Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಪವರ್ ಬ್ಯಾಂಕ್ ಬಹುಕೋಟಿ ಹಗರಣ...

ಬೆಂಗಳೂರು: ಪವರ್ ಬ್ಯಾಂಕ್ ಬಹುಕೋಟಿ ಹಗರಣ ಬಯಲು; ವಿದೇಶಿ ಪ್ರಜೆಗಳು ಸೇರಿ 11 ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ12 Jun 2021 8:31 PM IST
share
ಬೆಂಗಳೂರು: ಪವರ್ ಬ್ಯಾಂಕ್ ಬಹುಕೋಟಿ ಹಗರಣ ಬಯಲು; ವಿದೇಶಿ ಪ್ರಜೆಗಳು ಸೇರಿ 11 ಮಂದಿಯ ಬಂಧನ

ಬೆಂಗಳೂರು, ಜೂ.12: ವಿವಿಧ ಆನ್‍ಲೈನ್ ವೇದಿಕೆಗಳ ಮೂಲಕ ‘ಪವರ್ ಬ್ಯಾಂಕ್’ ಹೆಸರಿನಲ್ಲಿ ಲಾಭದ ಆಮಿವೊಡ್ಡಿ ಬರೋಬ್ಬರಿ 290 ಕೋಟಿಗೂ ಅಧಿಕ ಹಣ ಸಂಗ್ರಹಿಸಿ ವಂಚನೆ ಆರೋಪ ಪ್ರಕರಣ ಸಂಬಂಧ ವಿದೇಶಿ ಪ್ರಜೆಗಳು ಸೇರಿ 11 ಮಂದಿ ಆರೋಪಿಗಳನ್ನು ಸಿಐಡಿ ಬಂಧಿಸಿದೆ.

ದೂರಿನನ್ವಯ ಡಬ್ಲ್ಯುಪಿ ರಮ್ಮಿ ಕಂಪೆನಿ ನಿರ್ದೇಶಕ ಅನಸ್ ಅಹ್ಮದ್, ಇಬ್ರಾಹಿಂ ಅಮೀರ್, ಧೋನ್‍ಡುಪ್ ವಂಗ್ಯಾಲ್, ಅರೋಕಿಯಾನಾಥನ್, ರಾಮ್ ಉಜಘರ್, ಪ್ರಕಾಶ್ ವೈರಾಗಿ, ಹರೇಶ್‍ಬಾಯ್ ಗೋಬರಪಬಾಯ್, ವನಜಾರ್ ವಿಜಯ್ ಬಾಯ್, ವನಜಾರ್ ಮಮತಾ ಬೆನ್, ಪರ್ಪಿಲೆಹ್ಯುಸ್ ಸನ್ನಿ, ಜ್ಯೋತಿ ತಿವಾರಿ, ಭಗವತಿ ಪಂತ್ ಎಂಬುವರ ವಿರುದ್ಧ ವಂಚನೆ (ಐಪಿಸಿ 420) ಆರೋಪ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‍ಐಆರ್ ದಾಖಲಾಗಿದೆ.

ಬಂಧಿತರ ಪೈಕಿ ಇಬ್ಬರು ಚೀನಿ ಪ್ರಜೆಗಳು, ಇಬ್ಬರು ಟಿಬೆಟನ್ ಪ್ರಜೆಗಳು ಹಾಗೂ ಐದು ಜನ ಕಂಪೆನಿಯ ನಿರ್ದೇಶಕರು ಸೇರಿದಂತೆ 11 ಮಂದಿ ಇದ್ದಾರೆ.

ದಿನ ಹಾಗೂ ವಾರ ಲಾಭದ ಆಮಿಷವೊಡ್ಡಿ ರಾಜ್ಯದ ಸಾವಿರಾರು ಜನರಿಂದ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿರುವ ಆರೋಪದಡಿ 13 ಕಂಪೆನಿಗಳ ವಿರುದ್ಧ ರೇಜೋರ್‍ಪೇ ಕಂಪೆನಿಯ ಕಾನೂನು ವಿಭಾಗದ ಪ್ರತಿನಿಧಿ ಅಭಿಷೇಕ್ ಅಭಿನವ್ ಆನಂದ್ ಎಂಬವರು ಸಿಐಡಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದರು.

ಈ ಪ್ರಕರಣದಲ್ಲಿ ಒಟ್ಟಾರೆಯಾಗಿ ಆರೋಪಿತ ಕಂಪನಿಗಳ ಬ್ಯಾಂಕ್ ಖಾತೆಗಳಿಗೆ 290 ಕೋಟಿ ರೂ.ಗೂ ಅಧಿಕ ಮೊತ್ತದ ಒಳಹರಿವು ಕಂಡು ಬಂದಿದ್ದು, ಸೈಬರ್ ಅಪರಾಧ ವಿಭಾಗದಿಂದ ಬ್ಯಾಂಕ್ ಖಾತೆಗಳನ್ನು ಗುರುತಿಸಿ ಗಣನೀಯ ಮೊತ್ತವನ್ನು ಖಾತೆಗಳಲ್ಲಿ ಸ್ಥಗಿತಗೊಳಿಸಲಾಗಿದೆ.

