ಮೈಸೂರು ನಗರ ಸಿಎಆರ್ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ
ಮೈಸೂರು,ಜೂ.12: ಮೈಸೂರು ನಗರದ ಸಿಎಆರ್ ಪೊಲೀಸ್ ಕಾನ್ಸ್ ಟೇಬಲ್ ವರುಣ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ವರುಣ ಕೆರೆಯಲ್ಲಿ ಶನಿವಾರ ಸಿಎಆರ್ ಪೊಲೀಸ್ ಕಾನ್ಸಟೇಬಲ್ ಆಗಿರುವ ಮೋಹನ್ ಎಪಿಸಿ 197 ಅವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು 2008 ನೇ ಬ್ಯಾಚ್ ನವರಾಗಿದ್ದು, ಬಾಂಬ್ ಸ್ವಾಡ್ ನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದೆ. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story