Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಾರ್ಜ್ ಫ್ಲಾಯ್ಡ್ ಹತ್ಯಾ ಘಟನೆಯನ್ನು...

ಜಾರ್ಜ್ ಫ್ಲಾಯ್ಡ್ ಹತ್ಯಾ ಘಟನೆಯನ್ನು ಧೈರ್ಯದಿಂದ ಚಿತ್ರೀಕರಿಸಿದ್ದ ಯುವತಿಗೆ ಪುಲಿಟ್ಝರ್ ವಿಶೇಷ ಗೌರವ

ವಾರ್ತಾಭಾರತಿವಾರ್ತಾಭಾರತಿ12 Jun 2021 3:00 PM IST
share
ಜಾರ್ಜ್ ಫ್ಲಾಯ್ಡ್ ಹತ್ಯಾ ಘಟನೆಯನ್ನು ಧೈರ್ಯದಿಂದ ಚಿತ್ರೀಕರಿಸಿದ್ದ ಯುವತಿಗೆ ಪುಲಿಟ್ಝರ್ ವಿಶೇಷ ಗೌರವ

ನ್ಯೂಯಾರ್ಕ್: ಅಮೆರಿಕಾದಲ್ಲಿ ಕರಿಯ ಜನಾಂಗದ ಜಾರ್ಜ್ ಫ್ಲಾಯ್ಡ್ ನನ್ನು ಮಿನಿಯಾಪೋಲಿಸ್‍ನ ಪೊಲೀಸ್ ಅಧಿಕಾರಿಯೊಬ್ಬರು ನೆಲಕ್ಕೆ ಬೀಳಿಸಿ ಹತ್ಯೆಗೈದ ಸಂದರ್ಭದ ಘಟನಾವಳಿಗಳನ್ನು ತನ್ನ ಸೆಲ್ ಫೋನ್‍ನಲ್ಲಿ ಚಿತ್ರೀಕರಿಸಿ ನಂತರ ಜನಾಂಗೀಯ ಅನ್ಯಾಯದ ವಿರುದ್ಧ ಜಾಗತಿಕ ಆಂದೋಲನಕ್ಕೆ ಕಾರಣೀಕರ್ತಳಾದ ಹದಿಹರೆಯದ ಯುವತಿ ಡರ್ನೆಲ್ಲಾ ಫ್ರೇಝಿಯರ್‍ಗೆ ಪುಲಿಟ್ಝರ್ ಪ್ರಶಸ್ತಿ ಸಮಿತಿ ವಿಶೇಷ ಗೌರವ ನೀಡಿದೆ.

"ಜಾರ್ಜ್ ಫ್ಲಾಯ್ಡ್ ಹತ್ಯೆ ಘಟನಾವಳಿಗಳನ್ನು ಧೈರ್ಯದಿಂದ ಚಿತ್ರೀಕರಿಸಿ ನಂತರ ಪೊಲಿಸ್ ದೌರ್ಜನ್ಯದ ವಿರುದ್ಧ  ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿ ಸತ್ಯ ಮತ್ತು ನ್ಯಾಯಕ್ಕಾಗಿನ ಹೋರಾಟದಲ್ಲಿ ನಾಗರಿಕ ಪತ್ರಕರ್ತರ ಪ್ರಮುಖ ಪಾತ್ರವನ್ನು ಆಕೆ ಬಿಂಬಿಸಿದ್ದಾರೆ" ಎಂದು ಡರ್ನೆಲ್ಲಾಗೆ ನೀಡಿದ ಗೌರವದಲ್ಲಿ ಪುಲಿಟ್ಜರ್ ಮಂಡಳಿ ಹೇಳಿದೆ.

ಜಾರ್ಜ್ ಫ್ಲಾಯ್ಡ್ ಹತ್ಯೆ ಘಟನೆ ಮೇ 25, 2020ರಂದು ನಡೆದ ವೇಳೆ ಡರ್ನೆಲ್ಲಾಗೆ 17 ವರ್ಷ ವಯಸ್ಸು. ಪ್ರಕರಣದ ವಿಚಾರಣೆ ವೇಳೆ ತನ್ನ ಹೇಳಿಕೆ ನೀಡಿದ್ದ ಡರ್ನೆಲ್ಲಾ ತನ್ನ 9 ವರ್ಷದ ಸೋದರ ಸಂಬಂಧಿ ಬಾಲಕಿಯ ಜತೆಗೆ ರಸ್ತೆಯ ಅಂಚಿನಲ್ಲಿರುವ ಅಂಗಡಿಗೆ ತಿನಿಸು ತರಲು  ನಡೆದುಕೊಂಡು ಹೋಗುತ್ತಿದ್ದಾಗ ಪೊಲೀಸ್ ಅಧಿಕಾರಿ ರಸ್ತೆ ಬದಿಯಲ್ಲಿ ತನ್ನನ್ನು ಬಿಟ್ಟು ಬಿಡುವಂತೆ ಅಂಗಲಾಚುತ್ತಿದ್ದ ವ್ಯಕ್ತಿಯೊಬ್ಬನನ್ನು ನೆಲಕ್ಕೆ ಬೀಳಿಸಿದ್ದರು ಎಂದು  ಆರೋಪಿ ಮಾಜಿ ಅಧಿಕಾರಿ ಡೆರೆಕ್ ಚೌವಿನ್  ಕುರಿತಂತೆ ಆಕೆ ಹೇಳಿದ್ದಳು.

ತನ್ನ ಜತೆಗಿದ್ದವಳು ಈ ಘಟನೆ ನೋಡುವುದು ಬೇಡವೆಂದು ಆಕೆಯನ್ನು ಅಂಗಡಿಗೆ ಕಳುಹಿಸಿ ತಾನು ಮತ್ತೆ ಬಂದು ಘಟನೆ ಚಿತ್ರೀಕರಿಸಿದ್ದಾಗಿ ಆಕೆ ಹೇಳಿದ್ದಳಲ್ಲದೆ "ಅದು ಸರಿಯಾದ ಕ್ರಮವಾಗಿರಲಿಲ್ಲ, ಆತ ನೋವನನ್ನುಭವಿಸುತಿದ್ದ" ಎಂದು ಹೇಳಿದ್ದಳು. ತನಗೆ ಉಸಿರಾಡಲು ಆಗುತ್ತಿಲ್ಲ ಎಂದು ಫ್ಲಾಯ್ಡ್ ಸತತವಾಗಿ  ಹೇಳುತ್ತಾ ಕೊನೆಗೆ ಕೊನೆಯುಸಿರೆಳೆದಿರುವ  ಚಿತ್ರಣವನ್ನು ಆಕೆಯ ವೀಡಿಯೋ ತೋರಿಸಿತ್ತಲ್ಲದೆ ಅಧಿಕಾರಿಯ ವಿಚಾರಣೆ ವೇಳೆ ಇದು ಪ್ರಮುಖ ಸಾಕ್ಷ್ಯವಾಗಿತ್ತು. ಮುಂದೆ ಎಪ್ರಿಲ್ ತಿಂಗಳಿನಲ್ಲಿ ಆತನನ್ನು ದೋಷಿಯೆಂದು ಘೋಷಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X