Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ಳೆ: ಕೆ.ಕೆ.ಹೆಬ್ಬಾರ್ ಥೀಂ ಪಾರ್ಕ್...

ಬೆಳ್ಳೆ: ಕೆ.ಕೆ.ಹೆಬ್ಬಾರ್ ಥೀಂ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ12 Jun 2021 9:06 PM IST
share
ಬೆಳ್ಳೆ: ಕೆ.ಕೆ.ಹೆಬ್ಬಾರ್ ಥೀಂ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಶಿರ್ವ, ಜೂ.12: ಪದ್ಮಶ್ರೀ, ಪದ್ಮಭೂಷಣ ಪುರಸ್ಕೃತ ಅಂತಾರಾಷ್ಟ್ರೀಯ ಖ್ಯಾತಿಯ ರೇಖಾಚಿತ್ರ ಕಲಾವಿದ ಕೆ.ಕೆ.ಹೆಬ್ಬಾರ್(ಕಟ್ಟಿಂಗೇರಿ ಕೃಷ್ಣ ಹೆಬ್ಬಾರ್) ಹುಟ್ಟಿ ಬೆಳೆದ ಬೆಳ್ಳೆ ಗ್ರಾಪಂ ವ್ಯಾಪ್ತಿಯ ಕಟ್ಟಿಂಗೇರಿಯಲ್ಲಿ ಅವರ 110ನೇ ಜಯಂತಿ ಪ್ರಯುಕ್ತ ಬೆಳ್ಳೆ ಗ್ರಾಪಂ ವತಿಯಿಂದ ಕೆ.ಕೆ. ಹೆಬ್ಬಾರ್ ಥೀಂಪಾರ್ಕ್ ನಿರ್ಮಿಸಲು ಯೋಜಿಸಿದೆ.

ಇದಕ್ಕೆ ಮೀಸಲಿರಿಸಲು ಉದ್ದೇಶಿಸಿರುವ ಸ್ಥಳಕ್ಕೆ ಜೂ.11ರಂದು ಬೆಳ್ಳೆ ಗ್ರಾಪಂ ಅಧ್ಯಕ್ಷ ಸುಧಾಕರ ಪೂಜಾರಿ, ಸದಸ್ಯ, ಮಾಜಿ ಅಧ್ಯಕ್ಷ ರಾಜೇಂದ್ರ ಶೆಟ್ಟಿ, ಗ್ರಾಮ ಕರಣಿಕ ಪ್ರದೀಪ್ ಕುಮಾರ್, ಸಹಾಯಕ ಸ್ಟ್ಯಾನಿ ಡಿಸೋಜಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಥೀಂಪಾರ್ಕ್‌ನಲ್ಲಿ ಕೆಕೆ ಹೆಬ್ಬಾರ್ ಜೇಡಿ ಮಣ್ಣಿನ ಗಟ್ಟಿಗಳಿಂದ ಚಿತ್ರಗಳನ್ನು ಬಿಡಿಸುತ್ತಿದ್ದ ಕಟ್ಟಿಂಗೇರಿ ಕೆರೆ ದಂಡೆಯ ಬಂಡೆಯ ಮೇಲೆ ಅವರ ಪ್ರತಿಮೆ ಸ್ಥಾಪನೆ, ಕೆಕೆ ಹೆಬ್ಬಾರ್ ಆರ್ಟ್ ಗ್ಯಾಲರಿ, ಗ್ರಂಥಾಲಯ, ಚಿತ್ರಕಲಾ ತರಬೇತಿ ಕೇಂದ್ರ, ಕಾಷ್ಠಶಿಲ್ಪತರಬೇತಿ ಕೇಂದ್ರ, ಕಸೂತಿ ಮತ್ತು ಹೊಲಿಗೆ ತರಬೇತಿ ಕೇಂದ್ರ(ಗ್ರಾಮೀಣ ಕೌಶಲಾಭಿವೃದ್ಧಿ ಕೇಂದ್ರ), ದೃಕ್‌ಶ್ರಾವ್ಯ ಸಭಾಂಗಣ ಮತ್ತು ಕಾರ್ಯಾಲಯ ಇರುತ್ತದೆ.

