Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ನವಭಾರತ್ ಸರ್ಕಲ್‌ನಲ್ಲಿ...

ಮಂಗಳೂರು: ನವಭಾರತ್ ಸರ್ಕಲ್‌ನಲ್ಲಿ ಪುರಾತನ ಬಾವಿ ಪತ್ತೆ !

ವಾರ್ತಾಭಾರತಿವಾರ್ತಾಭಾರತಿ12 Jun 2021 7:38 PM IST
share
ಮಂಗಳೂರು: ನವಭಾರತ್ ಸರ್ಕಲ್‌ನಲ್ಲಿ ಪುರಾತನ ಬಾವಿ ಪತ್ತೆ !

ಮಂಗಳೂರು, ಜೂ. 12: ನಗರದ ರಾಷ್ಟ್ರಕವಿ ಗೋವಿಂದ ಪೈ ವೃತ್ತದಲ್ಲಿ (ನವಭಾರತ್ ವೃತ್ತ) ಶನಿವಾರ ಪುರಾತನ ಬಾವಿ ಪತ್ತೆಯಾಗಿದ್ದು, ಸುಮಾರು 100 ವರ್ಷಗಳಿಗೂ ಹಿಂದಿನ ಬಾವಿ ಇದೆಂದು ಹೇಳಲಾಗಿದೆ.

ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ವೃತ್ತದ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಹಳೆ ವೃತ್ತವನ್ನು ತೆರವುಗೊಳಿಸಿ ಶುಚಿಗೊಳಿಸುವ ಕೆಲಸ ನಡೆಯುತ್ತಿದೆ. ಈ ಸಂದರ್ಭ ವೃತ್ತದ ತಳಪಾಯದಲ್ಲಿ ಅಗಲವಾದ ಕಾಂಕ್ರಿಟ್ ಸ್ಲ್ಯಾಬ್ ಇರುವುದು ಪತ್ತೆಯಾಗಿದೆ. ಕುತೂಹಲದಿಂದ ಕಾಂಕ್ರಿಟ್ ಒಡೆದು ನೋಡಿದಾಗ ಒಳಗಡೆ ಸುಮಾರು 40 ಅಡಿ ಆಳದ ಬಾವಿ ಪತ್ತೆಯಾಗಿದೆ.

ಇತ್ತೀಚೆಗೆ ಹಂಪನಕಟ್ಟೆ ಬಳಿ ಪತ್ತೆಯಾಗಿದ್ದ ಬಾವಿಯ ಅವಧಿಯಲ್ಲೇ ಈ ಬಾವಿಯೂ ನಿರ್ಮಾಣವಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯಲ್ಲಿ ಸುಮಾರು 20 ಅಡಿ ಆಳದಲ್ಲಿ ನೀರು ಕಂಡು ಬರುತ್ತಿದ್ದು, ಬಾವಿಯ ನಿಖರವಾದ ಆಳವನ್ನು ಅಂದಾಜಿಸಲಾಗಿಲ್ಲ.

ಸುಮಾರು 35 ವರ್ಷಗಳ ಹಿಂದೆ ನವಭಾರತ್ ವೃತ್ತವನ್ನು ಅಭಿವೃದ್ಧಿಪಡಿಸಲಾಗಿತ್ತು. ಆ ಬಳಿಕ ವೃತ್ತದ ಮೇಲ್ಭಾಗವನ್ನಷ್ಟೇ ಸುಂದರೀಕರಣಗೊಳಿಸಲಾಗಿತ್ತು. ಹಿಂದೆ ವೃತ್ತವನ್ನು ಅಭಿವೃದ್ಧಿಪಡಿಸಿದ ಸಂದರ್ಭ ಕಾಂಕ್ರಿಟ್ ಸ್ಲ್ಯಾಬ್ ಅಳವಡಿಸಿರುವ ಸಾಧ್ಯತೆ ಇದೆ. ಆದರೆ ಈ ಬಾವಿ ಎಷ್ಟು ಹಳೆಯದು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಬಾವಿಯ ಅಸ್ತಿತ್ವವನ್ನು ಉಳಿಸಲು ಪ್ರಯತ್ನಿಸಲಾಗುವುದು ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.

ಸದ್ಯ ವೃತ್ತದ ಅಭಿವೃದ್ಧಿಗೆ ಪ್ಲ್ಯಾನ್ ಸಿದ್ಧವಾಗಿದ್ದು, ಅದರಂತೆ ಕಾಮಗಾರಿ ಆರಂಭವಾಗಿದೆ. ಮುಂದೆ ಈ ವೃತ್ತವನ್ನು ಮಂಗಳೂರಿನ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್‌ನವರು ನಿರ್ವಹಣೆ ಮಾಡುವ ಬಗ್ಗೆ ಈಗಾಗಲೇ ಪಾಲಿಕೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಹಿಂದೆಲ್ಲಾ ಹ್ಯಾಂಡ್‌ಮೇಡ್ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದ ಕಾರಣ ಬಾಳ್ವಿಕೆ ಹೆಚ್ಚಾಗಿದ್ದು, ಕಾಂಕ್ರಿಟೀಕರಣದ ಸಂದರ್ಭ ಹುದುಗಿರುವ ಈ ಬಾವಿಗಳು ಅತ್ಯಂತ ಸುರಕ್ಷಿತವಾಗಿರುವುದು ಕಂಡು ಬರುತ್ತಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಅಭಿಪ್ರಾಯಿಸಿದ್ದಾರೆ.

ರಾಷ್ಟ್ರಕವಿ ಗೋವಿಂದ ಪೈ ವೃತ್ತ ಅಭಿವೃದ್ಧಿಯಾಗುವ ಸಂದರ್ಭ ಸ್ವಲ್ಪ ನಕಾಶೆ ಬದಲಾಯಿಸಲಾಗಿದ್ದು, ಈಗಿರುವ ವಿಸ್ತೀರ್ಣಕ್ಕಿಂತ ಅಗಲವಾಗಿ ಬರಲಿದೆ. ವೃತ್ತಕ್ಕೆ ಸಂಪರ್ಕ ಕಲ್ಪಿಸುವ ನಾಲ್ಕು ರಸ್ತೆಗಳು ಅಭಿವೃದ್ಧಿಯಾಗುವ ಹಿನ್ನೆಲೆಯಲ್ಲಿ ವೃತ್ತವನ್ನೂ ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ ಎಂದು ಮೇಯರ್ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಯ ಹಿನ್ನೆಲೆಯಲ್ಲಿ ಈ ಹಿಂದೆ ಹಂಪನಕಟ್ಟೆಯಲ್ಲಿಯೂ ಪುರಾತನ ಬಾವಿ ಪತ್ತೆಯಾಗಿದ್ದು, ಅದನ್ನು ಸಂರಕ್ಷಿಸಿ ಮೇಲ್ಭಾಗದಲ್ಲಿ ಕಟ್ಟೆಯನ್ನು ನಿರ್ಮಿಸಿ ಹಳೆ ಐತಿಹ್ಯವನ್ನು ಉಳಿಸುವ ಪ್ರಯತ್ನವಾಗಿದೆ. ಬಾವಿ ಪತ್ತೆಯ ಮಾಹಿತಿಯನ್ನು ತಿಳಿದು ಬಹಳಷ್ಟು ಮಂದಿ ಕುತೂಹಲಿಗಳು ಸ್ಥಳಕ್ಕೆ ಆಗಮಿಸಿ ಫೋಟೋ, ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X