Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿ ಆವರಣದಲ್ಲಿ ವಿದೇಶಿ...

ಮಂಗಳೂರು ವಿವಿ ಆವರಣದಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ13 Jun 2021 8:55 PM IST
share
ಮಂಗಳೂರು ವಿವಿ ಆವರಣದಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ

ಮಂಗಳೂರು, ಜೂ.13: ನಗರ ಹೊರವಲಯದ ಕೊಣಾಜೆಯ ಮಂಗಳಗಂಗೋತ್ರಿಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ನಿರ್ಮಾಣಗೊಳ್ಳುತ್ತಿರುವ ವಸತಿ ನಿಲಯದ ಕಾಮಗಾರಿ ಭಾಗಶಃ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳ ವಾಸಕ್ಕೆ ಸಿದ್ಧಗೊಂಡಿವೆ.

ಅಪಘಾನಿಸ್ತಾನ, ಚೀನಾ, ಶ್ರೀಲಂಕಾ, ಇಂಡೋನೇಶಿಯಾ, ಇರಾನ್, ದಕ್ಷಿಣ ಆಫ್ರಿಕಾ, ನೇಪಾಲ ಸಹಿತ ಸುಮಾರು 29 ದೇಶಗಳ 140 ವಿದ್ಯಾರ್ಥಿಗಳು ಮಂಗಳೂರು ವಿವಿ ಆವರಣದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ (2021-22) ಸುಮಾರು 220 ವಿದೇಶಿ ವಿದ್ಯಾರ್ಥಿಗಳು ದಾಖಲಾತಿಗಾಗಿ ವಿವಿಯಿಂದ ಅರ್ಜಿ ಸ್ವೀಕರಿಸಿದ್ದಾರೆ.

ಅಂದಹಾಗೆ ಮಂಗಳೂರು ವಿವಿಯಲ್ಲಿರುವ ವಿದೇಶಿ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಪ್ರತ್ಯೇಕ ವಸತಿ ನಿಲಯವಿಲ್ಲ. ದೇರಳಕಟ್ಟೆಯಲ್ಲಿರುವ ಬಾಡಿಗೆ ಕಟ್ಟಡವೊಂದರಲ್ಲಿ ವಿದೇಶಿ ವಿದ್ಯಾರ್ಥಿಗಳು ವಾಸವಾಗಿದ್ದಾರೆ. ವಿದೇಶಿ ವಿದ್ಯಾರ್ಥಿಗಳು ವಿವಿ ಆವರಣದಲ್ಲೇ ವಾಸ್ತವ್ಯ ಹೂಡಿದರೆ ವಿದ್ಯಾರ್ಥಿಗಳಿಗೆ ಅನುಕೂಲ ಮತ್ತು ವಿವಿ ಆಡಳಿತಕ್ಕೆ ಈ ವಿದ್ಯಾರ್ಥಿಗಳ ಮೇಲ್ನೋಟವೂ ಸುಲಭ ಸಾಧ್ಯ ಎಂದು ಮನಗಂಡು ವಿವಿ ಆವರಣದಲ್ಲೇ ಅಂತಾರಾಷ್ಟ್ರೀಯ ವಸತಿ ನಿಲಯ ನಿರ್ಮಿಸಲಾಗುತ್ತಿದೆ. ಈ ಹಾಸ್ಟೆಲ್‌ನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ವ್ಯವಸ್ಥೆಗಳು ಇರಲಿವೆ.
ಬಹುಕೋಟಿ ವೆಚ್ಚದ ಈ ಹಾಸ್ಟೆಲ್ ನಿರ್ಮಾಣದ ಕಾಮಗಾರಿಯನ್ನು 5 ವರ್ಷದ ಹಿಂದೆ ಆರಂಭಿಸಲಾಗಿತ್ತು. ಆದರೆ ಸರಕಾರದ ಅನುಮೋದನೆ ಸಿಕ್ಕಿರಲಿಲ್ಲ. ವಸತಿ ನಿಲಯದ ಕಾಮಗಾರಿ ಆರಂಭಿಸಿದ್ದರಿಂದ ವಿವಿಯಿಂದಲೇ ಹಣ ವಿನಿಯೋಗಿಸಲಾಗಿತ್ತು. ನಿಗದಿತ ಅನುದಾನ ಮತ್ತು ಸರಕಾರದ ಒಪ್ಪಿಗೆ ಪಡೆಯುವ ಅಗತ್ಯವಿದ್ದ ಕಾರಣ ವಿವಿಯ ಪ್ರಸಕ್ತ ಆಡಳಿತ ಮಂಡಳಿಯು ಘಟನೋತ್ತರ ಒಪ್ಪಿಗೆ ನೀಡುವಂತೆ ಸರಕಾರವನ್ನು ಕೋರಿತ್ತು. ಅದರಂತೆ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ.

