Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''ಹಿಂದೂ ರಕ್ಷಣಾ ತಜ್ಞೆ ಶೋಭಾ ಅವರೇ,...

''ಹಿಂದೂ ರಕ್ಷಣಾ ತಜ್ಞೆ ಶೋಭಾ ಅವರೇ, ಚಾಮರಾಜನಗರದ ಹಿಂದೂಗಳ ಸಾವಿನ ಬಗ್ಗೆ ನಿಮ್ಮ ಅಭಿಪ್ರಾಯವೇನು?''

ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ3 Jun 2021 8:23 PM IST
share
ಹಿಂದೂ ರಕ್ಷಣಾ ತಜ್ಞೆ ಶೋಭಾ ಅವರೇ, ಚಾಮರಾಜನಗರದ ಹಿಂದೂಗಳ ಸಾವಿನ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಬೆಂಗಳೂರು, ಜೂ. 3: 'ಸಂಸದೆ ಶೋಭಾ ಕರಂದ್ಲಾಜೆ ಅವರೇ, ಕೋವಿಡ್ ಲಾಕ್‍ಡೌನ್ ಅಸಹಾಯಕತೆಯಿಂದ ಚಾಮರಾಜನಗರದಲ್ಲಿ ನಾಲ್ವರು ಹಿಂದೂಗಳ ಸಾವಾಗಿದೆ. ಹಿಂದೂಗಳ ರಕ್ಷಣೆ ನಿಮ್ಮ ಹೊಣೆಯಲ್ಲವೇ? ಈ ಅಸಹಾಯಕ ಸಾವುಗಳ ಬಗ್ಗೆ 'ಹಿಂದೂ ರಕ್ಷಣಾ ತಜ್ಞೆ'ಯಾದ ನಿಮ್ಮ ಅಭಿಪ್ರಾಯವೇನು?' ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಇಂದಿಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಮಹದೇವಪ್ಪ ಅವರು, `ಕೋವಿಡ್ ಸೋಂಕು ತಡೆಗೆ ಲಾಕ್ ಮಾಡಿಕೊಂಡು ಬಡ ಕುಟುಂಬಗಳಿಗೆ ಆಹಾರವನ್ನೂ ನೀಡದೇ ಅವರ ಸಾವಿಗೆ ಕಾರಣವಾಗುತ್ತಿರುವ ರಾಜ್ಯ ಬಿಜೆಪಿ ಸರಕಾರ ಬಡವರಿಗೆ ನೆರವಾಗುವ ಇಚ್ಛೆ ಇಲ್ಲದಿದ್ದರೆ ಕೊರೋನ ಲಾಕ್‍ಡೌನ್ ಅನ್ನು ರದ್ದುಗೊಳಿಸಲಿ! ಲಾಕ್‍ಡೌನ್ ಮಾಡಬೇಕಾಗಿರುವುದು ಪ್ರಾಣ ಉಳಿಸಲೆಂದೇ ವಿನಃ ಪ್ರಾಣ ತೆಗೆಯಲು ಅಲ್ಲ' ಎಂದು ಸಲಹೆ ನೀಡಿದ್ದಾರೆ.

ಇನ್ನು ಕೊರೋನ ಸೋಂಕು ಬಂದು ಸಹಜೀವಿಗಳು ಕಷ್ಟದಲ್ಲಿದ್ದಾಗ ಕನಿಷ್ಠ ಸಹಾಯ ಮಾಡಲಾಗದಿದ್ದರೂ ಅವರನ್ನು ನಿಂದಿಸಿ ಮನಸ್ಸು ನೋಯಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ವಿನಂತಿಸಿಕೊಳ್ಳುತ್ತೇನೆ. ಹಾಗೂ ಮಾನವೀಯ ಪ್ರಜ್ಞೆಯನ್ನು ಮೀರಿ ಸೋಂಕಿತರನ್ನು ಹಿಂಸಿಸುವ, ದೌರ್ಜನ್ಯ ಎಸಗುವವರ ಮೇಲೆ ಸರಕಾರ ಕಠಿಣ ಕಾನೂನು ಕ್ರಮ ಜರುಗಿಸಲಿ' ಎಂದು ಮಹದೇವಪ್ಪ ಆಗ್ರಹಿಸಿದ್ದಾರೆ.

ಲಾಕ್‍ಡೌನ್ ವಿಸ್ತರಿಸುವ ಸಮಯದಲ್ಲಿ ಆ ದಿನದ ದುಡಿಮೆಯನ್ನೇ ನೆಚ್ಚಿಕೊಂಡು ಬದುಕುವ ಜನ ಸಾಮಾನ್ಯರು ಬದುಕಿಗೆ ನೆರವಾಗಬೇಕೆಂಬ ಕನಿಷ್ಠ ಪ್ರಜ್ಞೆಯಿಲ್ಲದ ಈ ಕ್ರೂರ ಸರಕಾರದ ಅಸಮರ್ಥತೆಯೇ ಮುಗ್ಧ ಬಡಜನರ ಸಾವುಗಳಿಗೆ ನೇರ ಕಾರಣ. ಇದರ ಜವಾಬ್ದಾರಿಯನ್ನು ರಾಜ್ಯ ಸರಕಾರವೇ ಹೊರಬೇಕು' ಎಂದು ಮಾಜಿ ಸಚಿವ ಡಾ.ಮಹದೇವಪ್ಪ ಎಚ್ಚರಿಸಿದ್ದಾರೆ.

ಕೊರೋನ ಸೋಂಕಿನ ಸಂದರ್ಭದಲ್ಲಿನ ಬಡತನದಿಂದಾಗಿ ಚಾಮರಾಜನಗರದಲ್ಲಿ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುಃಖದ ವಿಷಯ. ನಿಜಕ್ಕೂ ಈ ಸಾವುಗಳು ಜನಪ್ರತಿನಿಧಿಗಳ ನಿರ್ಲಕ್ಷ್ಯ ಮತ್ತು ರಾಜ್ಯ ಬಿಜೆಪಿ ಸರಕಾರದ ಬೇಜವಾಬ್ದಾರಿ ತನದಿಂದ ಉಂಟಾದ ಸಾವು' ಎಂದು ಮಹದೇವಪ್ಪ ಆರೋಪ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X