Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಸೌಹಾರ್ದ ಚಾರಿಟೇಬಲ್...

ಮೂಡುಬಿದಿರೆ: ಸೌಹಾರ್ದ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ಉಚಿತ ಆ್ಯಂಬುಲೆನ್ಸ್ ಸೇವೆ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ7 Jun 2021 6:47 PM IST
share
ಮೂಡುಬಿದಿರೆ: ಸೌಹಾರ್ದ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ಉಚಿತ ಆ್ಯಂಬುಲೆನ್ಸ್ ಸೇವೆ ಪ್ರಾರಂಭ

ಮೂಡುಬಿದಿರೆ, ಜೂ.7: ಸೌಹಾರ್ದ ಚಾರಿಟೇಬಲ್ ಟ್ರಸ್ಟ್‌ ಮೂಡುಬಿದಿರೆ ಇದರ ಮಹತ್ವಾಕಾಂಕ್ಷಿ ಯೋಜನೆಯಾಗಿ ಮೂಡುಬಿದಿರೆಯ ಬಡಜನತೆಗೆ ಉಚಿತ ಆ್ಯಂಬುಲೆನ್ಸ್ ಸೇವೆಗೆ ಸೋಮವಾರ ಚಾಲನೆ ನೀಡಲಾಯಿತು.

ಶಾಸಕ ಉಮಾನಾಥ ಕೋಟ್ಯಾನ್ ಅವರು ಕನ್ನಡ ಭವನದಲ್ಲಿ ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಲೋಕಾರ್ಪಣೆಗೊಳಿಸಿದರು.

ನಂತರ ಮಾತನಾಡಿದ ಅವರು ಕೋವಿಡ್ ಸಂಬಂಧಿತ ಸೋಂಕಿನ ಪೂರ್ವ ಲಕ್ಷಣಗಳಿಗೆ ಆಳ್ವಾಸ್‌ನ ವೈದ್ಯರ ತಂಡದಿಂದ ಉಚಿತ ತಪಾಸಣೆ, ಅಲೋಪತಿ, ಆಯುರ್ವೇದ, ಹೋಮಿಯೋಪತಿ ಇವುಗಳ ಸಾಂದರ್ಭಿಕ ಸಂಯೋಜನೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಮಾಹಿತಿ ನೀಡಿ, ಇದೀಗ ಸೌಹಾರ್ದ ಚಾರಿಟೇಬಲ್ ಟ್ರಸ್ಟ್‌ನವರು ಕೋವಿಡ್ ಸಂದರ್ಭದಿಂದ ಮೊದಲ್ಗೊಂಡು ಬಿಪಿಎಲ್‌ ಜನರಿಗೆ ಉಚಿತವಾಗಿ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸಲು ಮುಂದಾಗಿರುವುದು ಶ್ಲಾಘನೀಯ. ಸಮಾಜಕ್ಕೆ ಇದೊಂದು ಮಾದರಿ ಕೊಡುಗೆಯಾಗಿದೆ ಎಂದು ಉಮಾನಾಥ ಕೋಟ್ಯಾನ್ ಹೇಳಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಅವರು ಸೌಹಾರ್ದ ಸಂಘಟನೆಯವರು ಈ ಮೊದಲಿನಿಂದಲೂ ಸಾಮಾಜಿಕ ಕಳಕಳಿಯ ಸೇವೆಯಲ್ಲಿ ತೊಡಗಿಸಿಕೊಂಡಿರುವುದನ್ನು ಸ್ಮರಿಸಿ, ಸುಮಾರು 8.5 ಲಕ್ಷ  ರೂ. ವೆಚ್ಚದಲ್ಲಿ ನೂತನ ಆ್ಯಂಬುಲೆನ್ಸ್ ಸೇವಾ ಯೋಜನೆಯನ್ನು ಕಾರ್ಯಗತಗೊಳಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಲಸಿಕೆ ಅಪಪ್ರಚಾರ ಬೇಡ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಉತ್ಪಾದನೆಯಾಗುತ್ತಿರುವ ಕೋವಿಡ್ ಲಸಿಕೆಯಲ್ಲಿ ಅರ್ಧಾಂಶ ಸರಕಾರಿ ಆಸ್ಪತ್ರೆಗಳ ಮೂಲಕ ಉಚಿತವಾಗಿಯೂ ಉಳಿದ ಆರ್ಧಾಂಶ ಖಾಸಗಿ ವೈದ್ಯಕೀಯ ವ್ಯವಸ್ಥೆಗಳ ಮೂಲಕ ನಿಗಧಿತ ಶುಲ್ಕ ವಿಧಿಸಿ ನೀಡುವಂತೆ ಸರಕಾರ ಅವಕಾಶ ಕಲ್ಪಿಸಿದೆ. ಎರಡೂ ವ್ಯವಸ್ಥೆಗಳಲ್ಲಿ ಬಳಸಲಾಗುವ ಲಸಿಕೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಸುಮ್ಮನೆ ವದಂತಿಗಳನ್ನು ಹಬ್ಬಿಸಬೇಡಿ, ಎಲ್ಲರೂ ಯಾವುದಾದರೂ ಒಂದು ವ್ಯವಸ್ಥೆಯಲ್ಲಿ ಲಸಿಕೆ ತೆಗೆದುಕೊಳ್ಳುವುದು ಕ್ಷೇಮಕರ ಎಂದು ಹೇಳಿದರು.

ತಹಶೀಲ್ದಾರ್ ಪುಟ್ಟರಾಜು, ಮೂಡುಬಿದಿರೆ ಪುರಸಭಾ ಅಧ್ಯಕ್ಷ ಪ್ರಸಾದ್‌ ಕುಮಾರ್‌, ಮುಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಚೌಟರ ಅರಮನೆ ಕುಲದೀಪ ಎಂ., ಪುರಸಭಾ ಸದಸ್ಯರು, ಮುಖ್ಯಾಧಿಕಾರಿ ಇಂದು ಎಂ. ಹಾಗೂ ಸೌಹಾರ್ದ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸೌಹಾರ್ದ ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ಅಬುಲ್ ಆಲಾ ಪುತ್ತಿಗೆ ಸ್ವಾಗತಿಸಿ, ಈ ಯೋಜನೆಗೆ ವಿಶೇಷ ಸಹಕಾರ ನೀಡಿರುವ ಮತೀನ್ ಅಹ್ಮದ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಬಡಜನರು ಮಾತ್ರವಲ್ಲ, ಮೂಡುಬಿದಿರೆ ಪೇಟೆಯ ಸುತ್ತ ಮುತ್ತ ನಡೆಯುವ ಅವಘಡಗಳ ಸಂದರ್ಭ ಸಾರ್ವಜನಿಕರು ಈ ಉಚಿತ ಆ್ಯಂಬುಲೆನ್ಸ್ ಸೇವೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಸೌಹಾರ್ದದ ಕಾರ್ಯದರ್ಶಿ ಮುಹಮ್ಮದ್ ಶರೀಫ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X