Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಳು ಅಧಿಕೃತ ರಾಜ್ಯಭಾಷೆಗೆ ಆಗ್ರಹಿಸಿ...

ತುಳು ಅಧಿಕೃತ ರಾಜ್ಯಭಾಷೆಗೆ ಆಗ್ರಹಿಸಿ ಟ್ವಿಟರ್ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ13 Jun 2021 9:33 PM IST
share
ತುಳು ಅಧಿಕೃತ ರಾಜ್ಯಭಾಷೆಗೆ ಆಗ್ರಹಿಸಿ ಟ್ವಿಟರ್ ಅಭಿಯಾನ

ಮಂಗಳೂರು, ಜೂ.13: ನಾಡಿನ ವಿವಿಧ ತುಳು ಸಂಘಟನೆಗಳು ನೀಡಿದ ಕರೆಯಂತೆ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ತುಳು ಭಾಷೆ ಯನ್ನು ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿ ರವಿವಾರ ಟ್ವಿಟರ್ ಅಭಿಯಾನ ನಡೆಯಿತು.

‘ತುಳು ಅಫೀಶಿಯಲ್ ಇನ್ ಕೆಎ, ಕೆಎಲ್’ ಎಂಬ ಹ್ಯಾಷ್‌ಟ್ಯಾಗ್‌ನಡಿ ಸುಮಾರು 1.80 ಲಕ್ಷಕ್ಕೂ ಅಧಿಕ ಟ್ವೀಟ್ ಮಾಡುವ ಮೂಲಕ ತುಳು ಅಧಿಕೃತ ರಾಜ್ಯಭಾಷೆಗೆ ಬಲವಾದ ಒತ್ತಡ ಹಾಕಿ ಗಮನ ಸೆಳೆದಿದ್ದಾರೆ.

ಜೈ ತುಳುನಾಡು, ಯುವ ತುಳುನಾಡು ಸಂಘಟನೆಗಳ ನೇತೃತ್ವದಲ್ಲಿ ಹಲವು ಸಂಘ ಸಂಸ್ಥೆಗಳು ಈ ಅಭಿಯಾನದಲ್ಲಿ ಕೈಜೋಡಿಸಿದ್ದವು. ತುಳು ರಾಜ್ಯಭಾಷೆಯಾಗಿ ಅಧಿಕೃತವಾಗಿ ಘೋಷಣೆಯಾದರೆ ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ಸುಲಭವಾಗಲಿದೆ ಎಂಬ ಉದ್ದೇಶದಿಂದ ಈ ಟ್ವಿಟ್ಟರ್ ಅಭಿಯಾನ ಆಯೋಜಿಸಲಾಗಿತ್ತು.

ರವಿವಾರ ಬೆಳಗ್ಗಿನಿಂದಲೇ ಟ್ವೀಟ್‌ಗಳ ಸರಮಾಲೆ ಆರಂಭವಾಗಿದ್ದವು. ಮಧ್ಯಾಹ್ನದ ವೇಳೆಗೆ ವರ್ಲ್ಡ್ ಟ್ರೆಂಡಿಂಗ್‌ನಲ್ಲಿ 6ನೇ ಸ್ಥಾನಕ್ಕೇರುವ ಮೂಲಕ ಜಗತ್ತಿನ ಗಮನ ಸೆಳೆದಿತ್ತು. ಸಂಜೆಯ ವೇಳೆಗೆ 1.77 ಲಕ್ಷ ಮಂದಿ ಟ್ವೀಟ್ ಮಾಡಿದ್ದರು. ದೇಶ ವಿದೇಶಗಳ ತುಳುವರು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ, ಕರಾವಳಿಯ ಶಾಸಕರು, ಸಂಸದರಿಗೂ ಟ್ಯಾಗ್ ಮಾಡಿ ಒತ್ತಾಯಿಸಿದ್ದಾರೆ.

ಈ ಅಭಿಯಾನಕ್ಕೆ ತುಳು ಚಿತ್ರರಂಗದ ಬಹುತೇಕ ನಟ, ನಟಿಯರು ಕೈಜೋಡಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಕರಾವಳಿಯ ಶಾಸಕರು, ಮಾಜಿ ಶಾಸಕರು ಕೂಡ ಟ್ವೀಟ್ ಮಾಡಿದ್ದರು.

