Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯ ಆಸಕ್ತಿ ಕಳೆದುಕೊಂಡ ಟ್ವಿಟರ್ ಈಗ...

ಬಿಜೆಪಿಯ ಆಸಕ್ತಿ ಕಳೆದುಕೊಂಡ ಟ್ವಿಟರ್ ಈಗ ಸರಕಾರಕ್ಕೆ ಹೊರೆಯಾಗಿದೆ: ಶಿವಸೇನೆ

ವಾರ್ತಾಭಾರತಿವಾರ್ತಾಭಾರತಿ7 Jun 2021 8:31 PM IST
share
ಬಿಜೆಪಿಯ ಆಸಕ್ತಿ ಕಳೆದುಕೊಂಡ ಟ್ವಿಟರ್ ಈಗ ಸರಕಾರಕ್ಕೆ ಹೊರೆಯಾಗಿದೆ: ಶಿವಸೇನೆ

 ಮುಂಬೈ,ಜೂ.7: ನೂತನ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ನಡುವೆ ನಡೆಯುತ್ತಿರುವ ಕಚ್ಚಾಟದ ನಡುವೆಯೇ ಶಿವಸೇನೆಯ ಮುಖವಾಣಿ ‘ಸಾಮನಾ’ ಟ್ವಿಟರ್ ಬಿಜೆಪಿಯ ರಾಜಕೀಯ ಆಸಕ್ತಿಯನ್ನು ಕಳೆದುಕೊಂಡಿದ್ದು,ಅದೀಗ ಸರಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ ಮತ್ತು ಸರಕಾರವು ಈ ಹೊರೆಯನ್ನು ಕಿತ್ತೆಸೆಯಲು ಬಯಸಿದೆ ಎಂದು ತನ್ನ ಸೋಮವಾರದ ಸಂಚಿಕೆಯ ಸಂಪಾದಕೀಯದಲ್ಲಿ ಹೇಳಿದೆ.

ಈ ಹಿಂದೆ ಟ್ವಿಟರ್ ಬಿಜೆಪಿ ಅಥವಾ ಮೋದಿ ಸರಕಾರದ ರಾಜಕೀಯ ಹೋರಾಟ ಅಥವಾ ಪ್ರಚಾರ ಅಭಿಯಾನದ ಆತ್ಮವಾಗಿತ್ತು. ಟ್ವಿಟರ್ ಈಗ ಅವರಿಗೆ ಹೊರೆಯಾಗಿದೆ ಮತ್ತು ಮೋದಿ ಸರಕಾರವು ಅದನ್ನು ದೇಶದಿಂದ ಹೊರದಬ್ಬಬೇಕೇ ಎಂದು ನಿರ್ಧರಿಸುವ ಮಟ್ಟಕ್ಕೂ ತಲುಪಿದೆ. ಇಂದು ಟ್ವಿಟರ್ ನಂತಹ ಮಾಧ್ಯಮಗಳನ್ನು ಹೊರತುಪಡಿಸಿ ದೇಶದಲ್ಲಿಯ ಎಲ್ಲ ಮಾಧ್ಯಮಗಳು ಮೋದಿ ಸರಕಾರದ ಸಂಪೂರ್ಣ ನಿಯಂತ್ರಣದಲ್ಲಿವೆ ಎಂದು ಸಂಪಾದಕೀಯದಲ್ಲಿ ಹೇಳಿರುವ ಶಿವಸೇನೆಯು,ತನ್ನ ಸುಳ್ಳು ಪ್ರಚಾರಗಳಿಗೆ ಉತ್ತರಿಸಲು ಪ್ರತಿಪಕ್ಷಗಳು ಆರಂಭಿಸಿರುವುದರಿಂದ ಬಿಜೆಪಿ ಈಗ ಟ್ವಿಟರ್ನಲ್ಲಿ ರಾಜಕೀಯ ಆಸಕ್ತಿಯನ್ನು ಹೊಂದಿಲ್ಲ. 

ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಕೆಸರೆರಚಾಟ ಮತ್ತು ಚಾರಿತ್ರಹನನ ಎಗ್ಗಿಲ್ಲದೆ ನಡೆಯುತ್ತಿದ್ದವು. ಟ್ವಿಟರ್ ಅನ್ನು ಹೇಗೆ ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎನ್ನುವುದು ಬಿಜೆಪಿಯನ್ನು ಬಿಟ್ಟು ಇತರ ರಾಜಕೀಯ ಪಕ್ಷಗಳಿಗೆ ಗೊತ್ತಿರಲಿಲ್ಲ. 2014ರಲ್ಲಿ ಬಿಜೆಪಿ ಇದನ್ನು ಕರಗತಗೊಳಿಸಿಕೊಂಡಿತ್ತು. ಆ ವರ್ಷ ನಡೆದಿದ್ದ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಸೈನ್ಯವು ಸೈಬರ್ ಲೋಕದಲ್ಲಿಯೇ ಹೆಚ್ಚು ಕ್ರಿಯಾಶೀಲವಾಗಿತ್ತು ಎಂದಿದೆ.

ಯಾವ ನಿಯಮಗಳಡಿ ಟ್ವಿಟರ್ ಮತ್ತು ಫೇಸ್ಬುಕ್ನಲ್ಲಿ ರಾಹುಲ್ ಗಾಂಧಿಯವರ ವಿರುದ್ಧ ಆಕ್ಷೇಪಾರ್ಹ ಶಬ್ದಗಳನ್ನು ಬಳಸಲಾಗಿತ್ತು? ಡಾ.ಮನಮೋಹನ್ ಸಿಂಗ್ ರಂತಹ ಹಿರಿಯ ನಾಯಕರನ್ನು ಯಾವ್ಯಾವ ವಿಶೇಷಣಗಳಿಂದ ಕರೆಯಲಾಗಿತ್ತು? ಉದ್ಧವ್ ಠಾಕ್ರೆಯವರಿಂದ ಹಿಡಿದು ಮಮತಾ ಬ್ಯಾನರ್ಜಿ,ಶರದ್ ಪವಾರ್ ರವರೆಗೆ ರಾಜಕೀಯ ನಾಯಕರ ಚಾರಿತ್ರ ಹನನ ಅಭಿಯಾನವನ್ನೇ ಆರಂಭಿಸಲಾಗಿತ್ತು ಎಂದಿರುವ ಸಾಮನಾ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಮೋದಿ ನೇತೃತ್ವದ ಸರಕಾರವನ್ನು ಟೀಕಿಸಲು ಟ್ವಿಟರ್ ನಂತಹ ಮಾಧ್ಯಮಗಳನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದ್ದಾರೆ ಮತ್ತು ಇದಕ್ಕೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ದೊರಕಿದೆ. 

ಇಂತಹ ದಾಳಿಗಳು ಏಕಪಕ್ಷೀಯವಾಗಿರುವವರೆಗೆ ಬಿಜೆಪಿ ಸದಸ್ಯರು ಖಷಿಯಾಗಿಯೇ ಇದ್ದರು. ಆದರೆ ಪ್ರತಿಪಕ್ಷಗಳೂ ಅಷ್ಟೇ ಸಮರ್ಥ ಸೈಬರ್ ಪಡೆಗಳನ್ನು ನಿಯೋಜಿಸುವ ಮೂಲಕ ದಾಳಿಗಳನ್ನು ಆರಂಭಿಸಿದ ಬಳಿಕ ಬಿಜೆಪಿಯಲ್ಲಿ ಅಳುಕು ಉಂಟಾಗಿದೆ ಎಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X