Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಸೋಂಕಿತ ಇಬ್ಬರು ಹಿರಿಯ...

ಕೋವಿಡ್ ಸೋಂಕಿತ ಇಬ್ಬರು ಹಿರಿಯ ನಾಗರಿಕರಿಗೆ ಮೊನೊಕ್ಲೊನಲ್ ಪ್ರತಿಕಾಯ ಚಿಕಿತ್ಸೆ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ3 Jun 2021 10:55 PM IST
share

ಹೊಸದಿಲ್ಲಿ, ಜೂ.3: ಕೋವಿಡ್ ಸೋಂಕಿತ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿರುವ ಇಬ್ಬರು ಹಿರಿಯ ನಾಗರಿಕರಿಗೆ ಹೊಸದಿಲ್ಲಿಯ ಖಾಸಗಿ ಆಸ್ಪತೆಯಲ್ಲಿ ಮೊನೊಕ್ಲೊನಲ್ ಪ್ರತಿಕಾಯ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಗುರುವಾರ ಹೇಳಿದ್ದಾರೆ.

ಮೊನೊಕ್ಲೊನಲ್ ಪ್ರತಿಕಾಯ ಚಿಕಿತ್ಸೆಯು ಸೋಂಕಿನ ಸೌಮ್ಯ ಲಕ್ಷಣವುಳ್ಳ ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯನ್ನು 70%ದಷ್ಟು ಕಡಿಮೆಗೊಳಿಸುತ್ತದೆ. ಸುನಿರ್ಮಲ್ ಘಾಟಕ್(70 ವರ್ಷ) ಹಾಗೂ ಸುರೇಶ್ ಕುಮಾರ್ ಟೆಹ್ರಾನ್ (65 ವರ್ಷ)ಗೆ ಮಂಗಳವಾರ ಹೊಸದಿಲ್ಲಿಯ ಬಿಎಲ್‌ಕೆ-ಮ್ಯಾಕ್ಸ್ ಸುಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊನೊಕ್ಲೊನಲ್ ಪ್ರತಿಕಾಯ ಚಿಕಿತ್ಸೆಯ ಭಾಗವಾಗಿ ಕ್ಯಾಸಿರಿವಿಮ್ಯಾಬ್ ಮತ್ತು ಇಮ್ಡೆವಿಮ್ಯಾಬ್ ಲಸಿಕೆಯ ಸಮ್ಮಿಶ್ರ ಚಿಕಿತ್ಸೆ(ಕಾಕ್‌ಟೈಲ್ ಥೆರಪಿ) ನೀಡಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ. ಅಮೆರಿಕದ ಸಂಸ್ಥೆ ಅಭಿವೃದ್ಧಿಗೊಳಿಸಿರುವ ಈ ಸಮ್ಮಿಶ್ರ ಚಿಕಿತ್ಸೆಯು ರೋಗಿಗಳಲ್ಲಿ ಸಾರ್ಸ್-2 ಮತ್ತು ಕೋವಿಡ್-19 ವೈರಸ್ ವಿರುದ್ಧದ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಘಾಟಕ್ ಈ ಹಿಂದೆ ಹೃದಯದ ಸಮಸ್ಯೆಯಿಂದ ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದರು. ಟೆಹ್ರಾನ್ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಇಬ್ಬರಲ್ಲೂ ಆಮ್ಲಜನಕ ಆರ್ದ್ರೀಕರಣ ಮಟ್ಟ 95%ವಿತ್ತು ಮತ್ತು ಕೊರೋನ ಸೋಂಕಿನ ಮೃದು ಲಕ್ಷಣ ಕಂಡುಬಂದ 3 ದಿನದೊಳಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಹೇಳಿವೆ. ಇಬ್ಬರಿಗೂ

ಮೊನೊಕ್ಲೊನಲ್ ಪ್ರತಿಕಾಯ ಸಮ್ಮಿಶ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಕೊರೋನ ಸೋಂಕು ಗಂಭೀರ ಮಟ್ಟಕ್ಕೆ ತಿರುಗುವ ಅಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಮೊನೊಕ್ಲೋನಲ್ ಪ್ರತಿಕಾಯ ಸಮ್ಮಿಶ್ರ ಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ. ಎಬೋಲಾ, ಎಚ್‌ಐವಿ ಮುಂತಾದ ಸೋಂಕಿಗೆ ಈ ಚಿಕಿತ್ಸೆ ಬಳಸಲಾಗುತ್ತಿತ್ತು. 65 ವರ್ಷ ಮೀರಿದ, ಕೊರೋನ ಸೋಂಕಿನ ಲಕ್ಷಣ ಕಂಡು ಬಂದ 10 ದಿನದೊಳಗೆ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಈ ಚಿಕಿತ್ಸಾ ವಿಧಾನ ಅತ್ಯಂತ ಸೂಕ್ತವಾಗಿದೆ ಎಂದು ಬಿಎಲ್‌ಕೆ-ಮ್ಯಾಕ್ಸ್ ಆಸ್ಪತ್ರೆಯ ಹಿರಿಯ ನಿರ್ದೇಶಕ ಡಾ. ಸಂದೀಪ್ ನಾಯರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X