ಇನ್ನು, ಕೇರಳ ಮೂಲದ ಆರೋಪಿ ಅನಸ್ ಅಹ್ಮದ್ ಎಂಬಾತನು ಈ ಹಗರಣದ ಪ್ರಮುಖ ರೂವಾರಿಯಾಗಿದ್ದು, ತೀವ್ರ ವಿಚಾರಣೆಗೊಳಪಡಿಸಲಾಗಿದೆ. ಜತೆಗೆ, ಈತನ ಪತ್ನಿಯೂ ಆಗಿರುವ ಚೀನಾ ಪ್ರಜೆ ಹು ಕ್ಸಿಯೋಲಿನ್ ಪ್ರಕರಣದಲ್ಲಿ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ ಎಂದು ಸಿಐಡಿ ಅಧಿಕಾರಿವೊಬ್ಬರು ಮಾಹಿತಿ ನೀಡಿದ್ದಾರೆ.

'ಪವರ್ ಬ್ಯಾಂಕ್' ಬಂದ್:  ರಾಜ್ಯದಾದ್ಯಂತ ಸಾವಿರಾರು ಮಂದಿ ಪವರ್ ಬ್ಯಾಂಕ್ ಆ್ಯಪ್‍ನ ಆಯಾ ಯೋಜನೆಗಳಿಗೆ ತಕ್ಕಂತೆ 3 ಸಾವಿರದಿಂದ ಲಕ್ಷಾಂತರ ರೂಪಾಯಿವರೆಗೂ ಹೂಡಿಕೆ ಮಾಡಿದ್ದಾರೆ. ಆರ್‍ಬಿಐ ನಿಯಮದ ಕಾರಣ ನೀಡಿ ಏಕಾಏಕಿ ಆ್ಯಪ್ ಕಾರ್ಯಾಚರಣೆ ಬಂದ್ ಮಾಡಲಾಗಿದೆ.
ಸಿಐಡಿ ಸೈಬರ್ ಕ್ರೈಂ ವಿಭಾಗ ಮಾತ್ರವಲ್ಲದೇ ಬೆಂಗಳೂರು ಹಾಗೂ ರಾಜ್ಯದ ವಿವಿಧ ನಗರಗಳಲ್ಲೂ ವಂಚನೆ ಬಗ್ಗೆ ಎಫ್‍ಐಆರ್ ದಾಖಲಾಗಿವೆ.

ದೂರು ಏನು?
ಸಂಸ್ಥೆ ಹಾಗೂ ಗ್ರಾಹಕರ ನಡುವಿನ ಹಣ ವರ್ಗಾವಣೆ ಕಂಪನಿಯಾಗಿ ರೇಜೋರ್ ಪೇ ಕೆಲಸ ಮಾಡುತ್ತಿದೆ. ವಂಚನೆ ಪ್ರಕರಣದಡಿ 13 ಆರೋಪಿಗಳ ಕಂಪೆನಿಗಳು ನಮ್ಮ ಕಂಪೆನಿಯಡಿ ನೋಂದಣಿ ಮಾಡಿಕೊಂಡಿವೆ ಎಂದು ರೇಜೋರ್ ಪೇ ಕಂಪೆನಿಯ ಅಭಿಷೇಕ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪವರ್ ಬ್ಯಾಂಕ್ ಹಾಗೂ ಇತರೆ ಆನ್‍ಲೈನ್ ಆ್ಯಪ್‍ಗಳನ್ನು ಸೃಷ್ಟಿಸಿರುವ ಆರೋಪಿಗಳು, ಸಾವಿರಾರು ಗ್ರಾಹಕರಿಗೆ ವಂಚಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಪ್ರಮುಖವಾಗಿ ಅನಸ್ ಅಹ್ಮದ್‍ನನ್ನು ಮದುವೆಯಾಗಿರುವ ಕ್ಸಿಯೋಲಿನ್, ಆತನ ಮೂಲಕ ‘ಡಬ್ಲ್ಯುಪಿ ರಮ್ಮಿ’ ಕಂಪೆನಿ ತೆರೆದಿದ್ದಾಳೆ. ಅದಕ್ಕೆ ಪತಿ, ಆಕೆ ಹಾಗೂ ಇತರರು ನಿರ್ದೇಶಕರಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X