‘ಗ್ರಾಪಂ ವ್ಯಾಪ್ತಿಯ ಕಟ್ಟಿಂಗೇರಿಯಲ್ಲಿ ವಿಶ್ವವಿಖ್ಯಾತ ರೇಖಾಚಿತ್ರ ಕಲಾವಿದ ಕೆಕೆ ಹೆಬ್ಬಾರ್ ಥೀಂ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಇರುವ ಜಾಗವನ್ನು ಮಂಜೂರು ಮಾಡಲು ಈಗಾಗಲೇ ತಹಶೀಲ್ದಾರ್‌ರವರಿಗೆ ಪ್ರಸ್ಥಾವನೆ ಸಲ್ಲಿಸ ಲಾಗಿದ್ದು, ಪ್ರಕ್ರಿಯೆ ಜಾರಿಯಲ್ಲಿದೆ. ಅನುದಾನಕ್ಕಾಗಿ ಕನ್ನಡ ಸಂಸ್ಕೃತಿ ಇಲಾಖೆಗೆ ಪತ್ರ ಬರೆಯಲಾಗಿದ್ದು, ಅನುಮತಿ ನೀಡಿದ್ದಾರೆ. ಕ್ಷೇತ್ರದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಾಗೂ ಸಂಸದರಿಗೂ ಪತ್ರ ಬರೆಯಲಾಗಿದ್ದು, ಧನಾತ್ಮಕವಾಗಿ ಸ್ಪಂದನ ನೀಡಿದ್ದಾರೆ ಎಂದು ಗ್ರಾಪಂ ಅಧ್ಯಕ್ಷ ಸುಧಾಕರ ಪೂಜಾರಿ ತಿಳಿಸಿದ್ದಾರೆ.

ಕೇಂದ್ರ ಸಚಿವಾಲಯಕ್ಕೆ ಪ್ರಸ್ತಾವನೆ

ಈ ಹಿಂದೆ ಕೇಂದ್ರ ಸರಕಾರದಿಂದ ಬಂದ ಸೂಚನೆಯಂತೆ ಕೆ.ಕೆ.ಹೆಬ್ಬಾರ್ ಅವರ 110ನೇ ಜಯಂತಿಯ ಅಂಗವಾಗಿ ಥೀಂ ಪಾರ್ಕ್ ರಚಿಸುವ ಬಗ್ಗೆ ಗ್ರಾಪಂ ಅಧ್ಯಕ್ಷ ಸುಧಾಕರ ಪೂಜಾರಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮೂಲಕ ಕೇಂದ್ರ ಸಂಸ್ಕೃತಿ ಸಚಿವರಿಗೆ ಮತ್ತು ಸಚಿವಾಲಯಕ್ಕೆ ಮೆೀ 15ರಂದು ಪ್ರಾಸ್ತವ ಸಲ್ಲಿಸಿದ್ದಾರೆ.

ಈ ಹಿಂದೆಯೇ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿ ಹಿನ್ನೆಲೆಯಲ್ಲಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬಂದಿ ರುವ ಪತ್ರಕ್ಕೆ ಸಂಬಂಧಿಸಿದಂತೆ ವಿವರವಾದ ಪ್ರಸ್ತಾವನೆಯನ್ನು ಸಿದ್ಧಗೊಳಿಸಲಾಗುತ್ತಿದೆ. ಸ್ಥಳ ಮೀಸಲು ಮಾಡುವ ಬಗ್ಗೆ ಕಂದಾಯ ಇಲಾಖೆಯಿಂದ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧ್ಯಕ್ಷ ಸುಧಾಕರ ಪೂಜಾರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X