Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೂ.15ಕ್ಕೆ ‘ಲೈಫ್ ಆ್ಯಂಡ್ ಆರ್ಟ್ ಆಫ್...

ಜೂ.15ಕ್ಕೆ ‘ಲೈಫ್ ಆ್ಯಂಡ್ ಆರ್ಟ್ ಆಫ್ ಕೆ.ಕೆ.ಹೆಬ್ಬಾರ್’ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ12 Jun 2021 8:18 PM IST
share
ಜೂ.15ಕ್ಕೆ ‘ಲೈಫ್ ಆ್ಯಂಡ್ ಆರ್ಟ್ ಆಫ್ ಕೆ.ಕೆ.ಹೆಬ್ಬಾರ್’ ಕೃತಿ ಬಿಡುಗಡೆ

ಮಣಿಪಾಲ, ಜೂ.12: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಸಂಸ್ಥೆಯು ಉಡುಪಿ ಮೂಲದ ವಿಶ್ವವಿಖ್ಯಾತ ಚಿತ್ರಕಲಾವಿದ ಕೆ. ಕೆ. ಹೆಬ್ಬಾಾರ್ (ಕಟ್ಟಿಂಗೇರಿ ಕೃಷ್ಣ ಹೆಬ್ಬಾರ್) ಅವರ 110ನೆಯ ಜನ್ಮದಿನೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ‘ಸೆಲಬ್ರೇಟಿಂಗ್ ಹೆಬ್ಬಾರ್’ ಎಂಬ ಶೀರ್ಷಿಕೆಯೊಂದಿಗೆ ಆಚರಿಸಲಿದೆ.

ಈ ಸಂದರ್ಭದಲ್ಲಿ ಮಾಹೆಯ ಯೂನಿವರ್ಸಲ್ ಪ್ರೆಸ್ (ಎಂಯುಪಿ) ‘ಲೈಫ್ ಆ್ಯಂಡ್ ಆರ್ಟ್ ಆಫ್ ಕೆ. ಕೆ. ಹೆಬ್ಬಾರ್’ ಕೃತಿಯನ್ನು ಮತ್ತು ಮಣಿಪಾಲ ದ ಕೆ.ಕೆ.ಹೆಬ್ಬಾರ್ ಗ್ಯಾಲರಿ ಆ್ಯಂಡ್ ಆರ್ಟ್ ಸೆಂಟರ್ ನಿರ್ಮಿಸಿರುವ ಎರಡು ಸಾಕ್ಷ್ಯಚಿತ್ರಗಳನ್ನು ಜೂ.15ರ ಮಂಗಳವಾರ ಲೋಕಾರ್ಪಣೆ ಮಾಡಲಾಗುತ್ತಿದೆ.

ವರ್ಚುವಲ್ ಆಗಿ ನಡೆಯಲಿರುವ ಸಮಾರಂಭದಲ್ಲಿ ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ವರಿಷ್ಠರು ಹಾಗೂ ಕೆ.ಕೆ.ಹೆಬ್ಬಾರ್ ಕುಟುಂಬದ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಜೂ.15ರ ಸಂಜೆ 6:30ಕ್ಕೆ ಪ್ರಾರಂಭ ಗೊಳ್ಳಲಿದೆ. ಇದರಲ್ಲಿ ಹಿರಿಯ ಲೇಖಕ ಕು.ಶಿ.ಹರಿದಾಸ್ ಭಟ್ ಅವರು ಕನ್ನಡದ ರಚಿಸಿದ ಕೆ.ಕೆ. ಹೆಬ್ಬಾರ್ ಕುರಿತ ಕನ್ನಡ ಕೃತಿಯ ಇಂಗ್ಲೀಷ್ ರೂಪ ‘ಲೈಫ್ ಆ್ಯಂಡ್ ಆರ್ಟ್ ಆಫ್ ಕೆ.ಕೆ. ಹೆಬ್ಬಾರ್’ ಬಿಡುಗಡೆಗೊಳ್ಳಲಿದೆ. ಸಂಧ್ಯಾ ವಾಸೇದ್ ಹಾಗೂ ರುಕ್ಮಾ ವಾಸುದೇವ್ ಅವರು ಅನುವಾದಿಸಿರುವ ಈ ಕೃತಿಯ ಸಂಪಾದಕರು ರೇಖಾ ರಾವ್ ಹಾಗೂ ರಜನೀ ಪ್ರಸನ್ನ.

