Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟ್ವಿಟರ್ ನಲ್ಲಿ ಆದಿತ್ಯನಾಥ್ ಗೆ ಜನ್ಮದಿನ...

ಟ್ವಿಟರ್ ನಲ್ಲಿ ಆದಿತ್ಯನಾಥ್ ಗೆ ಜನ್ಮದಿನ ಶುಭಾಶಯ ಕೋರದ ಪ್ರಧಾನಿ ಮೋದಿ: ಬಿಜೆಪಿ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ5 Jun 2021 11:12 PM IST
share
ಟ್ವಿಟರ್ ನಲ್ಲಿ ಆದಿತ್ಯನಾಥ್ ಗೆ ಜನ್ಮದಿನ ಶುಭಾಶಯ ಕೋರದ ಪ್ರಧಾನಿ ಮೋದಿ: ಬಿಜೆಪಿ ಹೇಳಿದ್ದೇನು?

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಡುವೆ ಎಲ್ಲವೂ ಚೆನ್ನಾಗಿಲ್ಲವೇ? ಜೂನ್ 5 ರ ಶನಿವಾರ ಆದಿತ್ಯನಾಥ್ ಅವರ ಜನ್ಮದಿನದಂದು ಪ್ರಧಾನ ಮಂತ್ರಿಯವರು ಸಾಮಾಜಿಕ ಮಾಧ್ಯಮ ಟ್ವಿಟರ್ ನಲ್ಲಿ ಶುಭಾಶಯ ಕೋರದೇ ಇರುವುದು  ಈ ರೀತಿಯ ಊಹಾಪೋಹಗಳು ಹರಿದಾಡಲು ಕಾರಣವಾಗಿದೆ ಎಂದು India Today ವರದಿ ಮಾಡಿದೆ.

ಭಾರತದ ನಾಯಕರಿಗೆ ಮಾತ್ರವಲ್ಲದೆ ವಿದೇಶಿ ನಾಯಕರಿಗೆ  ಅಭಿನಂದನಾ ಸಂದೇಶಗಳನ್ನು ನೀಡುವುದನ್ನು ತಪ್ಪಿಸಿಕೊಳ್ಳದ ಪ್ರಧಾನಿ ಮೋದಿಯವರು ಈ ವರ್ಷ ಸಿಎಂ ಆದಿತ್ಯನಾಥ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಟ್ವೀಟ್ ಮಾಡಲು ವಿಫಲರಾಗಿದ್ದಾರೆ ಎಂದು ಟ್ವೀಟ್ ಬಳಕೆದಾರರು  ಅಸಮಾಧಾನ ವ್ಯಕ್ತಪಡಿಸಿದರು.

"ಕಾಣೆಯಾದ ಹುಟ್ಟುಹಬ್ಬದ ಶುಭಾಶಯಗಳು" ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳಿಗೆ ಉತ್ತೇಜನ ನೀಡಿತ್ತು. ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮುಂಚೆಯೇ ದಿಲ್ಲಿಯ ಬಿಜೆಪಿ ಉನ್ನತ ನಾಯಕರು ಉತ್ತರಪ್ರದೇಶ ಮುಖ್ಯಮಂತ್ರಿ ವಿರುದ್ಧದ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಹೆಣಗಾಡುತ್ತಿದ್ದಾರೆ ಎಂಬ ವರದಿಗಳು ಬಂದಿವೆ.

ಈ ವಾರದ ಆರಂಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಲಕ್ನೋದಲ್ಲಿ ಮಂತ್ರಿಗಳು ಮತ್ತು ಪಕ್ಷದ ಮುಖಂಡರೊಂದಿಗೆ ಆದಿತ್ಯನಾಥ್ ಸರಕಾರದ ಬಗ್ಗೆ ಪ್ರತಿಕ್ರಿಯೆ ಸಂಗ್ರಹಿಸಲು ಹಾಗೂ  2022 ರ ವಿಧಾನಸಭೆಗೆ ರಾಜ್ಯ ಘಟಕದ ಸಿದ್ಧತೆಗಳನ್ನು ನಿರ್ಣಯಿಸಲು ಮಾಹಿತಿ ಸಂಗ್ರಹಿಸಿದರು. ದಿಲ್ಲಿಯ ನಾಯಕರು  ಮುಚ್ಚಿದ ಬಾಗಿಲುಗಳ ಹಿಂದೆ ಸಿಎಂ ಆದಿತ್ಯನಾಥ್  ಅವರನ್ನು ಭೇಟಿಯಾಗಿದ್ದರು.

ಪ್ರಧಾನಮಂತ್ರಿ ಮೋದಿಯವರು  ಆದಿತ್ಯ ನಾಥ್ ಗೆ ಶುಭಾಶಯಗಳನ್ನುಕೋರದೇ ಇರುವುದು  ಬಿಜೆಪಿಯಲ್ಲಿನ ಬಿರುಕಿನ ಸಂಕೇತವಾಗಿದೆ ಎನ್ನುವ ಮಾತನ್ನು ಸರಕಾರದ ಮೂಲಗಳು ತಳ್ಳಿ ಹಾಕಿದವು. ದೇಶದಲ್ಲಿ ಕೋವಿಡ್ -19 ಎರಡನೇ ಅಲೆಯ ಅಬ್ಬರದ ಬಳಿಕ  ಪ್ರಧಾನ ಮಂತ್ರಿ ತಮ್ಮ ಸಾಂಪ್ರದಾಯಿಕ ಜನ್ಮದಿನದ ಶುಭಾಶಯಗಳನ್ನು ರಾಜಕೀಯ ಮುಖಂಡರಿಗೆ ಪೋಸ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಎಪ್ರಿಲ್ ಕೊನೆಯ ವಾರದಿಂದ ಪ್ರಧಾನಿ ಯಾವುದೇ ನಾಯಕನಿಗೆ ಶುಭಾಶಯ ಕೋರಿಲ್ಲ. ಇದು ರಾಷ್ಟ್ರಕ್ಕೆ ವಿಷಾದಕರ ಅವಧಿ. ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹಬ್ಬದ ಸಂದರ್ಭ ಪ್ರಧಾನಿ ಜನರಿಗೆ ಶುಭಾಶಯ ಕೋರಿದ್ದಾರೆ.  ಆದರೆ ಯಾವ ನಾಯಕರಿಗೂ ವೈಯಕ್ತಿಕ ಶುಭಾಶಯಗಳನ್ನು ಕೋರುವುದನ್ನು ನಿಲ್ಲಿಸಲಾಗಿದೆ’’ ಎಂದು ಸರಕಾರದ ಹಿರಿಯ ಸಚಿವರು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X