Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ ಮುಖ್ಯಮಂತ್ರಿ...

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ: ಕೇಂದ್ರ ಸಚಿವ ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ12 Jun 2021 8:01 PM IST
share
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ: ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಜೂ.12: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಈಗಾಗಲೇ ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ. ಆದುದರಿಂದ, ಯಾರೊಬ್ಬರೂ ಈ ಊಹಾಪೋಹಗಳಿಗೆ ಕಿವಿಗೊಡುವ ಅಗತ್ಯವಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಶನಿವಾರ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಂಕರ ಮಠ ವಾರ್ಡಿನ ಕುರುಬರಹಳ್ಳಿಯಲ್ಲಿರುವ ಶ್ರೀ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಮಂಜುನಾಥ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕೋವಿಡ್-19 ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿರುವ ಕ್ಷೇತ್ರದ ನಾಗರಿಕರಿಗೆ ಉಚಿತ ತರಕಾರಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ಯಶಸ್ವಿಯಾಗಿ ಎದುರಿಸುವುದಷ್ಟೇ ನಮ್ಮ ಮುಂದಿರುವ ಸವಾಲು. ರೆಮ್‍ಡಿಸಿವಿರ್ ಚುಚ್ಚುಮದ್ದನ್ನು ಮುಕ್ತ ಮಾರುಕಟ್ಟೆ ಮಾಡಿದ್ದು, ಉತ್ಪಾದನೆ ಹತ್ತು ಪಟ್ಟು ಅಧಿಕ ಮಾಡಲಾಗಿದೆ. ಮೊದಲು ತಿಂಗಳಿಗೆ 23 ಲಕ್ಷ ವಯಲ್ಸ್ ಸಿದ್ಧವಾಗುತ್ತಿತ್ತು. ಈಗ 1 ಕೋಟಿ 19 ಲಕ್ಷ ವಯಲ್ಸ್ ಉತ್ಪಾದನೆ ಮಾಡುತ್ತಿದ್ದೇವೆ. ವಿಶೇಷವಾಗಿ ಈಗ ಇದರ ಉಪಯೋಗ ಕಡಿಮೆಯಾದರೂ ಕರ್ನಾಟಕಕ್ಕೆ 14 ಲಕ್ಷ 75 ಸಾವಿರ ಇಂಜೆಕ್ಷನ್ ಕೇಂದ್ರದಿಂದ ಹಂಚಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಆದರೆ, ರಾಜ್ಯ ಸರಕಾರ 9 ಲಕ್ಷ 25 ಸಾವಿರ ವಯಲ್ಸ್ ಮಾತ್ರ ಕೇಂದ್ರದಿಂದ ಪಡೆದಿದ್ದು, ಇನ್ನೂ ಉಳಿದ ದಾಸ್ತಾನು ಅನ್ನು ಆದಷ್ಟು ಬೇಗ ಕೇಂದ್ರದಿಂದ ಪಡೆದುಕೊಂಡು, ಮುಂಜಾಗೃತಾ ಕ್ರಮವಾಗಿ ಸ್ಟಾಕ್ ಇಟ್ಟುಕೊಳ್ಳಲು ರಾಜ್ಯದ ಆರೋಗ್ಯ ಮಂತ್ರಿಗಳು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸದಾನಂದಗೌಡ ಹೇಳಿದರು.

ಬ್ಲಾಕ್ ಫಂಗಸ್ ಬಗ್ಗೆ ಉಪ ಮುಖ್ಯಮಂತ್ರಿ ಅಶ್ವಥ ನಾರಾಯಣ ಹಾಗೂ ಆರೋಗ್ಯ ಮಂತ್ರಿ ಸುಧಾಕರ್ ಬಳಿ ಕೇಳಿದಾಗ ರಾಜ್ಯದಲ್ಲಿ 2000 ಕೇಸ್ ಇರುವುದು ತಿಳಿದು ಬಂದಿದೆ. ಇನ್ನೂ ನಿಖರವಾಗಿ ಮಾಹಿತಿ ಕಲೆ ಹಾಕಲು ಸೂಚಿಸಲಾಗಿದ್ದು, ಬ್ಲಾಕ್ ಫಂಗಸ್ ನಿಯಂತ್ರಣಕ್ಕೆ 40,470 ವಯಲ್ಸ್ ಚಚ್ಚು ಮದ್ದುಗಳನ್ನು ಗಳನ್ನು ಕೇಂದ್ರದಿಂದ ನೀಡಿದ್ದು, ನಿನ್ನೆ 15 ಸಾವಿರ ಚುಚ್ಚುಮದ್ದುಗಳಿಗೆ ಆದೇಶ ಮಾಡಲಾಗಿದೆ. ಯಾವುದೇ ರೀತಿ ಔಷಧ ಕೊರತೆ ಆಗದ ರೀತಿ ಕೇಂದ್ರ ಸರಕಾರದಿಂದ ಬ್ಲಾಕ್ ಫಂಗಸ್ ಸೇರಿದಂತೆ ಎಲ್ಲದಕ್ಕೂ ನೆರವು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಅವೀನ್ ಆರಾಧ್ಯ ನೇತೃತ್ವದ ಶ್ರೀ ಮಂಜುನಾಥ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಉಚಿತ ತರಕಾರಿ ವಿತರಣೆ ಕಾರ್ಯಕ್ರಮ ಒಂದು ವಿನೂತನ ಕಾರ್ಯಕ್ರಮವಾಗಿದೆ. ಈವರೆಗೆ ಕ್ಷೇತ್ರದ ಶಾಸಕರು ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಂಘ ಸಂಸ್ಥೆಗಳು ಹಾಗೂ ಪಕ್ಷದ ವತಿಯಿಂದ ಆಹಾರದ ಕಿಟ್ ವಿತರಣೆ ಮಾಡಲಾಗುತ್ತಿತ್ತು. ಈಗ ಮಂಜುನಾಥ ಟ್ರಸ್ಟ್ ನವರೂ ರೈತರ ನೆರವಿಗೆ ಧಾವಿಸಿ ಅವರು ಬೆಳೆದ ತರಕಾರಿಗಳನ್ನು ಒಳ್ಳೆಯ ದರ ನೀಡಿ ತಂದು ಇಲ್ಲಿನ ನಾಗರಿಕರಿಗೆ ಉಚಿತವಾಗಿ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದು ಸದಾನಂದಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

