Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾಗತಿಕ ತಾಪಮಾನ ಏರಿಕೆಯ ಕಾರಣಿಕರ್ತ,...

ಜಾಗತಿಕ ತಾಪಮಾನ ಏರಿಕೆಯ ಕಾರಣಿಕರ್ತ, ಅಪರಾಧಿ ಮನುಷ್ಯನೇ -ದಿನೇಶ್ ಹೊಳ್ಳ

ವಾರ್ತಾಭಾರತಿವಾರ್ತಾಭಾರತಿ7 Jun 2021 10:03 PM IST
share

ಉಡುಪಿ, ಜೂ.7: ದಕ್ಷಿಣ ಭಾರತದ ಸಕಲ ಜೀವರಾಶಿಗಳ ಜೀವಸೆಲೆ ಪಶ್ಚಿಮ ಘಟ್ಟವಾಗಿದ್ದು, ಇಂದು ಮನುಷ್ಯನ ದುರಾಸೆ ಹಾಗೂ ಪಶ್ಚಿಮ ಘಟ್ಟವನ್ನು ವ್ಯಾಪಾರಿ ಲಾಭದ ದೃಷ್ಟಿಯಿಂದ ಬಳಕೆ ಮಾಡುತ್ತಿರುವುದು ಇಂದಿನ ಪರಿಸರಕ್ಕೆ ಸಂಬಂಧಿಸಿದ ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ. ಹೀಗಾಗಿ ಜಾಗತಿಕ ತಾಪಮಾನ ಏರಿಕೆಯ ಅಪರಾಧಿ ಮನುಷ್ಯನೇ ಆಗಿದ್ದಾನೆ ಎಂದು ಸಹ್ಯಾದ್ರಿ ಸಂರಕ್ಷಣಾ ಸಂಚಯದ ಮುಖ್ಯಸ್ಥ ಹಾಗೂ ಪರಿಸರ ತಜ್ಞ /ಹೋರಾಟಗಾರರಾದ ಮಂಗಳೂರಿನ ದಿನೇಶ್ ಹೊಳ್ಳ ಹೇಳಿದ್ದಾರೆ.

ಉಡುಪಿಯ ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾವಹಿಸಿ ಅವರು ಮಾತನಾಡುತಿದ್ದರು.

ಇಂದಿನ ದಿನಗಳಲ್ಲಿ ಮರಗಿಡಗಳ ನಾಶ, ಅರಣ್ಯ ಒತ್ತುವರಿ, ನದಿಮೂಲಗಳ ಮೇಲೆ ಹಸ್ತಕ್ಷೇಪ, ಕಾಡುಪ್ರಾಣಿಗಳ ಹತ್ಯೆಯಂತಹಾ ಕೃತ್ಯಗಳಿಂದ ಜೀವ ವೈವಿಧ್ಯತೆಯಲ್ಲಿ ಆಹಾರ ಸರಪಳಿ ವ್ಯವಸ್ಥೆಗೆ ತೊಂದರೆಯಾಗಿದ್ದು, ಇದನ್ನು ಸಮರೋಪಾದಿಯಲ್ಲಿ, ಅದರಲ್ಲೂ ವಿದ್ಯಾರ್ಥಿ ಯುವ ಸಮೂಹ ಸಂಘಟಿತ ಹೋರಾಟದ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕೆಂದು ಅವರು ಕರೆ ನೀಡಿದರು.

ಕಾರ್ಯಕ್ರಮದ ಇನ್ನೋರ್ವ ಅತಿಥಿ ರಾಷ್ಟ್ರೀಯ ಪರಿಸರ ಆರೈಕೆ ಒಕ್ಕೂಟದ ಮುಖ್ಯಸ್ಥ ಶಶಿಧರ ಶೆಟ್ಟಿ ಮಾತನಾಡಿ, ಪರಿಸರ ಸಂರಕ್ಷಣೆಯು ಭಾರತದ ಸಂವಿಧಾನದ ಅನುಚ್ಛೇದ 48-ಎ ಅನ್ವಯ ಸರಕಾರದ ಹಾಗೂ 51-ಎ(ಜಿ)ಯ ಪ್ರಕಾರ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಡುಪಿಯ ಮಾನವ ಹಕ್ಕುಗಳ ಸಂರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ ಶಾನುಭಾಗ್ ಮಾತನಾಡಿ, ನ್ಯಾಯಾಲಯದ ಎಲ್ಲಾ ಪ್ರಕರಣಗಳಲ್ಲಿ ನ್ಯಾಯಾಧೀಶರು ತೀರ್ಪನ್ನು ನೀಡಿರು ತ್ತಾರೆ. ಆದರೆ ಈ ಎಲ್ಲಾ ತೀರ್ಪುಗಳು ನ್ಯಾಯಪರ ಆಗಿರಬೇಕೆಂದೇನೂ ಇಲ್ಲ. ಆದ್ದರಿಂದ ಕಾನೂನು ವಿದ್ಯಾರ್ಥಿಗಳು ತಮ್ಮ ಕಾನೂನು ಜ್ಞಾನದ ಉಪಯೋಗ ದಿಂದ ಪರಿಸರ ಸಂರಕ್ಷಣೆಗೆ ಹಾಗೂ ಮಾನವ ಹಕ್ಕುಗಳ ಬಗ್ಗೆ ಹೋರಾಟ ಮಾಡಬೇಕೆಂದು ಹೇಳಿದರು.

ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ನಿರ್ಮಲ ಕುಮಾರಿ ಅತಿಥಿ ಗಳನ್ನು ಸ್ವಾಗತಿಸಿದರೆ, ಪ್ರಾಧ್ಯಾಪಕ ನವೀನ್‌ಚಂದ್ರ ಅತಿಥಿಗಳನ್ನು ಪರಿಚಯಿ ಸಿದರು. ಕಾಲೇಜಿನ ಎನ್ನೆಸ್ಸೆಸ್ ಘಟಕದ ಸಂಯೋಜನಾಧಿಕಾರಿ ಸುರೇಖಾ ವಂದಿಸಿದರು. ಹರ್ಷಿತಾ ತುಂಗೇಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X