ಬೆಳಿಗ್ಗೆಯಿಂದ ಲಸಿಕೆಗಾಗಿ ಕಾದು ಕಾದು ಹೈರಾಣಾಗಿರುವ ಸಾಮಾನ್ಯ ನಾಗರಿಕರು ಕೆರಳುವಂತೆ ಮಾಡುತ್ತಿದೆ. ಇದರ ಬಗ್ಗೆ ಯಾರಾದರೂ ವಿಚಾರಿಸಲು ಮುಂದಾದರೆ, ಜಿದ್ದಿಗೆ ಬಿದ್ದಂತೆ ಜಗಳಕ್ಕೆ ನಿಲ್ಲುತ್ತಾರೆ. ಕೆಲವು ಪುಢಾರಿಗಳ ಇಂಥ ವರ್ತನೆ ಲಸಿಕೆ ಪಡೆಯಲು ಸರತಿಯಲ್ಲಿ ನಿಂತಿರುವ ಸಾರ್ವಜನಿಕರನ್ನು ಇನ್ನಷ್ಟು ರೊಚ್ಚಿಗೇಳುವಂತೆ ಮಾಡುತ್ತಿದೆ. ಹೀಗಾಗಿ ಇಲ್ಲಿ ಪ್ರತಿದಿನ ಮಾತಿನ ಚಕಮಕಿ ಸಾಮಾನ್ಯ ವೆಂಬಂತಾಗಿದೆ.

ಲಸಿಕಾ ಕೇಂದ್ರದ ಅಸರ್ಮಪಕ ಕ್ರಮಗಳನ್ನು ಸಮಾಜ ಸೇವೆಯ ಹೆಸರಿನಲ್ಲಿ ಬಳಸಿಕೊಳ್ಳುತ್ತಿರುವ ಇವರು ತಮ್ಮ ಪಕ್ಷದವರಿಗೆ, ತಮ್ಮ ಹಿಂಬಾ ಲಕರಿಗೆ ಲಸಿಕೆ ಕೊಡಿಸುವಲ್ಲಿ ಸ್ಪರ್ಧೆಗೆ ಬಿದ್ದಂತೆ ವರ್ತಿಸುತಿದ್ದಾರೆ ಎಂದು ರೋಷತ್ತ ಜನಸಾಮಾನ್ಯರು ದೂರುತಿದ್ದಾರೆ.

ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾಡಳಿತ ಲಸಿಕಾ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆ ಯರನ್ನೋ, ಶಿಕ್ಷಕರನ್ನೋ ಅಥವಾ ಇನ್ನಿತರ ಅಧಿಕಾರಿಗಳನ್ನು ಕ್ರಮ ಬದ್ಧವಾಗಿ ಸೇವೆಗೆ ನಿಯುಕ್ತಿಗೊಳಿಸಿ, ವಾಕ್ಸಿನ್ ಕೇಂದ್ರದಲ್ಲೂ ಠಿಕಾಣಿ ಹೂಡಿ ತಮ್ಮ ರಾಜಕೀಯ ವೈರಸ್‌ಗಳನ್ನು ಪಸರಿಸುತ್ತಿರುವವರಿಗೆ ಕೂಡಲೇ ಕಡಿವಾಣ ಹಾಕಬೆೀಕೆಂಬ ಆಗ್ರಹ ಎಲ್ಲಡೆ ಕೇಳಿಬರುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X