ಅಬಕಾರಿ ಸಚಿವ ಕೆ.ಗೋಪಾಲಯ್ಯ ಮಾತನಾಡಿ, ಶಂಕರಮಠ ವಾರ್ಡ್‍ನಲ್ಲಿ ಇಂದು ಉಚಿತ ತರಕಾರಿ ವಿತರಣೆ ಕಾರ್ಯಕ್ರಮ ಆಯೋಜನೆ ಮಾಡಿರುವ ಶ್ರೀ ಮಂಜುನಾಥ ಟ್ರಸ್ಟ್ ಅಧ್ಯಕ್ಷ ಅವೀನ್ ಆರಾಧ್ಯ ಮತ್ತು ಅವರ ತಂಡ ನೆರೆಯ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ರೈತರಿಂದ ನೇರವಾಗಿ ಮೂಲ ಬೆಲೆ ಕೊಟ್ಟು ಖರೀದಿಸಿ ತಂದು ವಾರ್ಡ್ ನಲ್ಲಿರುವ ಸುಮಾರು 5000 ಕ್ಕಿಂತ ಹೆಚ್ಚಿನ ಮನೆಗಳಿಗೆ ತೆರಳಿ ನೀಡುತ್ತಿದ್ದು, ಈ ತರಕಾರಿ ಕಿಟ್ 4 ರಿಂದ 5 ಕೆಜಿ ತೂಕವಿದ್ದು, ಎಲ್ಲ ತಾಜಾ ತರಕಾರಿ ಪ್ಯಾಕ್ ಮಾಡಿ ಮನೆ ಮನೆಗೆ ತೆರಳಿ ನೀಡುತ್ತಿದ್ದಾರೆ ಎಂದರು.

ಕಳೆದ ವರ್ಷ ಇದೇ ರೀತಿ ತರಕಾರಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಇದಲ್ಲದೆ ಬೃಹತ್ ಆರೋಗ್ಯ ಶಿಬಿರ, ಜನ ಔಷಧಿ ಕೇಂದ್ರದ ವತಿಯಿಂದ ಉಚಿತ ಔಷಧಿ ವಿತರಣೆ ಸೇರಿದಂತೆ ಹತ್ತು ಹಲವು ಸಾಮಾಜಿಕ ಕಳಕಳಿ ಹೊಂದಿರುವ ಕೆಲಸ ಮಾಡುತ್ತಿರುವ ಈ ಸಂಸ್ಥೆ ಇಂದು ವಿನೂತನವಾದ ಕಾರ್ಯ ಮಾಡುತ್ತಿದೆ ಎಂದು ಗೋಪಾಲಯ್ಯ ಹೇಳಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಬಿಬಿಎಂಪಿ ಮಾಜಿ ಉಪ ಮಹಾಪೌರ ಎಸ್.ಹರೀಶ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ನಾರಾಯಣ ಗೌಡ, ಉಪಾಧ್ಯಕ್ಷ ಎನ್.ಜಯರಾಂ, ಉತ್ತರ ಜಿಲ್ಲೆಯ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಎಂ.ಶ್ರೀನಿವಾಸ್, ಶ್ರೀ ಮಂಜುನಾಥ ಟ್ರಸ್ಟ್  ಅಧ್ಯಕ್ಷ ಅವೀನ್ ಆರಾಧ್ಯ, ಮುಖಂಡರಾದ ರುದ್ರಮುನಿ, ವಿಜಯ ಕುಮಾರ್, ಪ್ರಭಾಕರ್, ಬೋರೇಗೌಡ, ಸತೀಶ್ ಶೆಟ್ಟಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X