ವಸತಿ ನಿಲಯ ವ್ಯಾಪ್ತಿಯ ಇತರ ಬ್ಲಾಕ್‌ಗಳನ್ನು ಪರೀಕ್ಷಾ ಬ್ಲಾಕ್, ವಿವಿಐಪಿ ಗೆಸ್ಟ್ ಹೌಸ್‌ಗೆ ಬಳಕೆ ಮಾಡಲು ಚಿಂತನೆ ನಡೆಸಲಾಗಿದೆ. ಅಲ್ಲದೆ ವಿವಿಯಲ್ಲಿರುವ ಇತರ ಕೆಲವು ವಿಭಾಗಗಳನ್ನು ಮತ್ತೊಂದು ಬ್ಲಾಕ್‌ಗೆ ಸ್ಥಳಾಂತರಿಸುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ ಎಂದು ವಿವಿ ಮೂಲಗಳು ತಿಳಿಸಿವೆ.

ಸುಸಜ್ಜಿತ ‘ಪರೀಕ್ಷಾ ಭವನ

ರಾಜ್ಯದ ಎಲ್ಲಾ ವಿವಿ ವ್ಯಾಪ್ತಿಯಲ್ಲಿ ಪರೀಕ್ಷಾ ಭವನವು ಪ್ರತ್ಯೇಕವಾಗಿದೆ. ಆದರೆ ಮಂಗಳೂರು ವಿವಿಯಲ್ಲಿ ಪರೀಕ್ಷಾ ಭವನ ಪ್ರತ್ಯೇಕವಾಗಿಲ್ಲ. ವಿವಿಯ ಆಡಳಿತ ಸೌಧದ ಕೆಳಗಿನ ಮಹಡಿಯಲ್ಲಿ ಪರೀಕ್ಷಾ ಕಾರ್ಯಚಟುವಟಿಕೆಗಳು ನಡೆಯುತ್ತಿದೆ. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಇದರಿಂದ ಸಮಸ್ಯೆಯಾಗುವುದನ್ನು ಮನಗಂಡ ವಿವಿ ಆಡಳಿತವು ಸುಸಜ್ಜಿತ ಪರೀಕ್ಷಾ ಭವನ ಮಾಡಲು ನಿರ್ಧರಿಸಿತ್ತು. ಅದರಂತೆ ಸದ್ಯ ನಿರ್ಮಾಣ ಹಂತದಲ್ಲಿರುವ ಅಂತಾರಾಷ್ಟ್ರೀಯ ವಸತಿ ನಿಲಯದ ಪಕ್ಕದ ಬ್ಲಾಕ್ ಒಂದನ್ನು ‘ಪರೀಕ್ಷಾ ಭವನ’ಕ್ಕೆ ಮೀಸಲಿಡಲು ಮುಂದಾಗಿದೆ.

ಕಾಮಗಾರಿ ಶೀಘ್ರ ಪೂರ್ಣ 

ಮಂಗಳೂರು ವಿವಿ ಆವರಣದಲ್ಲಿ ಅಂತಾರಾಷ್ಟ್ರೀಯ ವಸತಿ ನಿಲಯ ಕಟ್ಟಡ ನಿರ್ಮಾಣ ಯೋಜನೆಯು ಅಂತಿಮ ಹಂತದಲ್ಲಿದೆ. ಕೊರೋನ ಸಮಸ್ಯೆಯಿಂದಾಗಿ ಕಾಮಗಾರಿಗೆ ಸ್ವಲ್ಪ ಹಿನ್ನೆಡೆಯಾಗಿದೆ. ಆದಾಗ್ಯೂ ಶೀಘ್ರ ಇದರ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ವಸತಿಗೆ ವ್ಯವಸ್ಥೆ ಕಲ್ಪಿಸಲಾಗುವುದು.
- ಪ್ರೊ ಪಿ.ಎಸ್.ಯಡಪಡಿತ್ತಾಯ, ಕುಲಪತಿ, ಮಂಗಳೂರು ವಿವಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X