Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣದ...

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಮಲತಾಯಿ ಧೋರಣೆ: ಶಾಹುಲ್ ಹಮೀದ್ ಆರೋಪ

ವಾರ್ತಾಭಾರತಿವಾರ್ತಾಭಾರತಿ9 Jun 2021 2:23 PM IST
share
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಮಲತಾಯಿ ಧೋರಣೆ: ಶಾಹುಲ್ ಹಮೀದ್ ಆರೋಪ

ಮಂಗಳೂರು, ಜೂ. 9: ಸರಕಾರದಿಂದ ವಿದ್ಯಾರ್ಥಿ ವೇತನದ ಭರವಸೆಯೊಂದಿಗೆ ಉಜ್ವಲ ಭವಿಷ್ಯದ ಕನಸಿನೊಂದಿಗೆ ಉನ್ನತ ಶಿಕ್ಷಣಕ್ಕೆ ಮುಂದಾಗಿದ್ದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಸ್ತುತ ಮಾನಸಿಕ ಚಿತ್ರಹಿಂಸೆ ಯನ್ನು ಅನುಭವಿಸುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಆರೋಪಿಸಿದ್ದಾರೆ.

ನಂತರ ಮಾತನಾಡಿದ ಅವರು, ಅರಿವು ಯೋಜನೆಯಡಿ 2019-20ನೆ ಸಾಲಿನಲ್ಲಿ ಅರ್ಜಿ ಸಲ್ಲಿಸಿದ್ದ ಕ್ರೈಸ್ತ, ಜೈನ, ಸಿಖ್, ಮುಸ್ಲಿಂ ಮೊದಲಾದ ಅಲ್ಪಸಂಖ್ಯಾತ ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ಕಳೆದ ವರ್ಷ ಅನುದಾನದಲ್ಲಿ ಕಡಿತ ಮಾಡಿದ್ದರೆ ಈ ವರ್ಷ ಅನುದಾನವೇ ಬಿಡುಗಡೆಯಾಗಿಲ್ಲ ಎಂದು ಆಕ್ಷೇಪಿಸಿದರು.

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಮಂಜೂರು ಮಾಡಿದ್ದ 125 ಕೋಟಿ ರೂ.ಗಳನ್ನು ಮೊದಲ ಪರಿಷ್ಕರಣೆಯ ಬಳಿಕ 105 ಕೋಟಿ ರೂ.ಗಳಿಗೆ ಇಳಿಕೆ ಮಾಡಿ, ಮತ್ತೆ ಪರಿಷ್ಕರಿಸಿ ಅದನ್ನು 71 ಕೋಟಿ ರೂ.ಗಳಿಗೆ ಮೀಸಲಿಟ್ಟರೂ ಈವರೆಗೂ ಚಿಕ್ಕಾಸು ಬಿಡುಗಡೆಯಾಗಿಲ್ಲ ಎಂದು ಅವರು ಆರೋಪಿಸಿದರು.

ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ನೀಟ್‌ನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರಕಾರ ನಿಗದಿಪಡಿಸಿದ ಶುಲ್ಕದ ವಾರ್ಷಿಕ 7.5 ಲಕ್ಷ ರೂ.ಗಳಲ್ಲಿ ಈ ಹಿಂದಿನ ಸರಕಾರ 3.5 ಲಕ್ಷ ರೂ. ಅನುದಾನ ನೀಡುವ ಅರಿವು ಯೋಜನೆ ಆರಂಭ ಗೊಂಡಿತ್ತು. ಪ್ರಸಕ್ತ ಸರಕಾರ ಕಳೆದ ವರ್ಷ ಅದನ್ನು 2 ಲಕ್ಷ ರೂ.ಗಳಿಗೆ ಇಳಿಕೆ ಮಾಡಿತ್ತು. ಈವರ್ಷ ನವೀಕರಣವಾಗಲಿ, ಹೊಸ ಅರ್ಜಿಯನ್ನು ಪುರಸ್ಕರಿಸುವ ಕಾರ್ಯವಾಗಲಿ ಆಗಿಲ್ಲ. ಈ ನಡುವೆ ಬಿಡಿಎಸ್ (ದಂತ ವೈದ್ಯಕೀಯ) ಗೆ ನಿಗದಿಯಾದ 3.5 ಲಕ್ಷ ರೂ.ಗಳಲ್ಲಿ ಕೇವಲ 30,000 ರೂ., ಬಿಇಗೆ ನಿಗದಿಯಾದ 55,000 ರೂ.ಗಳಲ್ಲಿ ಕೇವಲ 30,000 ರೂ., ಪದವಿ ಶಿಕ್ಷಣಕ್ಕೆ ನಿಗದಿಯಾಗಿದ್ದ 20,000 ರೂ.ಗಳಲ್ಲಿ ಕೇವಲ 10,000ರೂ.ಗಳ ಸಹಾಯಧನವನ್ನು ಮಾತ್ರವೇ ನೀಡಲಾಗಿದೆ. ಈ ವರ್ಷ ಖಾಸಗಿ ಮೆಡಿಕಲ್ ಕಾಲೇಜುಗಳ ಪ್ರವೇಶಾತಿ ಮುಗಿದು ಆನ್‌ಲೈನ್ ತರಗತಿ ಆರಂಭವಾಗಿದೆ. ಆದರೆ ಸರಕಾರ ಅರ್ಜಿಯನ್ನೇ ಆಹ್ವಾನಿಸಿಲ್ಲ. ಮಾತ್ರವಲ್ಲದೆ ಈ ಬಾರಿ ಖಾಸಗಿ ಕಾಲೇಜುಗಳಲ್ಲಿ ಸರಕಾರದ ಸೀಟು ದರವನ್ನು 10 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ. ಕಳೆದ ವರ್ಷ ದ.ಕ. ಜಿಲ್ಲೆಯಲ್ಲೇ ಅರಿವು ಸಾಲದಡಿ 535 ಅರ್ಜಿಗಳು ಇನ್ನೂ ಇತ್ಯರ್ಥವಾಗಿಲ್ಲ.ಇದಲ್ಲದೆ ವಿದ್ಯಾಸಿರಿ ಯೋಜನೆ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ನೀಡುವ ಗೌರವಧನ, ವಿದೇಶ ವ್ಯಾಸಂಗಕ್ಕಾಗಿ ಸಿಗುವ ಸಹಾಯಧನ ಎಲ್ಲವನ್ನೂ ನಿಲ್ಲಿಸಲಾಗಿದೆ. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಟೂರಿಸ್ಟ್ ಟ್ಯಾಕ್ಸಿ ಯೋಜನೆಯಡಿ 3 ಲಕ್ಷ ರೂ.ಗಳ ಸಬ್ಸಿಡಿ ಯನ್ನು 75000 ರೂ.ಗಳಿಗೆ ಇಳಿಕೆ ಮಾಡಲಾಗಿದೆ. ಶ್ರಮಶಕ್ತಿ ಯೋಜನೆಯಡಿ ವಿಧಾನಸಭಾ ಕ್ಷೇತ್ರವೊಂದಕ್ಕೆ ಸ್ವ ಉದ್ಯೋಗಕ್ಕಾಗಿ ಶೇ. 50ರಷ್ಟು ಸಬ್ಸಿಡಿ ನೀಡುವ ಯೋಜನೆಯಡಿ ಹಿಂದೆ 100 ಮಂದಿಗೆ ಅವಕಾಶವಿದ್ದು, ಅದನ್ನು ಪ್ರಸ್ತುತ ಕೇವಲ 9 ಮಂದಿಗೆ ಇಳಿಕೆ ಮಾಡಲಾಗಿದೆ. ಒಟ್ಟಿನಲ್ಲಿ ಸರಕಾರ ಕೊರೋನದಿಂದ ತತ್ತರಿಸಿರುವ ಜನರಿಗೆ ಈ ಮೂಲಕ ಸಹಾಯ ಧನ, ಗೌರವಧನ, ವಿದ್ಯಾರ್ಥಿ ವೇತನದಲ್ಲೂ ಕಡಿತ ಮಾಡಿ ನಡು ನೀರಿನಲ್ಲಿ ಕೈಬಿಟ್ಟಂತಾಗಿದೆ ಎಂದು ಶಾಹುಲ್ ಹಮೀದ್ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಸಕ್ತ ಸರಕಾರ ಬ್ರಾಹ್ಮಣ ಅಭಿವೃದ್ದಿ ನಿಗಮಕ್ಕೆ ಆದಾಯ ಮಿತಿಯನ್ನು 2 ಲಕ್ಷದಿಂದ 8.5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದ್ದರೆ, ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ- ಪಂಗಡ ಹಾಗೂ ಹಿಂದುಳಿದ ವರ್ಗಗಳ ಅದಾಯ ಮಿತಿ ಮಾತ್ರ 2 ಲಕ್ಷ ರೂ.ಗಳಿಗೆ ಸೀಮಿತ ಗೊಳಿಸಿದೆ. ಇದು ಸರಕಾರದ ಮಲತಾಯಿ ಧೋರಣೆ ಎಂದು ಅವರು ಆರೋಪಿಸಿದರು.

ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ನವೀನ್ ಡಿಸೋಜಾ, ಅಬ್ದುಲ್ ರವೂಫ್, ಸಬಿತಾ ಮಿಸ್ಕಿತ್, ಶಬೀರ್, ಹೊನ್ನಯ್ಯ, ಇಮ್ರಾನ್, ಶಶಿಧರ ಹೆಗ್ಡೆ, ಯೂಸುಫ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X