Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಸರ ದಿನದ ಅಂಗವಾಗಿ ಸಾಲುಮರದ...

ಪರಿಸರ ದಿನದ ಅಂಗವಾಗಿ ಸಾಲುಮರದ ತಿಮ್ಮಕ್ಕರೊಂದಿಗೆ ಸಾಗರೋತ್ತರ ಕನ್ನಡಿಗರಿಂದ ಸಂವಾದ

ವಾರ್ತಾಭಾರತಿವಾರ್ತಾಭಾರತಿ9 Jun 2021 3:24 PM IST
share
ಪರಿಸರ ದಿನದ ಅಂಗವಾಗಿ ಸಾಲುಮರದ ತಿಮ್ಮಕ್ಕರೊಂದಿಗೆ ಸಾಗರೋತ್ತರ ಕನ್ನಡಿಗರಿಂದ ಸಂವಾದ

ಲಂಡನ್, ಜೂ.9: ಜಾಗತಿಕ ಪರಿಸರ ದಿನದ ಅಂಗವಾಗಿ ಹಿರಿಯ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಾಗರೋತ್ತರ ಕನ್ನಡಿಗರು ಸಂವಾದ ಕಾರ್ಯಕ್ರಮ ನಡೆಸಿದರು. 

ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ಸಾಗರೋತ್ತರ ಕನ್ನಡಿಗರನ್ನ ಉದ್ದೇಶಿಸಿ ಮಾತನಾಡಿ, ತಾವು ಹಾಗೂ ತಮ್ಮ ಪತಿ ಮಾಡಿದ ಶ್ರಮವನ್ನ ಎಳೆ ಎಳೆಯಾಗಿ ವಿವರಿಸಿದರು.

'ಸತಿ ಪತಿಗಳೊಂದಾಗಿ ದೇಶಕ್ಕೆ ಒಳ್ಳೆಯದು ಮಾಡಿ. ನಿಮಗೆ ಎಲ್ಲ ಭಾಗ್ಯ ಸಿಗಲಿ ಎಂದು ಪಾರ್ವತಿ ಪರಮೇಶ್ವರನಲ್ಲಿ ಬೇಡಿಕೊಳ್ಳುತ್ತೇನೆ ಎಂದರು. ನನಗೆ ಅನೇಕ ಪ್ರಶಸ್ತಿಗಳು ಪುರಸ್ಕಾರಗಳು ಸಿಕ್ಕಿವೆ. ಅವುಗಳನ್ನು ಇಡಲು ಜಾಗ ಇಲ್ಲ. ಸಾಗರೋತ್ತರ ಕನ್ನಡಿಗರೆಲ್ಲಾ ಸೇರಿ ಒಂದು ಮ್ಯೂಸಿಯಮ್ ಕಟ್ಟಿಸಿ ಅಂದರು. ಇದಕ್ಕೆ ಸಾಗರೋತ್ತರ ಕನ್ನಡಿಗರು ಸಹಮತ ವ್ಯಕ್ತಪಡಿಸಿದರು. ಸಾಗರೋತ್ತರ ಕನ್ನಡಿಗರ ಸಂಘದ ಜಂಟಿ ಕಾರ್ಯದರ್ಶಿ ರವಿ ಮಹಾದೇವ ಅವರು 'ನಮ್ಮ ಸಂಘದಲ್ಲಿ ಚರ್ಚಿಸಿ ಪೂರಕವಾದ ಕೆಲಸ ಮಾಡಲು ಪ್ರಯತ್ನ ಮಾಡುತ್ತೇವೆ' ಎಂದು ಹೇಳಿದರು.

ಬಳಿಕ, ಸಾಗರೋತ್ತರ ಕನ್ನಡಿಗರ ಸಂಘದಿಂದ ಯುವ ಪರಿಸರವಾದಿ ವಿನೋದ ಕರ್ತವ್ಯ ಅವರಿಗೆ ಪ್ರಶಸ್ತಿ ಪತ್ರ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತ ಸರ್ಕಾರದ ಅರಣ್ಯ ಮತ್ತು ಪರಿಸರ ಇಲಾಖೆಯ ನಿರ್ದೇಶಕ ಡಾ.ಎಸ್ ಗೌರಿ ಶಂಕರ್ ಅವರು, ಸಾಲುಮರದ ತಿಮ್ಮಕ್ಕನವರ ಸಾಧನೆಯ ಬಗ್ಗೆ ಮಾತನಾಡುತ್ತಾ 'ಅವರ ಕಾಯಕ ನನಗೆ ಚಿರಪರಿಚಿತ, ಇಂತಹ ಅಮ್ಮನ ಉಪಸ್ಥಿತಿಯಲ್ಲಿ ನಾನು ಭಾಗವಹಿಸಿದ್ದು ನನ್ನ ಭಾಗ್ಯ ಮತ್ತು ಅವರಲ್ಲಿ ನನ್ನ ಅಮ್ಮನನ್ನು ಕಾಣುತ್ತಿದ್ದೇನೆ ಎಂದು ಹೇಳಿದರು.

