Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಲಾಕ್‍ಡೌನ್ ಸಡಿಲಿಕೆ: ಬಂಧನದಿಂದ...

ಕೋವಿಡ್ ಲಾಕ್‍ಡೌನ್ ಸಡಿಲಿಕೆ: ಬಂಧನದಿಂದ ಬಿಡುಗಡೆ ಭಾವದಲ್ಲಿ ರಸ್ತೆಗಿಳಿದ ಜನ

ವಾರ್ತಾಭಾರತಿವಾರ್ತಾಭಾರತಿ14 Jun 2021 11:34 PM IST
share
ಕೋವಿಡ್ ಲಾಕ್‍ಡೌನ್ ಸಡಿಲಿಕೆ: ಬಂಧನದಿಂದ ಬಿಡುಗಡೆ ಭಾವದಲ್ಲಿ ರಸ್ತೆಗಿಳಿದ ಜನ

ಬೆಂಗಳೂರು, ಜೂ. 14: ಕೋವಿಡ್ ಸೋಂಕಿನ ಎರಡನೆ ಅಲೆ ತಡೆಗಟ್ಟಲು ಹೇರಿದ್ದ ಸುದೀರ್ಘ ಅವಧಿಯ ಕೋವಿಡ್ ಕರ್ಫ್ಯೂ, ಕೋವಿಡ್ ಲಾಕ್‍ಡೌನ್ ಭಾಗಶಃ ಸಡಿಲಿಕೆ ಹಿನ್ನೆಲೆಯಲ್ಲಿ `ಬಂಧನದಿಂದ ಬಿಡುಗಡೆ' ಸಿಕ್ಕ ಭಾವನೆಯಲ್ಲಿ ಜನತೆ ರಸ್ತೆಗಿಳಿದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ 20 ಜಿಲ್ಲೆಗಳಲ್ಲಿಯೂ ಜನಸಂದಣಿ ಕಂಡುಬಂತು.

ಸುಮಾರು ಎರಡು ತಿಂಗಳಿಂದ ಜನರಿಲ್ಲದೆ ಬಿಕೋ ಎನ್ನುತ್ತಿದ್ದ ರಸ್ತೆಗಳಲ್ಲಿ ಸಂಚಾರ ಆರಂಭವಾಗಿದ್ದು, ದ್ವಿಚಕ್ರ ವಾಹನಗಳು, ಕಾರು, ಆಟೋರಿಕ್ಷಾ, ಟ್ಯಾಕ್ಸಿ ಸಹಿತ ಹಲವು ವಾಹನಗಳು ರಸ್ತೆಗಿಳಿದವು. ಕೋವಿಡ್ ಲಾಕ್‍ಡೌನ್ ಸಡಿಲಿಸಿರುವ 20 ಜಿಲ್ಲೆಗಳಲ್ಲಿ ಜನರು ಕೋವಿಡ್ ಸೋಂಕು ಮರೆತು ಮುಗಿಬಿದ್ದಂತೆ ಕಾಣುತ್ತಿತ್ತು. ವಾಹನ ಸಂಚಾರ, ಜನಸಂದಣಿ ಹೆಚ್ಚಾಗಿರುವುದು ಸೋಂಕಿನ ಆತಂಕವನ್ನು ಸೃಷ್ಟಿಸಿದೆ.

ಬೆಂಗಳೂರು ಸೇರಿದಂತೆ ರಾಜ್ಯದ 20 ಜಿಲ್ಲೆಗಳಲ್ಲಿ ಜೂ.21ರ ವರೆಗೆ ಅನ್ವಯವಾಗುವಂತೆ ಕೋವಿಡ್-19 ಪಾಸಿಟಿವಿಟಿ ದರ ಕಡಿಮೆ ಇರುವ ಕಡೆ ಲಾಕ್‍ಡೌನ್ ವಿನಾಯಿತಿಯನ್ನು ರಾಜ್ಯ ಸರಕಾರ ಘೋಷಿಸಿದೆ. ಆದರೆ, ರಾಜ್ಯಾದ್ಯಂತ ವಾರಾಂತ್ಯದ ಕರ್ಫ್ಯೂ, ರಾತ್ರಿ ಕರ್ಫ್ಯೂ ಮುಂದುವರಿಸಿದ್ದು, ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಚಾರ, ಖಾಸಗಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿದೆ.

ದಿನ ಸಹಿತ ಎಲ್ಲ ಅಂಗಡಿ ಮುಗ್ಗಟ್ಟುಗಳು ಬೆಳಗ್ಗೆ 6ರಿಂದ ಮಧ್ಯಾಹ್ನ 2ಗಂಟೆಯ ವರೆಗೆ ಅವಕಾಶ ಕಲ್ಪಿಸಿದ್ದು, ಎಂದಿನಂತೆ ತೆರೆದಿದ್ದು ವಾಣಿಜ್ಯ ಚಟುವಟಿಕೆಗಳು ಆರಂಭವಾಗತೊಡಗಿವೆ. ಅಂಗಡಿ ಮುಗ್ಗಟ್ಟುಗಳು, ಹೊಟೇಲ್ ರೆಸ್ಟೋರೆಂಟ್‍ಗಳ ಬಳಿ ಗ್ರಾಹಕರ ಸಂಖ್ಯೆ ಬೆರಳಿಕೆಯಷ್ಟಿತ್ತು. ಕೆಲವುಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.

ಲಾಕ್‍ಡೌನ್ ಸಡಿಲಿಕೆ ಬೆನ್ನಲ್ಲೆ ಹಳ್ಳಿಗಳಿಗೆ ತೆರಳಿದ್ದ ಸಾವಿರಾರು ಮಂದಿ ಸಾರ್ವಜನಿಕರು ನಿನ್ನೆಯಿಂದಲೇ ರಾಜಧಾನಿ ಬೆಂಗಳೂರು ಸೇರಿದಂತೆ ನಗರಗಳಿಗೆ ಆಗಮಿಸತೊಡಗಿದ್ದು, ಆರ್ಥಿಕ ಚಟುವಟಿಕೆಗಳು ಪುನರ್ ಆರಂಭವಾಗಿವೆ. ಊರುಗಳಿಗೆ ತೆರಳಿದ್ದ ಜನರು ಸಿಕ್ಕ-ಸಿಕ್ಕ ವಾಹನಗಳಲ್ಲಿ ಬೆಂಗಳೂರಿಗೆ ಈಗಾಗಲೇ ಬರಲಾರಂಭಿಸಿದ್ದು ಹಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಬೆಂ.ಗ್ರಾಮಾಂತರ, ಮಂಡ್ಯ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಜೂ.21ರ ಬೆಳಗ್ಗೆ 6ಗಂಟೆಯ ವರೆಗೆ ಲಾಕ್‍ಡೌನ್ ಹೇರಲಾಗಿದ್ದು, ಅಗತ್ಯ ಸೇವೆಗಳನ್ನು ಹೊರತುಪಸಿದರೆ ಇತರೆ ಎಲ್ಲ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಅಲ್ಲದೆ, ರಾತ್ರಿ 7 ಗಂಟೆಯಿಂದ ಬೆಳಗ್ಗೆ 5ಗಂಟೆಯ ವರೆಗೆ ರಾತ್ರಿ ಕರ್ಫ್ಯೂ ಹಾಗೂ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವಾರಂತ್ಯದ ಕರ್ಫ್ಯೂ ವಿಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X