Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆದ್ಯತಾ ವಲಯದ ಫಲಾನುಭವಿಗಳಿಗೆ ನಿಗದಿತ...

ಆದ್ಯತಾ ವಲಯದ ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗೆ ಕೋವಿಡ್ ಲಸಿಕೆ: ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Jun 2021 5:05 PM IST
share
ಆದ್ಯತಾ ವಲಯದ ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗೆ ಕೋವಿಡ್ ಲಸಿಕೆ: ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್

ಶಿವಮೊಗ್ಗ, ಜೂ.7: ಸರ್ಕಾರ ಈಗಾಗಲೇ ಗುರುತಿಸಿರುವ 23 ಆದ್ಯತಾ ವಲಯಗಳ ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಆದ್ಯತಾ ವಲಯದ ಲಸಿಕೆ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿದರು.

ಸರ್ಕಾರದ ಮಾರ್ಗಸೂಚಿ ಪ್ರಕಾರ ಗುರುತಿಸಲಾಗಿರುವ ಫಲಾನುಭವಿಗಳಿಗೆ ಮಾತ್ರ ಲಸಿಕೆಯನ್ನು ಹಾಕಬೇಕು. ಫಲಾನುಭವಿಗಳಲ್ಲದವರಿಗೆ ಲಸಿಕೆ ನೀಡಲು ಪ್ರಮಾಣೀಕರಿಸುವ ನೋಡಲ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಫಲಾನುಭವಿಗಳ ಪಟ್ಟಿಯನ್ನು ಮಾಡಿ ಲಸಿಕೆ ಅಭಿಯಾನದ ನೋಡಲ್ ಅಧಿಕಾರಿಗೆ ನೀಡಿದರೆ ಲಸಿಕೆ ನೀಡಲು ಅವರು ಕ್ರಮ ಕೈಗೊಳ್ಳುವರು. ಅಥವಾ ಕನಿಷ್ಠ 150ಮಂದಿ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿದರೆ ನಿಗದಿತ ಸ್ಥಳದಲ್ಲಿ ಲಸಿಕೆ ಶಿಬಿರವನನ್ನು ಆಯೋಜಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿರುವ ಎಲ್ಲಾ ವಿಕಲ ಚೇತನರಿಗೆ ಈ ವಾರದ ಅಂತ್ಯದ ಒಳಗಾಗಿ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು. ಬೀದಿಬದಿ ವ್ಯಾಪಾರಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ಇದೇ ರೀತಿ ಪರವಾನಿಗೆ ಪಡೆದಿರುವ ರಿಕ್ಷಾ ಮತ್ತು ಕ್ಯಾಬ್ ಚಾಲಕರು, ಬೀದಿಬದಿ ವ್ಯಾಪಾರಿಗಳು, ಕಟ್ಟಡ ಕಾರ್ಮಿಕರು, ಪೆಟ್ರೋಲ್ ಬಂಕ್ ಮತ್ತು ಗ್ಯಾಸ್ ಏಜೆನ್ಸಿ ಸಿಬ್ಬಂದಿಗಳು, ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ಸೇರಿದಂತೆ ಆದ್ಯತಾ ವಲಯದಲ್ಲಿರುವ ಎಲ್ಲರಿಗೂ ಲಸಿಕೆ ಹಾಕಲು ವ್ಯವಸ್ಥಿತ ಕ್ರಮ ಕೈಗೊಳ್ಳಬೇಕು. ಕಟ್ಟಡ ಕಾರ್ಮಿಕರನ್ನು ವಾರ್ಡ್‌ವಾರು ಗುರುತಿಸಿ ಲಸಿಕೆ ಶಿಬಿರವನ್ನು ಸ್ಥಳೀಯವಾಗಿ ಆಯೋಜಿಸುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ ಇನ್ನೂ ಬಹಳಷ್ಟು ಆರೋಗ್ಯ ಕಾರ್ಯಕರ್ತರು ಲಸಿಕೆಯನ್ನು ಪಡೆದುಕೊಂಡಿರುವುದಿಲ್ಲ. ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು ಎಂದರು.

ತಜ್ಞರ ಸಮಿತಿ ಸಭೆ: ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳಿಗೆ ಕರೋನಾ ಹರಡುವುದನ್ನು ಎದುರಿಸಲು ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಬಗ್ಗೆ ರಚಿಸಲಾಗಿರುವ ತಜ್ಞರ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಅವರು ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು.

ಮಕ್ಕಳ ಕೊರೋನ ನಿರ್ವಹಣೆಗೆ ಅನುಕೂಲವಾಗುವಂತೆ ಗ್ರಾಮೀಣ ಮಟ್ಟದ ಆರೋಗ್ಯ ಕಾರ್ಯಕರ್ತರು, ನರ್ಸ್‌ಗಳು, ವೈದ್ಯರು ಅನುಸರಿಸಬೇಕಾದ ಮಾರ್ಗಸೂಚಿಯನ್ನು ಸಿದ್ಧಪಡಿಸಬೇಕು. ಇದೇ ರೀತಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳ ಕೊರೋನ ನಿರ್ವಹಣೆಗೆ ಅಗತ್ಯವಿರುವ ಯಂತ್ರೋಪಕರಣಗಳು, ಪ್ರಯೋಗ ಸಾಮಾಗ್ರಿಗಳು, ಔಷಧಗಳ ಪಟ್ಟಿಯನ್ನು ಸಲ್ಲಿಸಬೇಕು. ಈಗಾಗಲೇ ಅನಾರೋಗ್ಯ ಪೀಡಿತರಾಗಿರುವ ಮಕ್ಕಳ ತಾಲೂಕುವಾರು ಡಾಟಾಬೇಸ್ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಆರ್‍ಸಿಎಚ್ ಅಧಿಕಾರಿ ಡಾ.ನಾಗರಾಜ ನಾಯಕ್, ಡಾ.ಧನಂಜಯ ಸರ್ಜಿ, ಡಾ.ಎಚ್.ಆರ್.ಪಾಟೀಲ್ ಸೇರಿದಂತೆ ತಜ್ಞರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X