‘ತುಳು ರಾಜ್ಯದ ಆಡಳಿತಾತ್ಮಕ ಭಾಷೆ ಆಗಬೇಕು. ತುಳುವಿಗೆ ವಿಶೇಷ ಮಾನ್ಯತೆ ಸಿಗಬೇಕು ಎನ್ನುವ ತುಳುನಾಡಿನ ಬಂಧುಗಳ ಹೋರಾಟಕ್ಕೆ ನನ್ನದೂ ಧ್ವನಿ ಇದೆ’ ಎಂದು ಸಚಿವ ಕೋಟ ಟ್ವೀಟ್‌ನಲ್ಲಿ ಹೇಳಿದ್ದರೆ, ‘ನೀವು ತುಳುನಾಡಿನ ಉಸ್ತುವಾರಿ ಸಚಿವರು. ನೀವು ಮುಂದಾಳತ್ವ ವಹಿಸಬೇಕು. ಯಾವುದೇ ಬೇಡಿಕೆ, ವರದಿ, ಮನವಿಗಳು ಬೇಕಿಲ್ಲ. ಮುಂದಿನ ಅಧಿವೇಶನದಲ್ಲಿ ರಾಜ್ಯಭಾಷೆ ಎಂದು ಘೋಷಣೆಯಾಗಲಿ’ ಎಂದು ಮಹಿ ಮುಲ್ಕಿ ಎಂಬವರು ಒತ್ತಾಯಿಸಿ ಗಮನ ಸೆಳೆದಿದ್ದಾರೆ. ‘ತುಳುವಿಗೆ ಮಾನ್ಯತೆ ತೆಗೆದುಕೊಡುತ್ತೇನೆ ಎಂದೇಕೆ ಹೇಳುವುದಿಲ್ಲ’ ಎಂದು ಶಾಸಕರ ಟ್ವೀಟ್‌ಗಳಿಗೂ ಅನೇಕರು ಪ್ರಶ್ನಿಸಿದ್ದಾರೆ.

ಇದು ನಾಲ್ಕನೇ ಅಭಿಯಾನ

ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನದ ಬೇಡಿಕೆ ಮುಂದಿಟ್ಟು ನಾಲ್ಕನೆ ಬಾರಿ ಟ್ವೀಟ್ ಅಭಿಯಾನ ನಡೆದಿದೆ. ಕಳೆದ ಬಾರಿ ಅಭಿಯಾನ ನಡೆದಾಗ ಭಾರತದ ಟ್ರೆಂಡಿಂಗ್‌ನಲ್ಲಿ ನಂ.1 ಸ್ಥಾನದಲ್ಲಿತ್ತು. ವರ್ಷಕ್ಕೆ ಒಂದೆರಡು ಬಾರಿಯಂತೆ ಟ್ವೀಟ್ ಅಭಿಯಾನ ನಡೆಯುತ್ತಲೇ ಇದೆ. ಈ ಬಾರಿಯ ಅಭಿಯಾನದಲ್ಲಿ ಆಡಳಿತರೂಢ ಶಾಸಕರು ಕೂಡ ಟ್ವೀಟ್ ಮಾಡಿರುವುದು ವಿಶೇಷವಾಗಿತ್ತು.

ಪೆದ್ದ್ ತಾಂಕಿದಿನ ಅಪ್ಪೆ ಲೆಕ ಮಟ್ಟೆಲ್ ಡ್ ಮಾನಾಯಿನ ಅಪ್ಪೆ ಬಾಸೆಗ್ ರಾಜ್ಯ ಬಾಸೆದ ಮಾನಾದಿಗೆ ತಿಕ್ಕೊಡು ಪನ್ಪಿನ ಪೊರಂಬಾಟಗ್ ಎನ್ನ ಬೆರಿಸಾಯ ಉಂಡು. ತುಲು ಬಾಸೆನ್ 8ನೇ ಪರಿಚ್ಛೇದಗ್ ಸೇರ್ಪಾವರೆ ಸರಕಾದೊಟ್ಟುಗು ಪಾತೆರಕತೆ ಆವೊಂದುಂಡು.(1)#TuluofficialinKA_KL #ತುಳುನಾಡು #ತುಳುಭಾಷೆ #TuluTo8thSchedule

— Nalinkumar Kateel (@nalinkateel) June 13, 2021
​

ಒಂಜಾತ್ ತಾಂತ್ರಿಕ ದೋಷಲೆನ್ ಸರಿ ಮಲ್ತ್ದ್ ನಮ್ಮ ಅವಧಿಡ್ ತುಲು ಬಾಸೆಗ್ ರಾಜ್ಯದ ಅಧಿಕೃತ ಬಾಸೆ ಪನ್ಪುನ ಮಾನಾದಿಗೆ ಕೊರ್ಪಾವ. (2)#TuluofficialinKA_KL #ತುಳುನಾಡು #ತುಳುಭಾಷೆ #TuluTo8thSchedule

— Nalinkumar Kateel (@nalinkateel) June 13, 2021

#TuluOfficialinKA_KL Kindly support twitter compaign for TULU language to be considered as official language in Karnataka & Kerala @TheShilpaShetty @juniorbachchan pic.twitter.com/9kwabaKyNv

— Jagadeesha Kolya (@Jagkolya) June 13, 2021

"Tulu" it's not just a language, it's our pride, it's our culture, it's out emotion, it's everything To us we love our language and respect other KA languages too.. "NAMMA APPE BASHE"#TuluOfficialinKA_KL pic.twitter.com/CR5ai83w6d

— Prajwal kumar (@Prajwalkumar080) June 13, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X