Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್‌ ನಿಂದ ಚೇತರಿಸಿಕೊಂಡವರಿಗೆ...

ಕೋವಿಡ್‌ ನಿಂದ ಚೇತರಿಸಿಕೊಂಡವರಿಗೆ ಲಸಿಕೆಯ ಒಂದೇ ಡೋಸ್ ಸಾಕು: ಅಧ್ಯಯನದ ವರದಿಯಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ11 Jun 2021 11:25 PM IST
share
ಕೋವಿಡ್‌ ನಿಂದ ಚೇತರಿಸಿಕೊಂಡವರಿಗೆ ಲಸಿಕೆಯ ಒಂದೇ ಡೋಸ್ ಸಾಕು: ಅಧ್ಯಯನದ ವರದಿಯಲ್ಲಿ ಉಲ್ಲೇಖ

ಹೊಸದಿಲ್ಲಿ, ಜೂ.11: ಕೊರೋನ ಸೋಂಕಿನ ಸೌಮ್ಯಲಕ್ಷಣವಿದ್ದು ಚೇತರಿಸಿಕೊಂಡವರಿಗೆ ಕೊರೋನ ಸೋಂಕಿನ ವಿರುದ್ಧದ ಒಂದೇ ಲಸಿಕೆ ಸಾಕಾಗುತ್ತದೆ ಎಂದು ಭಾರತದಲ್ಲಿ ನಡೆಸಿದ ಅಧ್ಯಯನ ವರದಿ ತಿಳಿಸಿದೆ. ಕೊರೋನ ಸೋಂಕಿನಿಂದ ಚೇತರಿಸಿಕೊಂಡವರಲ್ಲಿ ಸೋಂಕಿನ ವಿರುದ್ಧದ ಪ್ರತಿರೋಧ ಶಕ್ತಿ ದಿರ್ಘ ಕಾಲದವರೆಗೆ ಇರುತ್ತದೆ. 

ಮನುಷ್ಯನ ದೇಹದಲ್ಲಿರುವ ಪ್ರತಿರೋಧ ಶಕ್ತಿಯ ಎರಡು ಬಾಹುಗಳಾದ ಟಿ ಜೀವಕೋಶ (ಬಿಳಿ ರಕ್ತಕಣ) ಮತ್ತು ಬಿ ಜೀವಕೋಶ(ಬಿ ರಕ್ತಕಣದ ಮತ್ತೊಂದು ವಿಧ)ಗಳಲ್ಲಿ ಸುದೀರ್ಘಾವಧಿಯವರೆಗೆ ರೋಗನಿರೋಧಕದ ಸ್ಮರಣೆ ಉಳಿಯುವುದರಿಂದ ಕೊರೋನ ಸೋಂಕಿನಿಂದ ಚೇತರಿಸಿಕೊಂಡವರು ಲಸಿಕೆಯ ಒಂದೇ ಡೋಸ್ ಪಡೆದರೆ ಸಾಕಾಗುತ್ತದೆ ಎಂದು ಅಧ್ಯಯನ ವರದಿ ತಿಳಿಸಿದೆ. 

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಮ್ಯುನೊಲಾಜಿಯ ಡಾ. ನಿಮೇಶ್ ಗುಪ್ತಾ ಮತ್ತು ತಂಡದವರು ಹೊಸದಿಲ್ಲಿಯ ಎಐಐಎಂಎಸ್ನ ಡಾ. ಅಶೋಕ್ ಶರ್ಮ ಮತ್ತು ಡಾ. ಪೂನಂ ಅವರ ಸಹಯೋಗದಲ್ಲಿ ಈ ಅಧ್ಯಯನ ನಡೆಸಿದ್ದಾರೆ. ಅಧ್ಯಯನಕ್ಕೆ ಒಳಗಾದ ಭಾರತೀಯ ರೋಗಿಗಳಲ್ಲಿ ಸುಮಾರು 70% ರೋಗಿಗಳಲ್ಲಿ ಸಾರ್ಸ್-ಸಿಒವಿ-2 ಪ್ರತಿಕ್ರಿಯಾತ್ಮಕ ಬಿಳಿ ರಕ್ತಕಣಗಳು ಅತ್ಯಧಿಕ ಮಟ್ಟದಲ್ಲಿದ್ದವು. ಈ ಬಿಳಿ ರಕ್ತಕಣಗಳು ಮನುಷ್ಯನ ಪ್ರತಿರೋಧ ವ್ಯವಸ್ಥೆಯ ಪ್ರಧಾನ ಅಂಗವಾಗಿದೆ. ಇವು ಸೋಂಕಿನ ಪರಿಣಾಮವನ್ನು ಸಂಪೂರ್ಣ ದೂರಗೊಳಿಸದಿದ್ದರೂ ಸೋಂಕಿನ ತೀವ್ರತೆಯನ್ನು ತಗ್ಗಿಸಬಲ್ಲದು ಎಂದು ವರದಿ ಹೇಳಿದೆ. 

ಜಾಗತಿಕವಾಗಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಸವಾಲು ಎಸೆದಿರುವ ಕೊರೋನ ಸೋಂಕಿನ ನಿಯಂತ್ರಣಕ್ಕೆ ಲಸಿಕೀಕರಣ ಪರಿಣಾಮಕಾರಿ ಅಸ್ತ್ರ ಎಂದು ಈಗಾಲೇ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ಜನತೆ ಕೋವಿಡ್-19 ವೈರಸ್ಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂದು ತಿಳಿದುಕೊಳ್ಳಲು ಮತ್ತು ಭಾರತದಲ್ಲಿ ಲಸಿಕೀಕರಣ ಪ್ರಕ್ರಿಯೆ ಮುಂದುವರಿಸಲು ಈ ಅಧ್ಯಯನ ವರದಿಯ ಮಾಹಿತಿ ಪೂರಕಾಗಿದೆ ಎಂದು ತಜ್ಞರ ತಂಡ ಹೇಳಿದೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X