Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಡಾಖ್ ನಲ್ಲಿ ಚೀನೀ ಜೆಟ್ ವಿಮಾನಗಳ...

ಲಡಾಖ್ ನಲ್ಲಿ ಚೀನೀ ಜೆಟ್ ವಿಮಾನಗಳ ಕವಾಯತು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದೇವೆ:ಭಾರತದ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ8 Jun 2021 4:07 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಲಡಾಖ್ ನಲ್ಲಿ ಚೀನೀ ಜೆಟ್ ವಿಮಾನಗಳ ಕವಾಯತು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದೇವೆ:ಭಾರತದ ಪ್ರತಿಕ್ರಿಯೆ

ಹೊಸದಿಲ್ಲಿ, ಜೂ.8: ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆಯ ಬಗ್ಗೆ ತಗಾದೆ ಮುಂದುವರಿಸಿರುವ ಚೀನಾ, ತನ್ನ ಯುದ್ಧವಿಮಾನಗಳ ಬೃಹತ್ ವೈಮಾನಿಕ ಕಸರತ್ತನ್ನು ಪೂರ್ವ ಲಡಾಖ್ನಲ್ಲಿ ಇತ್ತೀಚೆಗೆ ನಡೆಸಿದೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿರುವುದಾಗಿ ಭಾರತ ಹೇಳಿದೆ. ‌

ಪೂರ್ವ ಲಡಾಖ್ ನ ಎದುರು ಭಾಗದಲ್ಲಿ ಚೀನಾ ನಿರ್ಮಿಸಿರುವ ವಾಯುನೆಲೆಯಲ್ಲಿ ಸುಮಾರು 22 ಯುದ್ಧವಿಮಾನಗಳು ಕವಾಯತು ನಡೆಸಿವೆ. ಚೀನಾ ಯುದ್ಧವಿಮಾನಗಳ ಕವಾಯತು ಚೀನಾದ ವ್ಯಾಪ್ತಿಗೆ ಸೀಮಿತವಾಗಿದ್ದವು . ಜೆ-11 ಹಾಗೂ ಅತ್ಯಾಧುನಿಕ ಸಮರ ವಿಮಾನ ಜೆ-16 ಕೂಡಾ ಇದರಲ್ಲಿ ಪಾಲ್ಗೊಂಡಿವೆ. 

ಲಡಾಖ್ ವಲಯದಲ್ಲಿ ತನ್ನ ವ್ಯಾಪ್ತಿಗೆ ಸೇರಿದ ಪ್ರದೇಶವಾದ ಹೊಟಾನ್, ಗರ್ ಗುನ್ಸಾ, ಹೊಪಿಂಗ್, ಲಿಂಝಿ, ಪಂಗಟ್ ಮತ್ತು ಕಶ್ಗರ್ ವಾಯುನೆಲೆಯನ್ನು ಚೀನಾ ಇತ್ತೀಚೆಗೆ ಮೇಲ್ದರ್ಜೆಗೆ ಏರಿಸಿದ್ದು ಇಲ್ಲಿ ಎಲ್ಲಾ ಯುದ್ಧವಿಮಾನಗಳ ಕಾರ್ಯಾಚರಣೆಗೂ ಅನುಕೂಲವಾಗುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ವಾಯುನೆಲೆಯೊಳಗೆ ಇರಿಸಿರುವ ವಿಮಾನಗಳು ಹೊರಗಿನವರಿಗೆ ಕಾಣಿಸದ ರೀತಿಯಲ್ಲಿ ಇಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
 
ಈ ವರ್ಷದ ಬೇಸಿಗೆಯಲ್ಲಿ ಚೀನಾದ ವಾಯುನೆಲೆಯಲ್ಲಿ ಹೆಚ್ಚಿನ ಯುದ್ಧವಿಮಾನಗಳ ನಿಯೋಜನೆಯಿಂದ ಎಚ್ಚೆತ್ತುಕೊಂಡ ಭಾರತ ಲಡಾಕ್ನಲ್ಲಿ ಮಿಗ್-29 ಯುದ್ಧವಿಮಾನ ಸಹಿತ ತನ್ನ ವಾಯುಬಲವನ್ನು ವೃದ್ಧಿಸಿಕೊಂಡಿದೆ. ಜೊತೆಗೆ ಅತ್ಯಾಧುನಿಕ ರಫೇಲ್ ಯುದ್ಧವಿಮಾನಗಳೂ ದೈನಂದಿನ ಕಸರತ್ತು ನಡೆಸಿ ಭಾರತ ಸೇನೆಯ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತಿವೆ. ಕಳೆದ ವರ್ಷದ ಲಡಾಖ್ ಬಿಕ್ಕಟ್ಟಿನ ಸಂದರ್ಭ ಚೀನಾದ ಯುದ್ಧವಿಮಾನ ಭಾರತೀಯ ವಾಯುಪ್ರದೇಶವನ್ನು ಉಲ್ಲಂಘಿಸುವ ಪ್ರಯತ್ನ ನಡೆಸಿದಾಗ ಭಾರತದ ವಿಮಾನಗಳು ಯಶಸ್ವಿಯಾಗಿ ಹಿಮ್ಮೆಟ್ಟಿಸಿವೆ.
 
ಚೀನಾವು ಪ್ಯಾಂಗಾಂಗ್ ಸರೋವರ ಪ್ರದೇಶದಿಂದ ತನ್ನ ಪಡೆಗಳನ್ನು ಹಿಂಪಡೆದಿದ್ದರೂ, ಭಾರತದ ನೆಲೆಗಳ ಮೇಲೆ ದೀರ್ಘ ಅಂತರದಿಂದ ದಾಳಿ ನಡೆಸಬಲ್ಲ ಸಾಮರ್ಥ್ಯವಿರುವ ಎಚ್ಕ್ಯೂ-9 ಮತ್ತು ಎಚ್ಕ್ಯೂ-16 ವಿಮಾನಗಳ ಸಹಿತ ತನ್ನ ವಿಮಾನ ಪಡೆಯನ್ನು ಲಡಾಕ್ ಪ್ರದೇಶದಲ್ಲೇ ಇರಿಸಿಕೊಂಡಿದೆ. ಆದರೆ ಲಡಾಕ್ ವಲಯದಲ್ಲಿ ಚೀನಾದ ವಾಯುನೆಲೆ ಎತ್ತರದ ಗುಡ್ಡಗಳಲ್ಲಿ ಇರುವುದರಿಂದ ಇಲ್ಲಿಂದ ಮೇಲಕ್ಕೇರಿ ದಾಳಿ ನಡೆಸಬೇಕು. ಆದರೆ ಭಾರತದ ವಾಯುಪಡೆ ಬಯಲುಪ್ರದೇಶದಿಂದ ಮೇಲಕ್ಕೇರಿ ಕ್ಷಿಪ್ರವಾಗಿ ದಾಳಿ ನಡೆಸಲು ಸಾಧ್ಯವಿರುವುದರಿಂದ ಹೆಚ್ಚಿನ ಅನುಕೂಲವಿದೆ ಎಂದು ಮೂಲಗಳು ಹೇಳಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X