Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವೇಗೌಡರ ಪ್ರಧಾನಿಯಾಗಿದ್ದಾಗ ಯಾವುದೇ...

ದೇವೇಗೌಡರ ಪ್ರಧಾನಿಯಾಗಿದ್ದಾಗ ಯಾವುದೇ ರೀತಿಯಲ್ಲಿ ಅಪಸ್ವರ ಇರಲಿಲ್ಲ: ಎಸ್.ಎಂ.ಕೃಷ್ಣ

ವಾರ್ತಾಭಾರತಿವಾರ್ತಾಭಾರತಿ5 Jun 2021 9:11 PM IST
share
ದೇವೇಗೌಡರ ಪ್ರಧಾನಿಯಾಗಿದ್ದಾಗ ಯಾವುದೇ ರೀತಿಯಲ್ಲಿ ಅಪಸ್ವರ ಇರಲಿಲ್ಲ: ಎಸ್.ಎಂ.ಕೃಷ್ಣ

ಬೆಂಗಳೂರು, ಜೂ. 5: `ಎಚ್.ಡಿ.ದೇವೇಗೌಡ ಅವರು ದೇಶದ ಪ್ರಧಾನಿಯಾಗಿ ಅತ್ಯಂತ ಶಿಸ್ತು, ಸಂಯಮ, ಗೌರವದಿಂದ ದೇಶವನ್ನು ಆಳಿದರು. ಅವರ ಆಡಳಿತಾವಧಿಯಲ್ಲಿ ಯಾವುದೇ ರೀತಿಯಲ್ಲಿ ಅಪಸ್ವರ ಇರಲಿಲ್ಲ' ಎಂದು ಮಾಜಿ ವಿದೇಶಾಂಗ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಇಂದಿಲ್ಲಿ ಬಣ್ಣಿಸಿದ್ದಾರೆ.

ಶನಿವಾರ ಎಚ್.ಡಿ.ದೇವೇಗೌಡ ಪ್ರಧಾನಿಯಾಗಿ 25 ವರ್ಷ ಸಾಧನೆ-ಸ್ಮರಣೆ ಅಭಿಯಾನದಲ್ಲಿ ಆನ್‍ಲೈನ್ ಮಾತನಾಡಿದ ಅವರು, `ಕಾಂಗ್ರೆಸ್ ಪಕ್ಷ ನೀಡಿದ ಬೆಂಬಲವನ್ನು ಹಿಂಪಡೆದ ಕಾರಣ ದೇವೇಗೌಡ ನೇತೃತ್ವದ ಕೇಂದ್ರ ಸರಕಾರ ವಿಶ್ವಾಸಮತ ಗಳಿಸುವಲ್ಲಿ ಸೋತಿತು. ವಾಜಪೇಯಿ ಸರಕಾರ ಪತನದ ಬಳಿಕ ಕಾಂಗ್ರೆಸ್ ತೃತೀಯ ರಂಗಕ್ಕೆ ಬೇಷರತ್ ಬೆಂಬಲ ನೀಡುವ ಭರವಸೆಯನ್ನು ಆಗಿನ ಎಐಸಿಸಿ ಅಧ್ಯಕ್ಷ ಪಿ.ವಿ.ನರಸಿಂಹರಾವ್ ನೀಡಿದ್ದರು. ಇದಕ್ಕೆ ನಾನು ಸಾಕ್ಷಿಯಾಗಿದ್ದೆ' ಎಂದು ಸ್ಮರಿಸಿದರು.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ನರಸಿಂಹರಾವ್ ಬದಲಾವಣೆಯಾಗಿ ಆ ಸ್ಥಾನಕ್ಕೆ ಸೀತಾರಾಂ ಕೇಸರಿ ಬಂದರು. ದೇವೇಗೌಡ ಹಾಗೂ ಸೀತಾರಾಮ್ ಕೇಸರಿ ಅವರು ನಡುವಿನ ಸಂಬಂಧ ಚೆನ್ನಾಗಿತ್ತು. ಆದರೂ, ನಂತರದ ದಿನಗಳಲ್ಲಿ ಸಂಶಯ ಸೃಷ್ಟಿಯಾಯಿತು. ಈ ಬೆಳವಣಿಗೆಗಳ ಮಧ್ಯೆಯೇ ರಾಜ್ಯದ ಕಾಂಗ್ರೆಸ್ ನಾಯಕರು ಹೈಕಮಾಂಡ್‍ಗೆ ಬೆಂಬಲ ಹಿಂಪಡೆಯಲು ಆಗ್ರಹಿಸುತ್ತಿದ್ದರು. ಈ ಒತ್ತಡಕ್ಕೆ ದೇವೇಗೌಡ ಬಲಿಯಾಗಬೇಕಾಯಿತು' ಎಂದು ಕೃಷ್ಣ ಹೇಳಿದರು.

ಕಾಂಗ್ರೆಸ್ ಪಕ್ಷ ಬೆಂಬಲ ಹಿಂಪಡೆಯುವ ಸುಳಿವು ದೇವೇಗೌಡ ಅವರಿಗೆ ಗುಪ್ತಚರ ಇಲಾಖೆಯಿಂದ ಸಿಕ್ಕ ಕೂಡಲೇ ಆರ್.ಕೆ.ಧವನ್ ಮತ್ತು ನಾನು, ಗೌಡರ ನಿವಾಸಕ್ಕೆ ತೆರಳಿದ್ದೆವು. ಆಗ ಧವನ್ ಅವರು ಇದನ್ನು ತಡೆಯಲು ಹೊರಟಿದ್ದರು. ಆದರೆ, ಆ ವೇಳೆಗಾಗಲೇ ಕಾಂಗ್ರೆಸ್ ಪಕ್ಷದ ಅಂದಿನ ಅಧ್ಯಕ್ಷ ಸೀತಾರಾಮ್ ಕೇಸರಿ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಬೆಂಬಲ ಹಿಂಪಡೆಯುವ ಮಾಹಿತಿ ನೀಡಿದ್ದರು. ಹೀಗಾಗಿ ಅಂದಿನ ರಾಷ್ಟ್ರಪತಿಗಳು, ಲೋಕಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಲು ಸೂಚನೆ ನೀಡಿದ್ದರು. ಕಾಂಗ್ರೆಸ್ ಬೆಂಬಲ ಹಿಂಪಡೆದ ಪರಿಣಾಮ ದೇವೇಗೌಡ ನೇತೃತ್ವದ ಸರಕಾರ ಪತನವಾಯಿತು' ಎಂದು ಎಸ್.ಎಂ.ಕೃಷ್ಣ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X