ಕಾರ್ಯಕ್ರಮದಲ್ಲಿ ಕಲಾ ಇತಿಹಾಸಜ್ಞೆ ಮತ್ತು ಆರ್ಟ್ ಕ್ಯುರೇಟರ್ ಆಗಿರುವ ಲೀನಾ ವಿನ್ಸೆೆಂಟ್ ಅವರು ಕೆ.ಕೆ.ಹೆಬ್ಬಾರರಿಗೆ ನುಡಿನಮನ ಸಲ್ಲಿಸಲಿದ್ದಾರೆ. ಮಾಹೆ ಕುಲಪತಿ ಲೆ.ಜ.(ಡಾ.) ಎಂ. ಡಿ. ವೆಂಕಟೇಶ್ ಕೃತಿಯನ್ನು ಬಿಡುಗಡೆ ಗೊಳಿಸಲಿದ್ದಾರೆ. ಕಾರ್ಯನಿರ್ವಾಹಕ ಉಪಾಧ್ಯಕ್ಷ ಡಾ.ಎಚ್.ವಿನೋದ್ ಭಟ್ ವಿಶೇಷ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕೆ. ಕೆ. ಹೆಬ್ಬಾರರನ್ನು ಕುರಿತ ಎರಡು ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದು ಮಾಹೆ ಯುನಿವರ್ಸಲ್ ಪ್ರೆಸ್‌ನ ಪ್ರಕಟಣೆ ತಿಳಿಸಿದೆ.

ಕೆ.ಕೆ.ಹೆಬ್ಬಾರ್ ಮೂಲತ: ಉಡುಪಿ ಸಮೀಪದ ಮೂಡುಬೆಳ್ಳೆೆ ಬಳಿಯ ಕಟ್ಟಿಂಗೇರಿ ಎಂಬ ಹಳ್ಳಿಯಲ್ಲಿ ಹುಟ್ಟಿದವರು. ಕಲಾವಿದರಾಗಿ ಮುಂಬಯಿಯಲ್ಲಿ ನೆಲೆನಿಂತು ವಿಶ್ವವಿಖ್ಯಾತರಾದರೂ ಕಲಾಕೃತಿಗಳಲ್ಲಿ ಕರ್ನಾಟಕ ಕರಾವಳಿಯ ಪರಂಪರೆ ಮತ್ತು ಸಂಸ್ಕೃತಿಯನ್ನೇ ಬಿಂಬಿಸುತ್ತಿದ್ದರು. ಮಾಹೆ ಕೆ.ಕೆ.ಹೆಬ್ಬಾರ್ ಗ್ಯಾಲರಿ ಆ್ಯಂಡ್ ಆರ್ಟ್ ಸೆಂಟರ್‌ನ್ನು ಸ್ಥಾಪಿಸುವ ಮೂಲಕ ಅವರನ್ನು ಗೌರವಿಸಿದೆ. ಈಗ ಮಣಿಪಾಲ ಯೂನಿವರ್ಸಲ್ ಪ್ರೆಸ್ ಮೂಲಕ ಅವರ ಕೃತಿಯನ್ನು ಪ್ರಕಟಿಸುತ್ತಿದೆ.

ಆಸಕ್ತರು ಪೂರ್ವಭಾವಿಯಾಗಿ ಹೆರನ್ನು ದಾಖಲಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಯುನಿವರ್ಸಲ್ ಪ್ರೆಸ್‌ನ ರೇವತಿ ನಾಡಗೀರ (ಮೊ: 8762563517) ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X