Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2006ರ ಬೋಟ್‌ ದುರಂತದ ಕುರಿತು ವಾಟ್ಸಾಪ್‌...

2006ರ ಬೋಟ್‌ ದುರಂತದ ಕುರಿತು ವಾಟ್ಸಾಪ್‌ ಸ್ಟೇಟಸ್‌: ಜಮ್ಮುಕಾಶ್ಮೀರದ ಪತ್ರಕರ್ತನ ಮೇಲೆ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ8 Jun 2021 4:29 PM IST
share
2006ರ ಬೋಟ್‌ ದುರಂತದ ಕುರಿತು ವಾಟ್ಸಾಪ್‌ ಸ್ಟೇಟಸ್‌: ಜಮ್ಮುಕಾಶ್ಮೀರದ ಪತ್ರಕರ್ತನ ಮೇಲೆ ಪ್ರಕರಣ ದಾಖಲು

ಶ್ರೀನಗರ: 2006 ರಲ್ಲಿ ದೋಣಿ ಅಪಘಾತದಲ್ಲಿ ಮೃತಪಟ್ಟ ಮಕ್ಕಳ ಫೋಟೋವನ್ನು ಹೊಂದಿರುವ ವಾಟ್ಸಾಪ್ ಸ್ಟೇಟಸ್‌ ಹಾಕಿದ್ದಕ್ಕಾಗಿ ಜಮ್ಮು ಕಾಶ್ಮೀರದ ಪೊಲೀಸರು ಪತ್ರಕರ್ತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ndtv.com ಮಂಗಳವಾರ ವರದಿ ಮಾಡಿದೆ.

ಬಾಂಡಿಪೋರಾ ಪೊಲೀಸರು ಜೂನ್ 4 ರಂದು ಪತ್ರಕರ್ತ ಸಾಜಿದ್ ರೈನಾ ವಿರುದ್ಧದ ಎಫ್ಐಆರ್ ಬಗ್ಗೆ ಟ್ವೀಟ್ ಮಾಡಿದ್ದರು. ಆದರೆ ಅವರ ವೃತ್ತಿಯ ಬಗ್ಗೆ ಅಥವಾ ಅವರು ವಾಟ್ಸಾಪ್ ನಲ್ಲಿ ಹಾಕಿದ ಪೋಸ್ಟ್ ಬಗ್ಗೆ ವಿವರ ನೀಡಿಲ್ಲ ಎಂದು ತಿಳಿದು ಬಂದಿದೆ.

23 ವರ್ಷದ ರೈನಾ, ಬಂಡಿಪೋರಾ ಜಿಲ್ಲೆಯ ಸುದ್ದಿ ಸಂಸ್ಥೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ndtv.com ವರದಿ ಮಾಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 505 (ಸಾರ್ವಜನಿಕರಿಗೆ ಭಯ ಅಥವಾ ಎಚ್ಚರಿಕೆ ಉಂಟುಮಾಡುವ ಉದ್ದೇಶ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ವರದಿ ತಿಳಿಸಿದೆ.

ಫೋಟೋವನ್ನು ಹಂಚಿಕೊಂಡ ಒಂದು ಗಂಟೆಯೊಳಗೆ “ವುಲರ್ ಹುತಾತ್ಮರು” ಎಂಬ ಶೀರ್ಷಿಕೆಯೊಂದಿಗಿನ ಫೋಟೋವನ್ನು ಅಳಿಸಿದ್ದೇನೆ ಎಂದು ಪತ್ರಕರ್ತ ಹೇಳಿದರು. "ಮೇ 30 ದುರಂತದ 15 ನೇ ವಾರ್ಷಿಕೋತ್ಸವವಾಗಿತ್ತು ಮತ್ತು ನಾನು ಮಕ್ಕಳ ಚಿತ್ರದೊಂದಿಗೆ ವಾಟ್ಸಾಪ್ ಸ್ಟೇಟಸ್ ಅಪ್‌ಲೋಡ್ ಮಾಡಿದ್ದೇನೆ" ಎಂದು ಅವರು ತಿಳಿಸಿದರು. “ಸಂಜೆ, ಭದ್ರತಾ ಏಜೆನ್ಸಿಯ ಹಿರಿಯ ಅಧಿಕಾರಿಯೊಬ್ಬರು ನನಗೆ ಕರೆ ಮಾಡಿದ್ದರು. ನಾನು ಕ್ಷಮೆಯಾಚಿಸಿದೆ ಮತ್ತು ನನ್ನ [ವಾಟ್ಸಾಪ್] ಸ್ಟೇಟಸ್‌ ಅನ್ನು ಅಳಿಸಿದೆ.” ಎಂದು ಅವರು ಹೇಳಿದರು.

ತನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎರಡು ದಿನಗಳ ನಂತರ ತಿಳಿದುಬಂದಿದೆ ಎಂದು ರೈನಾ ಹೇಳಿದ್ದಾರೆ.

ತನ್ನ ವಿರುದ್ಧದ ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ಪೊಲೀಸರನ್ನು ಒತ್ತಾಯಿಸಿದ್ದೇನೆ ಎಂದು ಹೇಳಿದ ಅವರು, ಬಂಡಿಪೋರಾದ ಪೊಲೀಸ್ ಅಧೀಕ್ಷಕರು ಭರವಸೆ ನೀಡಿದ್ದಾರೆ ಎಂದರು. "ಪೊಲೀಸರು ನನಗೆ ನ್ಯಾಯ ಒದಗಿಸುತ್ತಾರೆ ಮತ್ತು ಈ ಎಫ್ಐಆರ್ ಅನ್ನು ಹಿಂತೆಗೆದುಕೊಳ್ಳುತ್ತಾರೆ ಎಂದು ಖಾತ್ರಿಯಿದೆ. ಅವರು ನನ್ನ ಭವಿಷ್ಯ ಮತ್ತು ನನ್ನ ವೃತ್ತಿಯ ಬಗ್ಗೆ ಯೋಚಿಸಬೇಕು" ಎಂದು ಅವರು ಹೇಳಿದರು.

ಮೇ 30, 2006 ರಂದು ಬಂಡಿಪೋರಾದ ವುಲಾರ್ ಸರೋವರದಲ್ಲಿ ನೌಕಾಪಡೆಯ ದೋಣಿ ಮಗುಚಿ ಇಪ್ಪತ್ತೊಂದು ಮಕ್ಕಳು ಸಾವನ್ನಪ್ಪಿದ್ದರು. ಅವರು ಹಂಡ್ವಾರಾದ ಬರ್ನಿಂಗ್ ಕ್ಯಾಂಡಲ್ ಶಾಲೆಯ ವಿದ್ಯಾರ್ಥಿಗಳಾಗಿದ್ದು, ವಿಹಾರಕ್ಕೆಂದು ತೆರಳಿದ್ದರು.

FIR No. 84/2021 lodged in Police station Bandipora against one person namely Sajid Raina for his WhatsApp status on 30-05-2021 which attracts investigation into the contents and intention behind it. @sujitpchauhan @JmuKmrPolice @KashmirPolice @dcbandipora @KashConvener

— Bandipora Police (@bandiporapolice) June 4, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X