ಅನೇಕ ದೇಶಗಳಲ್ಲಿ ವಾಸವಿರುವ ಸಾಗರೋತ್ತರ ಕನ್ನಡಿಗರು ಸಂವಾದದಲ್ಲಿ ಭಾಗವಹಿಸಿ ಡಾ.ಎಸ್ ಗೌರಿಶಂಕರ ಅವರಲ್ಲಿ ತಮಗಿರುವ ಪರಿಸರ ಕಾಳಜಿ, ಸರಕಾರದ ನೀತಿಗಳು, ಮತ್ತು ಸಲಹೆಗಳನ್ನ ಮುಕ್ತವಾಗಿ ಹಂಚಿಕೊಂಡರು. ಹಾಗೆಯೇ, ಸಾಗರೋತ್ತರ ಕನ್ನಡಿಗರು ಸಂಘದ ಕಾರ್ಯಕ್ರಮಗಳ ಬಗ್ಗೆ ಮುಕ್ತ ಕಂಠದಿಂದ ಶ್ಲಾಘಿಸಿ 'ಇನ್ನಷ್ಟು ಜನ ಭಾಗವಹಿಸಿಬೇಕು, ಇಂತಹ ಜನ ಪರ ವಿಚಾರಗಳು ಹೆಚ್ಚು ಹೆಚ್ಚು ಜನರಿಗೆ ಮುಟ್ಟಿಸಬೇಕು, ನಾಗರಿಕ ಪ್ರಜ್ಞೆ ಬೆಳೆಸಬೇಕು' ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಗರೋತ್ತರ ಕನ್ನಡಿಗರ ಸಂಘದ ಜಂಟಿ ಕಾರ್ಯದರ್ಶಿ ರವಿ ಮಹಾದೇವ, ಸಾಲುಮರದ ತಿಮ್ಮಕ್ಕನವರ ಮಾನಸ ಪುತ್ರ ಉಮೇಶ ಅವರ ಸಹಾಯದ ಬಗ್ಗೆ ಕೊಂಡಾಡಿದರು. ಬಳಿಕ ದೊರೆಸ್ವಾಮಿ ಸಿದ್ದಿಗೌಡ ರಚಿಸಿದ ಕವನವನ್ನು ಸಾಲುಮರದ ತಿಮ್ಮಕ್ಕ ಓದಿ ನುಡಿ ನಮನ ಅರ್ಪಿಸಿದರು.

ಸಾಗರೋತ್ತರ ಕನ್ನಡಿಗರ ಸಂಘದ ಖಜಾಂಜಿ ಬಸವ ಪಾಟೀಲ್‌ ಪ್ರಾಸ್ತಾವಿಕ ಮಾತನಾಡಿದರು. ಸಾಗರೋತ್ತರ ಕನ್ನಡಿಗರ ಸಂಘದ ಉಪಾಧ್ಯಕ್ಷ ಗೋಪಾಲ ಕುಲಕರ್ಣಿ ಅವರು ಪ್ರಶಸ್ತಿ ಪುರಸ್ಕೃತ ವಿನೋದ ಕರ್ತವ್ಯ ಅವರ ಬಗ್ಗೆ ಪರಿಚಯ ಮಾಡಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಸಿಕೊಟ್ಟರು.

ಸಾಗರೋತ್ತರ ಕನ್ನಡಿಗರ ಸಂಘದ ಅಧ್ಯಕ್ಷ ಚಂದ್ರಶೇಖರ್‌ ಲಿಂಗದಳ್ಳಿ ಅವರು ಡಾ.ಎಸ್ ಗೌರಿಶಂಕರ್ ಅವರನ್ನು ಸಂವಾದಕ್ಕೆ ಆಮಂತ್ರಿಸಿದರು. ಸಾಗರೋತ್ತರ ಕನ್ನಡಿಗರ ಸಂಘದ ಸಂಘಟನಾ ಕಾರ್ಯದರ್ಶಿ ಹೇಮೇಗೌಡ ಮಧು ಅವರು ಅನೇಕ ದೇಶಗಳಲ್ಲಿ ವಾಸವಿರುವ ಸಾಗರೋತ್ತರ ಕನ್ನಡಿಗರನ್ನ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X